ಬೆಂಗಳೂರು: ತಮ್ಮ ಸರ್ಕಾರ ಉರುಳಿಸಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾದ ಕಿಂಗ್ಪಿನ್ಗಳನ್ನು ಮಟ್ಟ ಹಾಕಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಿರ್ಧರಿಸಿದ್ದು, ಈ ಸಂಬಂಧ ಬೆಂಗಳೂರು ಅಪರಾಧ ವಿಭಾಗದ ನೂತನ ಹೆಚ್ಚುವರಿ ಆಯುಕ್ತರಾಗಿ ನೇಮಕಗೊಂಡಿರುವ ಅಲೋಕ್ ಕುಮಾರ್ ಅವರಿಗೆ ಸೂಚನೆ ನೀಡಿದ್ದಾರೆ.
ಶನಿವಾರ ಬೆಳಗಾವಿಗೆ ತೆರಳಿದ್ದ ವೇಳೆ ಸದ್ಯ ಅಲ್ಲಿಯೇ ಪಶ್ಚಿಮ ವಲಯದ ಐಜಿಪಿಯಾಗಿರುವ ಅಲೋಕ್ ಕುಮಾರ್ ಅವರೊಂದಿಗೆ ಕುಮಾರಸ್ವಾಮಿ ಅವರು ಕೆಲ ನಿಮಿಷಗಳ ಕಾಲ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು ಎಂದು ತಿಳಿದು ಬಂದಿದೆ. ರಾಜಧಾನಿ ಬೆಂಗಳೂರಿಗೆ ಬಂದು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ನಗರದಲ್ಲಿ ಹೆಚ್ಚುತ್ತಿರುವ ಇಸ್ಪೀಟ್ ಜೂಜು, ಅಕ್ರಮ ಲಾಟರಿ ದಂಧೆ, ಹೈಟೆಕ್ ವೇಶ್ಯಾವಾಟಿಗೆ, ಮೀಟರ್ ಬಡ್ಡಿ ಮಾಫಿಯಾಗಳಲ್ಲಿ ತೊಡಗಿಸಿಕೊಂಡವರಿಗೆ ಬುದ್ಧಿ ಕಲಿಸುವ ಮೂಲಕ ಕಡಿವಾಣ ಹಾಕಬೇಕು. ಯಾವುದೇ ಕಾರಣಕ್ಕೂ ಮೃದು ಧೋರಣೆ ತಾಳದೆ, ಯಾವುದೇ ಮುಲಾಜು ನೋಡದೆ ಕಠಿಣ ಕ್ರಮ ಕೈಗೊಳ್ಳಿ.
ನಿಮಗೆ ಬೇಕಾದ ಎಲ್ಲ ಸಹಕಾರ ನೀಡಲಾಗುವುದು ಎಂಬ ಮಾತನ್ನು ಕುಮಾರಸ್ವಾಮಿ ಅವರು ಹೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ, ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ಹುನ್ನಾರ ನಡೆಸಿದ್ದಾರೆ ಎನ್ನಲಾದ ಕಿಂಗ್ಪಿನ್ಗಳಿಗೆ ನಡುಕ ಉಂಟಾಗಿದೆ. ಅಲೋಕ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದ ತಕ್ಷಣವೇ ಕಾರ್ಯಾರಂಭ ಮಾಡಲಿದ್ದಾರೆ ಎನ್ನಲಾಗಿದೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…