Featured

ಸರ್ಕಾರ ಜನರ ದಿಕ್ಕು ತಪ್ಪಿಸಲು ಲವ್ ಜಿಹಾದ್, ಗೋ ಹತ್ಯೆ ಕಾಯ್ದೆ ಜಾರಿಗೆ ಮುಂದಾಗಿದೆ : ಯುಟಿ ಖಾದರ್  -Vishwanews24

ಸರ್ಕಾರ ಜನರ ದಿಕ್ಕು ತಪ್ಪಿಸಲು ಲವ್ ಜಿಹಾದ್, ಗೋ ಹತ್ಯೆ ಕಾಯ್ದೆ ಜಾರಿಗೆ ಮುಂದಾಗಿದೆ : ಯುಟಿ ಖಾದರ್  -Vishwanews24

ಬೆಂಗಳೂರು: ಜನರ ಭಾವನೆಗಳಿಗೆ ಸರ್ಕಾರದ ಸ್ಪಂದನೆ ಇಲ್ಲದ ಕಾರಣ ಜನರ ದಿಕ್ಕು ತಪ್ಪಿಸಲು ಲವ್ ಜಿಹಾದ್, ಗೋ ಹತ್ಯೆ ಕಾಯ್ದೆ ಜಾರಿಗೆ ಮುಂದಾಗಿದೆ ಎಂದು ಮಾಜಿ ಸಚಿವ ಯುಟಿ ಖಾದರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಮಕ್ಕಳ ಶಿಕ್ಷಣ, ಬರ ಪರಿಹಾರ ಅತಿವೃಷ್ಟಿ, ಉದ್ಯೋಗ ಸೃಷ್ಟಿ ಇಲ್ಲ. ರಾಜ್ಯ ಸರ್ಕಾರ ಎಲ್ಲಾ ವಿಚಾರದಲ್ಲಿ ವಿಫಲವಾಗಿದೆ. ಗೋಹತ್ಯೆ ನಿಷೇಧ ಬದಲಾಗಿ ಗೋ ಮಾರಾಟ ನಿಷೇಧ ಕಾಯ್ದೆಯನ್ನು ಏಕೆ ಜಾರಿಗೆ ತರುವುದಿಲ್ಲ. ರೈತರು ಮುದಿ, ಪ್ರಯೋಜನಕ್ಕೆ ಬಾರದ ದನವನ್ನು ಮಾರಾಟ ಮಾಡುತ್ತಾರೆ. ಮನೆಯವರನ್ನು ನೋಡಿಕೊಂಡಂತೆ ಗೋವನ್ನು ನೋಡಿಕೊಳ್ಳಲಿ. ಸತ್ತಾಗ ಗೌರವಯುತ ಅಂತ್ಯಸಂಸ್ಕಾರ ನಡೆಸಲಿ ಎಂದು ಖಾದರ್ ಹೇಳಿದರು.

ಸರ್ಕಾರಕ್ಕೆ ಗೋವಿನ ಬಗ್ಗೆ ಕಾಳಜಿ ಇದ್ದರೆ ಇಂತಹ ಕಾನೂನು ಜಾರಿಗೊಳಿಸಲಿ ಎಂದ ಅವರು, ರೈತರ ವಿರೋಧಿ ಕಾನೂನು ಜಾರಿಗೆ ತರುವಾಗ ಈ ರೀತಿ ಚರ್ಚೆ ನಡೆದಿದ್ಯಾ? ಭೂ ಸುಧಾರಣಾ ಕಾಯ್ದೆ ಏಕೆ ಇಷ್ಟು ಚರ್ಚೆ ಮಾತನಾಡಿಲ್ಲ? ಆದರೆ ಗೋಹತ್ಯೆ ನಿಷೇಧ ಕಾಯ್ದೆ ಬಗ್ಗೆ ಇಷ್ಟು ಚರ್ಚೆ ಏಕೆ ಎಂದು ಪ್ರಶ್ನಿಸಿದರು. ಇನ್ನು ಗೋಹತ್ಯೆ ಕಾನೂನು ಇಂದಿರಾ ಗಾಂಧಿ ಕಾಲದಲ್ಲಿ ಜಾರಿಗೊಳಿಸಲಾಗಿದೆ ಎಂದ ಅವರು, ಕೇರಳ, ಮಿಜೊರಾಂ ಗೋವಾದಲ್ಲಿ ಗೋ ತಿನ್ನಬಹುದು. ನಿಜವಾದ ಕಾಳಜಿ ಇವರಲ್ಲಿ ಇದ್ದರೆ ದೇಶದಾದ್ಯಂತ ಏಕೆ ಕಾಯ್ದೆ ಜಾರಿಗೆ ತರಲ್ಲ ಎಂದು ಪ್ರಶ್ನಿಸಿದರು.

ಇನ್ನು ಮತಾಂತರ ಕಾಯ್ದೆ ಇರುವುದನ್ನು ಬಲಗೊಳಿಸಲಿ ಎಂದ ಖಾದರ್, ಅದರಲ್ಲಿ ಅರೇಬಿಕ್ ಪದ ಜಿಹಾದ್ ಬಳಕೆ ಏಕೆ? ಕಾನೂನಿನಲ್ಲಿ ಏನಿದೆ ಎಂಬುವುದನ್ನು ಸಾರ್ವಜನಿಕರಿಗೆ ಮಾಹಿತಿ ನೀಡಿ. ನಮ್ಮ ವಿರುದ್ಧ ರಾಜಕೀಯ ದುರುದ್ದೇಶ ಇದ್ದರೆ ಮಸೂದೆಯಲ್ಲಿ ಏನಿದೆ ನೋಡಿ ಪಕ್ಷ ಮುಂದಿನ ಹೆಜ್ಜೆ ಇಡಲಿದೆ ಎಂದರು. ಅಲ್ಲದೇ ಸಮಾಜ ಹಾಗೂ ದೇಶಕ್ಕೆ ಮಾರಕವಾದ ಕಾನೂನು ವಿರುದ್ಧ ನಮ್ಮ ಹೋರಾಟ ಎಂದರು.

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

6 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

7 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

7 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

7 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

7 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

8 hours ago