ಬೆಂಗಳೂರು: ನನ್ನ ಮೇಲೆ ಎಷ್ಟೇ ಒತ್ತಡ ಹಾಕಿ ಇಲ್ಲವೇ ಬ್ಲಾಕ್ಮೇಲ್ ಮಾಡಿದರೂ ಸರಿಯೇ ನನ್ನ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲಸರ್ಕಾರ ರಚನೆಗೆ ಕಾರಣರಾದ ಅನರ್ಹರಿಗೆ ಯಾವುದೇ ಕಾರಣಕ್ಕೂ ನಾನು ಕೊಟ್ಟ ಮಾತಿಗೆ ತಪ್ಪುವುದಿಲ್ಲ. ಎಂದು ಬಿಎಸ್ವೈ ಹೇಳಿದ್ದಾರೆ.
ಅನರ್ಹರಾದವರಿಗೆ ಉಪಚುನಾವಣೆಯಲ್ಲಿ ಟಿಕೆಟ್ ನೀಡಿ ಗೆಲ್ಲಿಸಿ ನಂತರ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳಬೇಕು. ಇತ್ತೀಚೆಗೆ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಮತ್ತು ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದ ವೇಳೆ ಇದೇ ಮಾತನ್ನು ಹೇಳಿದ್ದೇನೆ. ನಮ್ಮನ್ನು ನಂಬಿ ಬಂದವರಿಗೆ ವಿಷ ಕೊಡಲು ಸಾಧ್ಯವೇ ಎಂದು ಬಿಎಸ್ವೈ ಪ್ರಶ್ನಿಸಿದ್ದಾರೆ.
ಇದು ಅತ್ಯಂತ ವಿಷಮ ಪರಿಸ್ಥಿತಿ. ಕಾಂಗ್ರೆಸ್-ಜೆಡಿಎಸ್ನಿಂದ ಅನರ್ಹರಾದವರಿಗೆ ಟಿಕೆಟ್ ನೀಡಲೇಬೇಕು. ರಾಜೀನಾಮೆ ನೀಡುವ ಮುನ್ನ ಅವರಿಗೆ ಮಂತ್ರಿ ಸ್ಥಾನ ನೀಡುವ ವಾಗ್ದಾನ ಮಾಡಲಾಗಿತ್ತು. ಈಗ ಮಾತಿಗೆ ತಪ್ಪಿದರೆ ವಚನಭ್ರಷ್ಟರಾಗುತ್ತೇವೆ ಎಂದು ಬಿಎಸ್ವೈ ಹೇಳಿದ್ದಾರೆ.
ಬಿಜೆಪಿ ಸರ್ಕಾರ ರಚನೆಯಾಗಿದ್ದ ಈ ಅನರ್ಹ ಶಾಸಕರಿಂದ. ಅವರನ್ನು ನಾವು ನಡುಬೀದಿಯಲ್ಲಿ ಬಿಡಲು ಸಾಧ್ಯವೇ ಇಲ್ಲ. ನಾವು ಈಗ ಅನರ್ಹರನ್ನು ಸರಿಯಾಗಿ ನಡೆಸಿಕೊಳ್ಳದಿದ್ದರೆ ಮುಂದೆ ನಮ್ಮ ಪಕ್ಷವನ್ನು ಯಾರೊಬ್ಬರೂ ನಂಬುವುದಿಲ್ಲ. ಯಾರೇ ಎಷ್ಟೇ ಅಡ್ಡಿಪಡಿಸಿದರೂ ಸರಿಯೇ. ನಾನು ಕೊಟ್ಟ ಮಾತಿನಿಂದ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…