ಬೆಂಗಳೂರು : ನಟಿ ಪ್ರಿಯಾಂಕಾ ಉಪೇಂದ್ರ ಫೈರ್ (FIRE) ಸಂಸ್ಥೆಯಿಂದ ಹೊರ ಬಂದಿದ್ದಾರೆ. ಈ ಸಂಸ್ಥೆಯಲ್ಲಿ ಅಧ್ಯಕ್ಷೆಯಾಗರಾಗಿದ್ದ ಪ್ರಿಯಾಂಕ ಉಪೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಶ್ರುತಿ ಹರಿಹರನ್, ನಟ ಅರ್ಜುನ್ ಸರ್ಜಾ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ ನಂತರ ಈ ‘ಫೈರ್’ ಸಂಸ್ಥೆಯಲ್ಲಿ ಸದ್ಯ ಇವರ ರಾಜೀನಾಮೆಯನ್ನು ನೀಡಿರುವ ಹಿನ್ನಲೆಯಲ್ಲಿ ಸಾಕಷ್ಟು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.
ಫೈರ್ (FIRE) ಸಂಸ್ಥೆಯಿಂದ ಹೊರ ಬಂದ ನಂತರ ನಟಿ ಪ್ರಿಯಾಂಕಾ ಉಪೇಂದ್ರ ಮಾತನಾಡಿ ಸಂಸ್ಥೆಯ ಉದ್ದೇಶವೇ ಹಾದಿ ತಪ್ಪುತ್ತಿದೆ, ಫೈಯರ್ ಸಂಸ್ಥೆಯ ಸದಸ್ಯರ ಸಿದ್ಧಾಂತಗಳಿಗೂ ನನ್ನ ಸಿದ್ಧಾಂತಕ್ಕೂ ಹೊಂದಾಣಿಕೆ ಆಗಲಿಲ್ಲ. ಶ್ರುತಿ ಹರಿಹರನ್ #MeToo ಪ್ರಕರಣವನ್ನ ಬೇರೆ ರೀತಿಯಲ್ಲೇ ಬಗೆಹರಿಸಬಹುದಿತ್ತು.
ಅದನ್ನು ಈರೀತಿಯಾಗಿ ಹಾದಿರಂಪ ಬೀದಿರಂಪ ಮಾಡದೆ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳ ಬಹುದ್ದಿತ್ತು ಆದರೆ ಇದು ಫೈರ್ ಸಂಸ್ಥೆಯ ಉದ್ದೇಶವೇ ಅಲ್ಲ. ಎಲ್ಲವನ್ನೂ ಗುಟ್ಟಾಗಿ ಪರಿಹರಿಸುವ ಪರಿಕಲ್ಪನೆಯೊಂದಿಗೆ ಈ ಸಂಸ್ಥೆ ರೂಪುಗೊಂಡಿತ್ತು. ಆದರೆ ಎಲ್ಲೋ ಒಂದು ಕಡೆ ಉದ್ದೇಶ ದಾರಿ ತಪ್ಪುತ್ತಿದೆ ಎಂದು ಅನಿಸಿದಾಗ ಹೊರ ಬಂದೆ ಎಂದು ಪ್ರಿಯಾಂಕ ಹೇಳಿದರು ಚಿತ್ರರಂಗದಲ್ಲಿ ಹೆಣ್ಣು ಮಕ್ಕಳಿಗೆ ಸಹಾಯ ಮಾಡುವ ಹಾಗೂ ಅವರ ಮೇಲಾಗುವ ಲೈಂಗಿಕ ದೌರ್ಜನ್ಯವನ್ನು ತಡೆಯುವ ಉದ್ದೇಶದಿಂದಲೇ ಫೈರ್ ಸಂಸ್ಥೆಯನ್ನು ಹುಟ್ಟುಹಾಕಲಾಗಿತ್ತು’ ಎಂದು ಹೇಳಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…