Featured

ಸರ್ಕಾರ ಜನರ ದಿಕ್ಕು ತಪ್ಪಿಸಲು ಲವ್ ಜಿಹಾದ್, ಗೋ ಹತ್ಯೆ ಕಾಯ್ದೆ ಜಾರಿಗೆ ಮುಂದಾಗಿದೆ : ಯುಟಿ ಖಾದರ್  -Vishwanews24

ಸರ್ಕಾರ ಜನರ ದಿಕ್ಕು ತಪ್ಪಿಸಲು ಲವ್ ಜಿಹಾದ್, ಗೋ ಹತ್ಯೆ ಕಾಯ್ದೆ ಜಾರಿಗೆ ಮುಂದಾಗಿದೆ : ಯುಟಿ ಖಾದರ್  -Vishwanews24

ಬೆಂಗಳೂರು: ಜನರ ಭಾವನೆಗಳಿಗೆ ಸರ್ಕಾರದ ಸ್ಪಂದನೆ ಇಲ್ಲದ ಕಾರಣ ಜನರ ದಿಕ್ಕು ತಪ್ಪಿಸಲು ಲವ್ ಜಿಹಾದ್, ಗೋ ಹತ್ಯೆ ಕಾಯ್ದೆ ಜಾರಿಗೆ ಮುಂದಾಗಿದೆ ಎಂದು ಮಾಜಿ ಸಚಿವ ಯುಟಿ ಖಾದರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಮಕ್ಕಳ ಶಿಕ್ಷಣ, ಬರ ಪರಿಹಾರ ಅತಿವೃಷ್ಟಿ, ಉದ್ಯೋಗ ಸೃಷ್ಟಿ ಇಲ್ಲ. ರಾಜ್ಯ ಸರ್ಕಾರ ಎಲ್ಲಾ ವಿಚಾರದಲ್ಲಿ ವಿಫಲವಾಗಿದೆ. ಗೋಹತ್ಯೆ ನಿಷೇಧ ಬದಲಾಗಿ ಗೋ ಮಾರಾಟ ನಿಷೇಧ ಕಾಯ್ದೆಯನ್ನು ಏಕೆ ಜಾರಿಗೆ ತರುವುದಿಲ್ಲ. ರೈತರು ಮುದಿ, ಪ್ರಯೋಜನಕ್ಕೆ ಬಾರದ ದನವನ್ನು ಮಾರಾಟ ಮಾಡುತ್ತಾರೆ. ಮನೆಯವರನ್ನು ನೋಡಿಕೊಂಡಂತೆ ಗೋವನ್ನು ನೋಡಿಕೊಳ್ಳಲಿ. ಸತ್ತಾಗ ಗೌರವಯುತ ಅಂತ್ಯಸಂಸ್ಕಾರ ನಡೆಸಲಿ ಎಂದು ಖಾದರ್ ಹೇಳಿದರು.

ಸರ್ಕಾರಕ್ಕೆ ಗೋವಿನ ಬಗ್ಗೆ ಕಾಳಜಿ ಇದ್ದರೆ ಇಂತಹ ಕಾನೂನು ಜಾರಿಗೊಳಿಸಲಿ ಎಂದ ಅವರು, ರೈತರ ವಿರೋಧಿ ಕಾನೂನು ಜಾರಿಗೆ ತರುವಾಗ ಈ ರೀತಿ ಚರ್ಚೆ ನಡೆದಿದ್ಯಾ? ಭೂ ಸುಧಾರಣಾ ಕಾಯ್ದೆ ಏಕೆ ಇಷ್ಟು ಚರ್ಚೆ ಮಾತನಾಡಿಲ್ಲ? ಆದರೆ ಗೋಹತ್ಯೆ ನಿಷೇಧ ಕಾಯ್ದೆ ಬಗ್ಗೆ ಇಷ್ಟು ಚರ್ಚೆ ಏಕೆ ಎಂದು ಪ್ರಶ್ನಿಸಿದರು. ಇನ್ನು ಗೋಹತ್ಯೆ ಕಾನೂನು ಇಂದಿರಾ ಗಾಂಧಿ ಕಾಲದಲ್ಲಿ ಜಾರಿಗೊಳಿಸಲಾಗಿದೆ ಎಂದ ಅವರು, ಕೇರಳ, ಮಿಜೊರಾಂ ಗೋವಾದಲ್ಲಿ ಗೋ ತಿನ್ನಬಹುದು. ನಿಜವಾದ ಕಾಳಜಿ ಇವರಲ್ಲಿ ಇದ್ದರೆ ದೇಶದಾದ್ಯಂತ ಏಕೆ ಕಾಯ್ದೆ ಜಾರಿಗೆ ತರಲ್ಲ ಎಂದು ಪ್ರಶ್ನಿಸಿದರು.

ಇನ್ನು ಮತಾಂತರ ಕಾಯ್ದೆ ಇರುವುದನ್ನು ಬಲಗೊಳಿಸಲಿ ಎಂದ ಖಾದರ್, ಅದರಲ್ಲಿ ಅರೇಬಿಕ್ ಪದ ಜಿಹಾದ್ ಬಳಕೆ ಏಕೆ? ಕಾನೂನಿನಲ್ಲಿ ಏನಿದೆ ಎಂಬುವುದನ್ನು ಸಾರ್ವಜನಿಕರಿಗೆ ಮಾಹಿತಿ ನೀಡಿ. ನಮ್ಮ ವಿರುದ್ಧ ರಾಜಕೀಯ ದುರುದ್ದೇಶ ಇದ್ದರೆ ಮಸೂದೆಯಲ್ಲಿ ಏನಿದೆ ನೋಡಿ ಪಕ್ಷ ಮುಂದಿನ ಹೆಜ್ಜೆ ಇಡಲಿದೆ ಎಂದರು. ಅಲ್ಲದೇ ಸಮಾಜ ಹಾಗೂ ದೇಶಕ್ಕೆ ಮಾರಕವಾದ ಕಾನೂನು ವಿರುದ್ಧ ನಮ್ಮ ಹೋರಾಟ ಎಂದರು.

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

11 hours ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

12 hours ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

13 hours ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

13 hours ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

14 hours ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

14 hours ago