ಬೆಂಗಳೂರು: ನನ್ನ ಮೇಲೆ ಎಷ್ಟೇ ಒತ್ತಡ ಹಾಕಿ ಇಲ್ಲವೇ ಬ್ಲಾಕ್ಮೇಲ್ ಮಾಡಿದರೂ ಸರಿಯೇ ನನ್ನ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲಸರ್ಕಾರ ರಚನೆಗೆ ಕಾರಣರಾದ ಅನರ್ಹರಿಗೆ ಯಾವುದೇ ಕಾರಣಕ್ಕೂ ನಾನು ಕೊಟ್ಟ ಮಾತಿಗೆ ತಪ್ಪುವುದಿಲ್ಲ. ಎಂದು ಬಿಎಸ್ವೈ ಹೇಳಿದ್ದಾರೆ.
ಅನರ್ಹರಾದವರಿಗೆ ಉಪಚುನಾವಣೆಯಲ್ಲಿ ಟಿಕೆಟ್ ನೀಡಿ ಗೆಲ್ಲಿಸಿ ನಂತರ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳಬೇಕು. ಇತ್ತೀಚೆಗೆ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಮತ್ತು ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದ ವೇಳೆ ಇದೇ ಮಾತನ್ನು ಹೇಳಿದ್ದೇನೆ. ನಮ್ಮನ್ನು ನಂಬಿ ಬಂದವರಿಗೆ ವಿಷ ಕೊಡಲು ಸಾಧ್ಯವೇ ಎಂದು ಬಿಎಸ್ವೈ ಪ್ರಶ್ನಿಸಿದ್ದಾರೆ.
ಇದು ಅತ್ಯಂತ ವಿಷಮ ಪರಿಸ್ಥಿತಿ. ಕಾಂಗ್ರೆಸ್-ಜೆಡಿಎಸ್ನಿಂದ ಅನರ್ಹರಾದವರಿಗೆ ಟಿಕೆಟ್ ನೀಡಲೇಬೇಕು. ರಾಜೀನಾಮೆ ನೀಡುವ ಮುನ್ನ ಅವರಿಗೆ ಮಂತ್ರಿ ಸ್ಥಾನ ನೀಡುವ ವಾಗ್ದಾನ ಮಾಡಲಾಗಿತ್ತು. ಈಗ ಮಾತಿಗೆ ತಪ್ಪಿದರೆ ವಚನಭ್ರಷ್ಟರಾಗುತ್ತೇವೆ ಎಂದು ಬಿಎಸ್ವೈ ಹೇಳಿದ್ದಾರೆ.
ಬಿಜೆಪಿ ಸರ್ಕಾರ ರಚನೆಯಾಗಿದ್ದ ಈ ಅನರ್ಹ ಶಾಸಕರಿಂದ. ಅವರನ್ನು ನಾವು ನಡುಬೀದಿಯಲ್ಲಿ ಬಿಡಲು ಸಾಧ್ಯವೇ ಇಲ್ಲ. ನಾವು ಈಗ ಅನರ್ಹರನ್ನು ಸರಿಯಾಗಿ ನಡೆಸಿಕೊಳ್ಳದಿದ್ದರೆ ಮುಂದೆ ನಮ್ಮ ಪಕ್ಷವನ್ನು ಯಾರೊಬ್ಬರೂ ನಂಬುವುದಿಲ್ಲ. ಯಾರೇ ಎಷ್ಟೇ ಅಡ್ಡಿಪಡಿಸಿದರೂ ಸರಿಯೇ. ನಾನು ಕೊಟ್ಟ ಮಾತಿನಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…