ಬೆಂಗಳೂರು: ತಮ್ಮ ಸರ್ಕಾರ ಉರುಳಿಸಲು ಪ್ರಯತ್ನಿಸುತ್ತಿದ್ದಾರೆ ಎನ್ನಲಾದ ಕಿಂಗ್ಪಿನ್ಗಳನ್ನು ಮಟ್ಟ ಹಾಕಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಿರ್ಧರಿಸಿದ್ದು, ಈ ಸಂಬಂಧ ಬೆಂಗಳೂರು ಅಪರಾಧ ವಿಭಾಗದ ನೂತನ ಹೆಚ್ಚುವರಿ ಆಯುಕ್ತರಾಗಿ ನೇಮಕಗೊಂಡಿರುವ ಅಲೋಕ್ ಕುಮಾರ್ ಅವರಿಗೆ ಸೂಚನೆ ನೀಡಿದ್ದಾರೆ.
ಶನಿವಾರ ಬೆಳಗಾವಿಗೆ ತೆರಳಿದ್ದ ವೇಳೆ ಸದ್ಯ ಅಲ್ಲಿಯೇ ಪಶ್ಚಿಮ ವಲಯದ ಐಜಿಪಿಯಾಗಿರುವ ಅಲೋಕ್ ಕುಮಾರ್ ಅವರೊಂದಿಗೆ ಕುಮಾರಸ್ವಾಮಿ ಅವರು ಕೆಲ ನಿಮಿಷಗಳ ಕಾಲ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು ಎಂದು ತಿಳಿದು ಬಂದಿದೆ. ರಾಜಧಾನಿ ಬೆಂಗಳೂರಿಗೆ ಬಂದು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ನಗರದಲ್ಲಿ ಹೆಚ್ಚುತ್ತಿರುವ ಇಸ್ಪೀಟ್ ಜೂಜು, ಅಕ್ರಮ ಲಾಟರಿ ದಂಧೆ, ಹೈಟೆಕ್ ವೇಶ್ಯಾವಾಟಿಗೆ, ಮೀಟರ್ ಬಡ್ಡಿ ಮಾಫಿಯಾಗಳಲ್ಲಿ ತೊಡಗಿಸಿಕೊಂಡವರಿಗೆ ಬುದ್ಧಿ ಕಲಿಸುವ ಮೂಲಕ ಕಡಿವಾಣ ಹಾಕಬೇಕು. ಯಾವುದೇ ಕಾರಣಕ್ಕೂ ಮೃದು ಧೋರಣೆ ತಾಳದೆ, ಯಾವುದೇ ಮುಲಾಜು ನೋಡದೆ ಕಠಿಣ ಕ್ರಮ ಕೈಗೊಳ್ಳಿ.
ನಿಮಗೆ ಬೇಕಾದ ಎಲ್ಲ ಸಹಕಾರ ನೀಡಲಾಗುವುದು ಎಂಬ ಮಾತನ್ನು ಕುಮಾರಸ್ವಾಮಿ ಅವರು ಹೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ, ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ಹುನ್ನಾರ ನಡೆಸಿದ್ದಾರೆ ಎನ್ನಲಾದ ಕಿಂಗ್ಪಿನ್ಗಳಿಗೆ ನಡುಕ ಉಂಟಾಗಿದೆ. ಅಲೋಕ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದ ತಕ್ಷಣವೇ ಕಾರ್ಯಾರಂಭ ಮಾಡಲಿದ್ದಾರೆ ಎನ್ನಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…