Featured

ಸರ್ಕಾರ ಹೋದರೂ ಪಕ್ಷ ಉಳಿಸುವ ಕೆಲಸವನ್ನು ನಾವು ಮಾಡುತ್ತೇವೆ. ಮತ್ತೆ ಪಕ್ಷ ಸಂಘಟನೆ ಮಾಡಿ ಬಲಗೊಳಿಸುತ್ತೇವೆ : ದೇವೇಗೌಡ -Vishwanews24

ಬೆಂಗಳೂರು: ಅಧಿಕಾರ ಕಳೆದುಕೊಂಡ ಮಾತ್ರಕ್ಕೆ ಜೆಡಿಎಸ್​ಅನ್ನು ಮುಗಿಸಲು ಸಾಧ್ಯವಿಲ್ಲ. ಸರ್ಕಾರ ಹೋದರೂ ಪಕ್ಷ ಉಳಿಸುವ ಕೆಲಸವನ್ನು ನಾವು ಮಾಡುತ್ತೇವೆ. ಮತ್ತೆ ಪಕ್ಷ ಸಂಘಟನೆ ಮಾಡಿ ಬಲಗೊಳಿಸುತ್ತೇವೆ ಎಂಬ ವಿಶ್ವಾಸವನ್ನು ಜೆಡಿಎಸ್​ ವರಿಷ್ಠ ದೇವೇಗೌಡ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಹೆಚ್ ಡಿಡಿ, ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾದ ಅತೃಪ್ತ ಶಾಸಕರಿಗೆ ನೆಮ್ಮದಿಯಿಂದ ಇರಲು ಬಿಡುವುದಿಲ್ಲ.ಯಾರೇ ಏನೇ ಮಾಡಿದರೂ ಜೆಡಿಎಸ್ ಪಕ್ಷವನ್ನು ಮುಗಿಸಲಾಗಲ್ಲ, ಸಿಎಂ ಆಗಿ ಕುಮಾರಸ್ವಾಮಿ ನೋವು ತಿಂದಿದ್ದಾರೆ. ಎಷ್ಟು ಕಷ್ಟಪಟ್ಟಿದ್ದಾರೆ ಎಲ್ಲಾ ಗೊತ್ತಿದೆ.

14 ತಿಂಗಳು ಆಡಳಿತ ನಡೆಸಿ ಮನೆಗೆ ಹೋಗಬೇಕಲ್ಲ ಎಂಬ ನೋವು ಕಾಂಗ್ರೆಸ್​​ಗೂ ಇದೆ. ಸರ್ಕಾರ ಹೋಗಿದೆ ಏನು ಮಾಡಲು ಸಾಧ್ಯವಿಲ್ಲ. ಆದರೆ ಪಕ್ಷ ಇದೆ. ಅದನ್ನು ಸಂಘಟನೆ ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣೆಯಲ್ಲಿ ಸೋತ ಬಳಿಕ ನನ್ನ ಗುರಿ ಪಕ್ಷ ಸಂಘಟನೆ ಎಂಬುದನ್ನು ನಿರ್ಧರಿಸಿದ್ದೆ, ಅದರಂತೆ ಪಕ್ಷವನ್ನು ಬಲಗೊಳಿಸುತ್ತೇನೆ. ಇದಕ್ಕಾಗಿ ಆ.7ರಂದು ಅರಮನೆ ಆವರಣದಲ್ಲಿ ಕಾರ್ಯಕರ್ತರ ಸಮಾವೇಶ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಚುನಾವಣೆಗೆ ಈಗಲೇ ಸಿದ್ದರಾಗಬೇಕು. ಕುಮಾರಸ್ವಾಮಿ ಸರ್ಕಾರದ ಸಾಲಮನ್ನಾ, ಬಡವರ ಬಂಧು,‌ ಋಣಮುಕ್ತ ಕಾಯ್ದೆ ಬಗ್ಗೆ ಮನೆ ಮನೆಗೆ ಪ್ರಚಾರ ನಡೆಸಿ ಜನರ ಬಳಿ ಹೋಗುತ್ತೇವೆ ಎಂದರು.

ವಿಷಯಾಧಾರಿತವಾಗಿ ನಾವು ಬಿಜೆಪಿಗೆ ಬೆಂಬಲ ಕೊಡುತ್ತೇವೆ. ಹಣಕಾಸು ವಿಧೇಯಕಕ್ಕೆ ನಮ್ಮ ಬೆಂಬಲ ಇರುತ್ತದೆ. ಎಲ್ಲರೂ ಸರ್ವಾನುಮತದಿಂದ ಒಪ್ಪಿದರೆ ಬೆಂಬಲ ನೀಡುತ್ತೇವೆ ಎಂದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago