ನವದೆಹಲಿ : ಪೆಟ್ರೋಲ್, ಡೀಸೆಲ್ ದರ ದಿನದಿನಕ್ಕೂ ಕೂಡ ಏರಿಕೆಯಾಗಿ ಜನರಿಗೆ ಶಾಕ್ ನೀಡುತ್ತಿದೆ. ಭಾರತದ ವಿವಿಧ ನಗರಗಳಲ್ಲಿ ಪೆಟ್ರೋಲ್ ಡೀಸೆಲ್ ದರ ಪ್ರತೀ ಲೀಟರ್ ಗೆ ನೂರರ ಸಮೀಪ ಸಾಗುತ್ತಿದೆ.
ಇದೇ ವೇಳೆ ಪತಂಜಲಿ ಸಂಸ್ಥಾಪಕ ಬಾಬಾ ರಾಮದೇವ್ ಗುಡ್ ನ್ಯೂಸ್ ಒಂದನ್ನು ನೀಡಿದ್ದಾರೆ. ಒಂದು ವೇಳೆ ಸರ್ಕಾರ ಅನುಮತಿ ನೀಡಿ, ತೆರಿಗೆ ವಿನಾಯಿತಿ ನೀಡಿದಲ್ಲಿ 35ರಿಂದ 40 ರು.ಗೆ ಪೆಟ್ರೋಲ್ ನೀಡಲಾಗುವುದು ಎಂದು ಹೇಳಿದ್ದಾರೆ.
ಅಲ್ಲದೇ ಪೆಟ್ರೋಲ್, ಡೀಸೆಲ್ ಅನ್ನು ಅತ್ಯಂತ ಕಡಿಮೆ ಇರುವ ಜಿಎಸ್ ಟಿ ತೆರಿಗೆ ಸ್ಥರದಲ್ಲಿ ತರಬೇಕು ಎಂದು ಈ ವೇಳೆ ಅವರು ಹೇಳಿದ್ದಾರೆ. ಅತ್ಯಧಿಕ ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದ ಸದ್ಯ ಜನರ ಜೇಬು ಖಾಲಿಯಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
ಪೆಟ್ರೋಲ್, ಡೀಸೆಲ್ ಬೆಲೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಅವಧಿಯಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಏರಿಕೆಯಾಗಿ ದಾಖಲೆ ನಿರ್ಮಾಣವಾಗಿದೆ. ಬೆಲೆ ಏರಿಕೆಯನ್ನು ಖಂಡಿಸಿ ಕೆಲ ದಿನಗಳ ಹಿಂದಷ್ಟೇ ವಿಪಕ್ಷಗಳು ಭಾರತ್ ಬಂದ್ ಆಚರಿಸಿದ್ದವು. ಅದಾದ ನಂತರ ಪಶ್ಚಿಮ ಬಂಗಾಳ, ರಾಜಸ್ಥಾನ, ಕರ್ನಾಟದಲ್ಲಿ ಪೆಟ್ರೋಲ್ ಬೆಲೆಯನ್ನು ಇಳಿಕೆ ಮಾಡಲಾಗಿತ್ತು.
ಜಾಹಿರಾತು: ಪಂಡೀತ್ ಸುದರ್ಶನ್ ಭಟ್
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…