Featured

ಸರ್ಕಾರ ಹೋದರೂ ಪಕ್ಷ ಉಳಿಸುವ ಕೆಲಸವನ್ನು ನಾವು ಮಾಡುತ್ತೇವೆ. ಮತ್ತೆ ಪಕ್ಷ ಸಂಘಟನೆ ಮಾಡಿ ಬಲಗೊಳಿಸುತ್ತೇವೆ : ದೇವೇಗೌಡ -Vishwanews24

ಬೆಂಗಳೂರು: ಅಧಿಕಾರ ಕಳೆದುಕೊಂಡ ಮಾತ್ರಕ್ಕೆ ಜೆಡಿಎಸ್​ಅನ್ನು ಮುಗಿಸಲು ಸಾಧ್ಯವಿಲ್ಲ. ಸರ್ಕಾರ ಹೋದರೂ ಪಕ್ಷ ಉಳಿಸುವ ಕೆಲಸವನ್ನು ನಾವು ಮಾಡುತ್ತೇವೆ. ಮತ್ತೆ ಪಕ್ಷ ಸಂಘಟನೆ ಮಾಡಿ ಬಲಗೊಳಿಸುತ್ತೇವೆ ಎಂಬ ವಿಶ್ವಾಸವನ್ನು ಜೆಡಿಎಸ್​ ವರಿಷ್ಠ ದೇವೇಗೌಡ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಹೆಚ್ ಡಿಡಿ, ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾದ ಅತೃಪ್ತ ಶಾಸಕರಿಗೆ ನೆಮ್ಮದಿಯಿಂದ ಇರಲು ಬಿಡುವುದಿಲ್ಲ.ಯಾರೇ ಏನೇ ಮಾಡಿದರೂ ಜೆಡಿಎಸ್ ಪಕ್ಷವನ್ನು ಮುಗಿಸಲಾಗಲ್ಲ, ಸಿಎಂ ಆಗಿ ಕುಮಾರಸ್ವಾಮಿ ನೋವು ತಿಂದಿದ್ದಾರೆ. ಎಷ್ಟು ಕಷ್ಟಪಟ್ಟಿದ್ದಾರೆ ಎಲ್ಲಾ ಗೊತ್ತಿದೆ.

14 ತಿಂಗಳು ಆಡಳಿತ ನಡೆಸಿ ಮನೆಗೆ ಹೋಗಬೇಕಲ್ಲ ಎಂಬ ನೋವು ಕಾಂಗ್ರೆಸ್​​ಗೂ ಇದೆ. ಸರ್ಕಾರ ಹೋಗಿದೆ ಏನು ಮಾಡಲು ಸಾಧ್ಯವಿಲ್ಲ. ಆದರೆ ಪಕ್ಷ ಇದೆ. ಅದನ್ನು ಸಂಘಟನೆ ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣೆಯಲ್ಲಿ ಸೋತ ಬಳಿಕ ನನ್ನ ಗುರಿ ಪಕ್ಷ ಸಂಘಟನೆ ಎಂಬುದನ್ನು ನಿರ್ಧರಿಸಿದ್ದೆ, ಅದರಂತೆ ಪಕ್ಷವನ್ನು ಬಲಗೊಳಿಸುತ್ತೇನೆ. ಇದಕ್ಕಾಗಿ ಆ.7ರಂದು ಅರಮನೆ ಆವರಣದಲ್ಲಿ ಕಾರ್ಯಕರ್ತರ ಸಮಾವೇಶ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಚುನಾವಣೆಗೆ ಈಗಲೇ ಸಿದ್ದರಾಗಬೇಕು. ಕುಮಾರಸ್ವಾಮಿ ಸರ್ಕಾರದ ಸಾಲಮನ್ನಾ, ಬಡವರ ಬಂಧು,‌ ಋಣಮುಕ್ತ ಕಾಯ್ದೆ ಬಗ್ಗೆ ಮನೆ ಮನೆಗೆ ಪ್ರಚಾರ ನಡೆಸಿ ಜನರ ಬಳಿ ಹೋಗುತ್ತೇವೆ ಎಂದರು.

ವಿಷಯಾಧಾರಿತವಾಗಿ ನಾವು ಬಿಜೆಪಿಗೆ ಬೆಂಬಲ ಕೊಡುತ್ತೇವೆ. ಹಣಕಾಸು ವಿಧೇಯಕಕ್ಕೆ ನಮ್ಮ ಬೆಂಬಲ ಇರುತ್ತದೆ. ಎಲ್ಲರೂ ಸರ್ವಾನುಮತದಿಂದ ಒಪ್ಪಿದರೆ ಬೆಂಬಲ ನೀಡುತ್ತೇವೆ ಎಂದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago