Featured

ಸರ್ಕಾರ ದೈವ ನರ್ತಕರಿಗೆ ಮಾಸಾಶನ ನೀಡುವ ಮೂಲಕ ಮೂಢನಂಬಿಕೆಗೆ ಪ್ರಾಮುಖ್ಯತೆ ನೀಡಿದಂತಾಗಿದೆ : ಬಿ.ಟಿ.ಲಲಿತಾ ನಾಯ್ಕ್‌

ಸರ್ಕಾರ ದೈವ ನರ್ತಕರಿಗೆ ಮಾಸಾಶನ ನೀಡುವ ಮೂಲಕ ಮೂಢನಂಬಿಕೆಗೆ ಪ್ರಾಮುಖ್ಯತೆ ನೀಡಿದಂತಾಗಿದೆ

ಭೂತಾರಾಧನೆ ಸಮಯದಲ್ಲಿ ದೇವರು ಬರೋದು ಸತ್ಯ ಅಲ್ಲವೇ ಅಲ್ಲ

ದೈವ ನರ್ತಕರು ʻಓಹೋʼ ಅಂತ ಚಿರಾಡುವುದು, ಕುಣಿಯುವುದು ದೇವರು ಮೈಮೇಲೆ ಬರುವುದರಿಂದ ಅಲ್ಲ. ಅದಕ್ಕೆ ಬೇರೆ ಕಾರಣವಿದೆ

ರಿಷಬ್ ಶೆಟ್ಟಿ ಬಹಳಷ್ಟು ಬುದ್ದಿವಂತಿಕೆಯಿಂದ ಸಿನಿಮಾ ಮಾಡಿದ್ದಾನೆ..

ವಿಚಾರವಾದಿ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್‌ ಹೇಳಿಕೆ

ಹುಬ್ಬಳ್ಳಿ: ಭೂತಾರಾಧನೆ ಸಮಯದಲ್ಲಿ ದೇವರು ಬರೋದು ಸತ್ಯ ಅಲ್ಲವೇ ಅಲ್ಲ. ದೈವ ನರ್ತಕರಿಗೆ  ಸರ್ಕಾರ ಎರಡು ಸಾವಿರ ರೂಪಾಯಿ ನೀಡಬಾರದಿತ್ತು ಎಂದು ವಿಚಾರವಾದಿ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್‌ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ  ಮಾತನಾಡಿದ ಅವರು, ದೈವ ನರ್ತಕರ ಜೀವನಕ್ಕೆ ಬೇರೆ ದಾರಿ ತೋರಿಸಬೇಕು. ಅದರ ಬದಲಾಗಿ ಸರ್ಕಾರ ಮೂಢನಂಬಿಕೆಗೆ ಪ್ರಾಮುಖ್ಯತೆ ನೀಡಿದಂತಾಗಿದೆ. ದೈವ ನರ್ತಕರು ʻಓಹೋʼ ಅಂತ ಚಿರಾಡುವುದು, ಕುಣಿಯುವುದು ದೇವರು ಮೈಮೇಲೆ ಬರುವುದರಿಂದ ಅಲ್ಲ. ಅದಕ್ಕೆ ಬೇರೆ ಕಾರಣವಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ..ಎಸ್.ಡಿ.ಪಿ. ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಸೇರಿದಂತೆ ಮೂವರನ್ನುವಶಕ್ಕೆ ಪಡೆದ ಎನ್ಐಎ – Vishwanews24

ʻಕಾಂತಾರʼ ಚಿತ್ರದ ವಿವಾದ ಕುರಿತು ಮಾತನಾಡಿ, ರಿಷಬ್ ಶೆಟ್ಟಿ  ಪಕ್ಕಾ ವಿಚಾರವಾದಿ‌, ವೈಚಾರಿಕ ವ್ಯಕ್ತಿ. ಆದರೆ ತನ್ನ ವಿಚಾರವನ್ನು ನೇರವಾಗಿ ಹೇಳಿ ಹೊಡಿಸಿಕೊಳ್ಳಲು ಆತ ತಯಾರಿಲ್ಲ. ಹೀಗಾಗಿ ಈ ಮಾರ್ಗ ಅನುಸರಿಸಿದ್ದಾನೆ. ಆತ ತನ್ನ ವಿಚಾರವನ್ನು ನೇರವಾಗಿ ಹೇಳಿದ್ರೆ ಈ ಮೂರ್ಖ ಜನರು ಆತನನ್ನು ಹಿಡಿದು ಹೊಡೆಯುತ್ತಾರೆ, ಪರದೆಗೆ ಬೆಂಕಿ ಹಚ್ಚುತ್ತಾರೆ. ಕೆಲವು ಜನರ ತಲೆ ಅಷ್ಟರಮಟ್ಟಿಗೆ ಕೆಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸತ್ಯವನ್ನು ನೇರವಾಗಿ ಹೇಳಿದರೇ ಆತನನ್ನು ಕೊಂದ ಹಾಕುತ್ತಾರೆ, ಇದು ಆತನಿಗೆ ಬೇಕಿಲ್ಲ. ಆತ ಇನ್ನೂ ಬದುಕಬೇಕು ಅಂತ ಬಹಳಷ್ಟು ಬುದ್ದಿವಂತಿಕೆಯಿಂದ ಸಿನಿಮಾ ಮಾಡಿದ್ದಾನೆ. ಕಾಂತಾರ ಸಿನಿಮಾ ನೋಡಲು ಬಹಳಷ್ಟು ಬುದ್ಧಿವಂತಿಕೆ ಬೇಕು ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ..ಎಸ್.ಡಿ.ಪಿ. ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಸೇರಿದಂತೆ ಮೂವರನ್ನುವಶಕ್ಕೆ ಪಡೆದ ಎನ್ಐಎ – Vishwanews24

ʻಕಾಂತಾರʼ ಕಾಡಿನ ಜನರ ನೋವಿನ ಕಥೆ. ಅವರನ್ನು ಜಮೀನ್ದಾರಿ ಪದ್ಧತಿಯ ಮೂಲಕ ಒಕ್ಕಲೆಬ್ಬಿಸಲು ನೋಡಿದರು. ಅವರಿಗೆ ಬಹಳಷ್ಟು ಚಿತ್ರಹಿಂಸೆ ನೀಡಿದರು. ಹೀಗಾಗಿ ಅವರು ತಮ್ಮ ಉಳಿವಿಗಾಗಿ ಪೊಲೀಸರು ಮತ್ತು ಸರ್ಕಾರದ ಮೊರೆ ಹೋದರು. ಅವರಿಂದ ನ್ಯಾಯ ಸಿಗದೆ ಚಿರಾಡಿ, ಚಿರಾಡಿ ತಮ್ಮ ನೋವು ಹೊರಹಾಕಿದರು. ಅದನ್ನೇ ದೈವ ಅಂತ ನಂಬಲಾಗುತ್ತಿದೆ. ದೇಶದ ಬಾವುಟ… ಅದು ಕೇವಲ ಬಾವುಟ ಮಾತ್ರ. ಅದನ್ನು ಹರಿದು ಹಾಕಿದರು ಏನು ಆಗಲ್ಲ. ಆದರೆ ದೇಶದ ಜನರ ಕಾಪಾಡುತ್ತೆ ಎನ್ನುವ ಭಾವನೆ ಮುಖ್ಯ ಎಂದು ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago