ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ರವರು ಈ ಬಾರಿ ಮಂಡಿಸಿರುವ ಬಜೆಟ್ ಯುವಸ್ನೇಹಿ, ರೈತ ಸ್ನೇಹಿಯಾಗಿ ಸಪ್ತ ಸೂತ್ರಗಳೊಂದಿಗೆ ಸರ್ವ ಸ್ಪರ್ಶಿ ಸರ್ವ ವ್ಯಾಪಿ ಹಸಿರು ಬಜೆಟ್ ಆಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಭಧ್ರಾ ಮೇಲ್ದಂಡೆ ಯೋಜನೆಗೆ ರೂ.೫,೩೦೦ ಕೋಟಿ ವಿನಿಯೋಗಿಸುವ ಉತ್ತಮ ದೂರದರ್ಶಿತ್ವದ ಯೋಜನೆ ಹಾಕಲಾಗಿದೆ. ಜಗತ್ತಿನೆಲ್ಲೆಡೆ ಆರ್ಥಿಕ ಹಿಂಜರಿತ ಇದ್ದರೂ ದೇಶದ ಆರ್ಥಿಕತೆಯನ್ನು ಮೇಲೆತ್ತುವ ಸಲುವಾಗಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಕೋವಿಡ್ ಸಂದರ್ಭದಲ್ಲಿ ಘೋಷಿಸಿರುವ ಸಣ್ಣ ಉದ್ದಿಮೆದಾರರಿಗೆ ನೀಡುವ ರೂ.೧೦ ಲಕ್ಷ ಸಾಲ ಯೋಜನೆಯಾದ ‘ಕ್ರೆಡಿಟ್ ಗ್ಯಾರಂಟಿ’ಯನ್ನು ಮುಂದುವರಿಸಲಾಗಿದೆ. ಜೊತೆಗೆ ರಾಷ್ಟಿçÃಯ ಆಹಾರ ಭದ್ರತಾ ಕಾಯ್ದೆಯಡಿ ಘೋಷಿಸಿರುವ ಬಡವರಿಗೆ ಉಚಿತ ಪಡಿತರ ನೀಡುವ ‘ಶ್ರೀ ಅನ್ನ ಯೋಜನೆ’ಯನ್ನು ಮುಂದುವರಿಸಲಾಗಿದೆ. ೫೦ ಹೊಸ ವಿಮಾನ ನಿಲ್ದಾಣಗಳ ಘೋಷಣೆ ಸಹಿತ ೩೦ ರಾಜ್ಯಗಳಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಯೋಜನೆಯ ಮೂಲಕ ಸಣ್ಣ ಉದ್ದಿಮೆದಾರರಿಗೆ ಪ್ರೋತ್ಸಾಹ ನೀಡಲಾಗಿದೆ. ಕುಶಲಕರ್ಮಿಗಳಿಗೆ ‘ವಿಶ್ವಕರ್ಮ ಕೌಶಲ್ಯ ಅಭಿವೃದ್ಧಿ’ ಯೋಜನೆ ಜಾರಿಗೊಳಿಸಲಾಗಿದೆ. ಎಲೆಕ್ಟಿçಕ್ ವಾಹನಗಳಿಗೆ ಹೆಚ್ಚಿನ ಉತ್ತೇಜನ ನೀಡುವ ಜೊತೆಗೆ ವಾಹನ ಗುಜರಿ ನೀತಿಯಡಿ ಹಳೆ ಸರ್ಕಾರಿ ವಾಹನಗಳನ್ನು ಬದಲಾಯಿಸುವಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ.
ಮಹಿಳಾ ಉದ್ದಿಮೆದಾರರಿಗೆ ‘ಮಹಿಳಾ ಸಮ್ಮಾನ್’ ಯೋಜನೆ ಜಾರಿಗೊಳಿಸಲಾಗಿದೆ. ಮಧ್ಯಮ ವರ್ಗದ ಜನತೆಗೆ ಆದಾಯ ತೆರಿಗೆಯಲ್ಲಿ ಬಹುನಿರೀಕ್ಷಿತ ವಿನಾಯಿತಿ ಘೋಷಿಸಲಾಗಿದೆ. ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿ; ಕಟ್ಟಕಡೆಯ ಜನತೆಯನ್ನು ತಲುಪುವುದು; ಮೂಲಸೌಕರ್ಯ; ಸಾಮರ್ಥ್ಯದ ಸದ್ಬಳಕೆ; ಪರಿಸರ ಸ್ನೇಹಿ ಅಭಿವೃದ್ಧಿ; ಯುವಶಕ್ತಿಗೆ ಉತ್ತೇಜನ; ಅರ್ಥಿಕ ಸುಧಾರಣೆ, ಈ ಸಪ್ತ ಮಂತ್ರಗಳ ಭದ್ರಬುನಾದಿಯಲ್ಲಿ ಮಂಡಿಸಿರುವ ಕೇಂದ್ರ ಬಜೆಟ್ ಜನಮಾನಸದಲ್ಲಿ ಹೊಸ ಭರವಸೆ ಮೂಡಿಸಲಿದೆ.
ದೇಶದ ಆರ್ಥಿಕತೆಯನ್ನು ಸದೃಢಗೊಳಿಸುವ ಜೊತೆಗೆ ದೇಶದ ಮೂಲಭೂತ ಸೌಕರ್ಯಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ, ಸಾಮಾನ್ಯ ಜನತೆ, ಕೃಷಿಕರು, ಉದ್ಯಮ, ಯುವ ಮತ್ತು ಮಹಿಳಾ ವರ್ಗಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿರುವ ಅತ್ಯುತ್ತಮ ಬಜೆಟ್ ಇದಾಗಿದೆ ಎಂದು ಕುಯಿಲಾಡಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…