Featured

ಸರ್ಕಾರ ದೈವ ನರ್ತಕರಿಗೆ ಮಾಸಾಶನ ನೀಡುವ ಮೂಲಕ ಮೂಢನಂಬಿಕೆಗೆ ಪ್ರಾಮುಖ್ಯತೆ ನೀಡಿದಂತಾಗಿದೆ : ಬಿ.ಟಿ.ಲಲಿತಾ ನಾಯ್ಕ್‌

ಸರ್ಕಾರ ದೈವ ನರ್ತಕರಿಗೆ ಮಾಸಾಶನ ನೀಡುವ ಮೂಲಕ ಮೂಢನಂಬಿಕೆಗೆ ಪ್ರಾಮುಖ್ಯತೆ ನೀಡಿದಂತಾಗಿದೆ

ಭೂತಾರಾಧನೆ ಸಮಯದಲ್ಲಿ ದೇವರು ಬರೋದು ಸತ್ಯ ಅಲ್ಲವೇ ಅಲ್ಲ

ದೈವ ನರ್ತಕರು ʻಓಹೋʼ ಅಂತ ಚಿರಾಡುವುದು, ಕುಣಿಯುವುದು ದೇವರು ಮೈಮೇಲೆ ಬರುವುದರಿಂದ ಅಲ್ಲ. ಅದಕ್ಕೆ ಬೇರೆ ಕಾರಣವಿದೆ

ರಿಷಬ್ ಶೆಟ್ಟಿ ಬಹಳಷ್ಟು ಬುದ್ದಿವಂತಿಕೆಯಿಂದ ಸಿನಿಮಾ ಮಾಡಿದ್ದಾನೆ..

ವಿಚಾರವಾದಿ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್‌ ಹೇಳಿಕೆ

ಹುಬ್ಬಳ್ಳಿ: ಭೂತಾರಾಧನೆ ಸಮಯದಲ್ಲಿ ದೇವರು ಬರೋದು ಸತ್ಯ ಅಲ್ಲವೇ ಅಲ್ಲ. ದೈವ ನರ್ತಕರಿಗೆ  ಸರ್ಕಾರ ಎರಡು ಸಾವಿರ ರೂಪಾಯಿ ನೀಡಬಾರದಿತ್ತು ಎಂದು ವಿಚಾರವಾದಿ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯ್ಕ್‌ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ  ಮಾತನಾಡಿದ ಅವರು, ದೈವ ನರ್ತಕರ ಜೀವನಕ್ಕೆ ಬೇರೆ ದಾರಿ ತೋರಿಸಬೇಕು. ಅದರ ಬದಲಾಗಿ ಸರ್ಕಾರ ಮೂಢನಂಬಿಕೆಗೆ ಪ್ರಾಮುಖ್ಯತೆ ನೀಡಿದಂತಾಗಿದೆ. ದೈವ ನರ್ತಕರು ʻಓಹೋʼ ಅಂತ ಚಿರಾಡುವುದು, ಕುಣಿಯುವುದು ದೇವರು ಮೈಮೇಲೆ ಬರುವುದರಿಂದ ಅಲ್ಲ. ಅದಕ್ಕೆ ಬೇರೆ ಕಾರಣವಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ..ಎಸ್.ಡಿ.ಪಿ. ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಸೇರಿದಂತೆ ಮೂವರನ್ನುವಶಕ್ಕೆ ಪಡೆದ ಎನ್ಐಎ – Vishwanews24

ʻಕಾಂತಾರʼ ಚಿತ್ರದ ವಿವಾದ ಕುರಿತು ಮಾತನಾಡಿ, ರಿಷಬ್ ಶೆಟ್ಟಿ  ಪಕ್ಕಾ ವಿಚಾರವಾದಿ‌, ವೈಚಾರಿಕ ವ್ಯಕ್ತಿ. ಆದರೆ ತನ್ನ ವಿಚಾರವನ್ನು ನೇರವಾಗಿ ಹೇಳಿ ಹೊಡಿಸಿಕೊಳ್ಳಲು ಆತ ತಯಾರಿಲ್ಲ. ಹೀಗಾಗಿ ಈ ಮಾರ್ಗ ಅನುಸರಿಸಿದ್ದಾನೆ. ಆತ ತನ್ನ ವಿಚಾರವನ್ನು ನೇರವಾಗಿ ಹೇಳಿದ್ರೆ ಈ ಮೂರ್ಖ ಜನರು ಆತನನ್ನು ಹಿಡಿದು ಹೊಡೆಯುತ್ತಾರೆ, ಪರದೆಗೆ ಬೆಂಕಿ ಹಚ್ಚುತ್ತಾರೆ. ಕೆಲವು ಜನರ ತಲೆ ಅಷ್ಟರಮಟ್ಟಿಗೆ ಕೆಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸತ್ಯವನ್ನು ನೇರವಾಗಿ ಹೇಳಿದರೇ ಆತನನ್ನು ಕೊಂದ ಹಾಕುತ್ತಾರೆ, ಇದು ಆತನಿಗೆ ಬೇಕಿಲ್ಲ. ಆತ ಇನ್ನೂ ಬದುಕಬೇಕು ಅಂತ ಬಹಳಷ್ಟು ಬುದ್ದಿವಂತಿಕೆಯಿಂದ ಸಿನಿಮಾ ಮಾಡಿದ್ದಾನೆ. ಕಾಂತಾರ ಸಿನಿಮಾ ನೋಡಲು ಬಹಳಷ್ಟು ಬುದ್ಧಿವಂತಿಕೆ ಬೇಕು ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ..ಎಸ್.ಡಿ.ಪಿ. ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಸೇರಿದಂತೆ ಮೂವರನ್ನುವಶಕ್ಕೆ ಪಡೆದ ಎನ್ಐಎ – Vishwanews24

ʻಕಾಂತಾರʼ ಕಾಡಿನ ಜನರ ನೋವಿನ ಕಥೆ. ಅವರನ್ನು ಜಮೀನ್ದಾರಿ ಪದ್ಧತಿಯ ಮೂಲಕ ಒಕ್ಕಲೆಬ್ಬಿಸಲು ನೋಡಿದರು. ಅವರಿಗೆ ಬಹಳಷ್ಟು ಚಿತ್ರಹಿಂಸೆ ನೀಡಿದರು. ಹೀಗಾಗಿ ಅವರು ತಮ್ಮ ಉಳಿವಿಗಾಗಿ ಪೊಲೀಸರು ಮತ್ತು ಸರ್ಕಾರದ ಮೊರೆ ಹೋದರು. ಅವರಿಂದ ನ್ಯಾಯ ಸಿಗದೆ ಚಿರಾಡಿ, ಚಿರಾಡಿ ತಮ್ಮ ನೋವು ಹೊರಹಾಕಿದರು. ಅದನ್ನೇ ದೈವ ಅಂತ ನಂಬಲಾಗುತ್ತಿದೆ. ದೇಶದ ಬಾವುಟ… ಅದು ಕೇವಲ ಬಾವುಟ ಮಾತ್ರ. ಅದನ್ನು ಹರಿದು ಹಾಕಿದರು ಏನು ಆಗಲ್ಲ. ಆದರೆ ದೇಶದ ಜನರ ಕಾಪಾಡುತ್ತೆ ಎನ್ನುವ ಭಾವನೆ ಮುಖ್ಯ ಎಂದು ತಿಳಿಸಿದ್ದಾರೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

2 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

4 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

4 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

5 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

5 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

5 hours ago