Featured

ಸರ್ಕಾರ ಹೋದರೂ ಪಕ್ಷ ಉಳಿಸುವ ಕೆಲಸವನ್ನು ನಾವು ಮಾಡುತ್ತೇವೆ. ಮತ್ತೆ ಪಕ್ಷ ಸಂಘಟನೆ ಮಾಡಿ ಬಲಗೊಳಿಸುತ್ತೇವೆ : ದೇವೇಗೌಡ -Vishwanews24

ಬೆಂಗಳೂರು: ಅಧಿಕಾರ ಕಳೆದುಕೊಂಡ ಮಾತ್ರಕ್ಕೆ ಜೆಡಿಎಸ್​ಅನ್ನು ಮುಗಿಸಲು ಸಾಧ್ಯವಿಲ್ಲ. ಸರ್ಕಾರ ಹೋದರೂ ಪಕ್ಷ ಉಳಿಸುವ ಕೆಲಸವನ್ನು ನಾವು ಮಾಡುತ್ತೇವೆ. ಮತ್ತೆ ಪಕ್ಷ ಸಂಘಟನೆ ಮಾಡಿ ಬಲಗೊಳಿಸುತ್ತೇವೆ ಎಂಬ ವಿಶ್ವಾಸವನ್ನು ಜೆಡಿಎಸ್​ ವರಿಷ್ಠ ದೇವೇಗೌಡ ವ್ಯಕ್ತಪಡಿಸಿದ್ದಾರೆ.

ಜೆಡಿಎಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಹೆಚ್ ಡಿಡಿ, ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾದ ಅತೃಪ್ತ ಶಾಸಕರಿಗೆ ನೆಮ್ಮದಿಯಿಂದ ಇರಲು ಬಿಡುವುದಿಲ್ಲ.ಯಾರೇ ಏನೇ ಮಾಡಿದರೂ ಜೆಡಿಎಸ್ ಪಕ್ಷವನ್ನು ಮುಗಿಸಲಾಗಲ್ಲ, ಸಿಎಂ ಆಗಿ ಕುಮಾರಸ್ವಾಮಿ ನೋವು ತಿಂದಿದ್ದಾರೆ. ಎಷ್ಟು ಕಷ್ಟಪಟ್ಟಿದ್ದಾರೆ ಎಲ್ಲಾ ಗೊತ್ತಿದೆ.

14 ತಿಂಗಳು ಆಡಳಿತ ನಡೆಸಿ ಮನೆಗೆ ಹೋಗಬೇಕಲ್ಲ ಎಂಬ ನೋವು ಕಾಂಗ್ರೆಸ್​​ಗೂ ಇದೆ. ಸರ್ಕಾರ ಹೋಗಿದೆ ಏನು ಮಾಡಲು ಸಾಧ್ಯವಿಲ್ಲ. ಆದರೆ ಪಕ್ಷ ಇದೆ. ಅದನ್ನು ಸಂಘಟನೆ ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣೆಯಲ್ಲಿ ಸೋತ ಬಳಿಕ ನನ್ನ ಗುರಿ ಪಕ್ಷ ಸಂಘಟನೆ ಎಂಬುದನ್ನು ನಿರ್ಧರಿಸಿದ್ದೆ, ಅದರಂತೆ ಪಕ್ಷವನ್ನು ಬಲಗೊಳಿಸುತ್ತೇನೆ. ಇದಕ್ಕಾಗಿ ಆ.7ರಂದು ಅರಮನೆ ಆವರಣದಲ್ಲಿ ಕಾರ್ಯಕರ್ತರ ಸಮಾವೇಶ ಮಾಡುತ್ತೇವೆ. ಮುಂದಿನ ದಿನಗಳಲ್ಲಿ ಚುನಾವಣೆಗೆ ಈಗಲೇ ಸಿದ್ದರಾಗಬೇಕು. ಕುಮಾರಸ್ವಾಮಿ ಸರ್ಕಾರದ ಸಾಲಮನ್ನಾ, ಬಡವರ ಬಂಧು,‌ ಋಣಮುಕ್ತ ಕಾಯ್ದೆ ಬಗ್ಗೆ ಮನೆ ಮನೆಗೆ ಪ್ರಚಾರ ನಡೆಸಿ ಜನರ ಬಳಿ ಹೋಗುತ್ತೇವೆ ಎಂದರು.

ವಿಷಯಾಧಾರಿತವಾಗಿ ನಾವು ಬಿಜೆಪಿಗೆ ಬೆಂಬಲ ಕೊಡುತ್ತೇವೆ. ಹಣಕಾಸು ವಿಧೇಯಕಕ್ಕೆ ನಮ್ಮ ಬೆಂಬಲ ಇರುತ್ತದೆ. ಎಲ್ಲರೂ ಸರ್ವಾನುಮತದಿಂದ ಒಪ್ಪಿದರೆ ಬೆಂಬಲ ನೀಡುತ್ತೇವೆ ಎಂದರು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

14 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

14 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

15 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

16 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

16 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

16 hours ago