ಬೆಂಗಳೂರು: ಅಧಿಕಾರ ಕಳೆದುಕೊಂಡ ಮಾತ್ರಕ್ಕೆ ಜೆಡಿಎಸ್ಅನ್ನು ಮುಗಿಸಲು ಸಾಧ್ಯವಿಲ್ಲ. ಸರ್ಕಾರ ಹೋದರೂ ಪಕ್ಷ ಉಳಿಸುವ ಕೆಲಸವನ್ನು ನಾವು ಮಾಡುತ್ತೇವೆ. ಮತ್ತೆ ಪಕ್ಷ ಸಂಘಟನೆ ಮಾಡಿ ಬಲಗೊಳಿಸುತ್ತೇವೆ ಎಂಬ ವಿಶ್ವಾಸವನ್ನು ಜೆಡಿಎಸ್ ವರಿಷ್ಠ ದೇವೇಗೌಡ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಹೆಚ್ ಡಿಡಿ, ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾದ ಅತೃಪ್ತ ಶಾಸಕರಿಗೆ ನೆಮ್ಮದಿಯಿಂದ ಇರಲು ಬಿಡುವುದಿಲ್ಲ.ಯಾರೇ ಏನೇ ಮಾಡಿದರೂ ಜೆಡಿಎಸ್ ಪಕ್ಷವನ್ನು ಮುಗಿಸಲಾಗಲ್ಲ, ಸಿಎಂ ಆಗಿ ಕುಮಾರಸ್ವಾಮಿ ನೋವು ತಿಂದಿದ್ದಾರೆ. ಎಷ್ಟು ಕಷ್ಟಪಟ್ಟಿದ್ದಾರೆ ಎಲ್ಲಾ ಗೊತ್ತಿದೆ.
14 ತಿಂಗಳು ಆಡಳಿತ ನಡೆಸಿ ಮನೆಗೆ ಹೋಗಬೇಕಲ್ಲ ಎಂಬ ನೋವು ಕಾಂಗ್ರೆಸ್ಗೂ ಇದೆ. ಸರ್ಕಾರ ಹೋಗಿದೆ ಏನು ಮಾಡಲು ಸಾಧ್ಯವಿಲ್ಲ. ಆದರೆ ಪಕ್ಷ ಇದೆ. ಅದನ್ನು ಸಂಘಟನೆ ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಚುನಾವಣೆಯಲ್ಲಿ ಸೋತ ಬಳಿಕ ನನ್ನ ಗುರಿ ಪಕ್ಷ ಸಂಘಟನೆ ಎಂಬುದನ್ನು ನಿರ್ಧರಿಸಿದ್ದೆ, ಅದರಂತೆ ಪಕ್ಷವನ್ನು ಬಲಗೊಳಿಸುತ್ತೇನೆ. ಇದಕ್ಕಾಗಿ ಆ.7ರಂದು ಅರಮನೆ ಆವರಣದಲ್ಲಿ ಕಾರ್ಯಕರ್ತರ ಸಮಾವೇಶ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಚುನಾವಣೆಗೆ ಈಗಲೇ ಸಿದ್ದರಾಗಬೇಕು. ಕುಮಾರಸ್ವಾಮಿ ಸರ್ಕಾರದ ಸಾಲಮನ್ನಾ, ಬಡವರ ಬಂಧು, ಋಣಮುಕ್ತ ಕಾಯ್ದೆ ಬಗ್ಗೆ ಮನೆ ಮನೆಗೆ ಪ್ರಚಾರ ನಡೆಸಿ ಜನರ ಬಳಿ ಹೋಗುತ್ತೇವೆ ಎಂದರು.
ವಿಷಯಾಧಾರಿತವಾಗಿ ನಾವು ಬಿಜೆಪಿಗೆ ಬೆಂಬಲ ಕೊಡುತ್ತೇವೆ. ಹಣಕಾಸು ವಿಧೇಯಕಕ್ಕೆ ನಮ್ಮ ಬೆಂಬಲ ಇರುತ್ತದೆ. ಎಲ್ಲರೂ ಸರ್ವಾನುಮತದಿಂದ ಒಪ್ಪಿದರೆ ಬೆಂಬಲ ನೀಡುತ್ತೇವೆ ಎಂದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…