Featured

ಸರ್ವ ಸ್ಪರ್ಶಿ ಸರ್ವ ವ್ಯಾಪಿ ಹಸಿರು ಬಜೆಟ್ – ಕುಯಿಲಾಡಿ -Vishwanews24

ಸರ್ವ ಸ್ಪರ್ಶಿ ಸರ್ವ ವ್ಯಾಪಿ ಹಸಿರು ಬಜೆಟ್ – ಕುಯಿಲಾಡಿ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ರವರು ಈ ಬಾರಿ ಮಂಡಿಸಿರುವ ಬಜೆಟ್ ಯುವಸ್ನೇಹಿ, ರೈತ ಸ್ನೇಹಿಯಾಗಿ ಸಪ್ತ ಸೂತ್ರಗಳೊಂದಿಗೆ ಸರ್ವ ಸ್ಪರ್ಶಿ ಸರ್ವ ವ್ಯಾಪಿ ಹಸಿರು ಬಜೆಟ್ ಆಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಭಧ್ರಾ ಮೇಲ್ದಂಡೆ ಯೋಜನೆಗೆ ರೂ.೫,೩೦೦ ಕೋಟಿ ವಿನಿಯೋಗಿಸುವ ಉತ್ತಮ ದೂರದರ್ಶಿತ್ವದ ಯೋಜನೆ ಹಾಕಲಾಗಿದೆ. ಜಗತ್ತಿನೆಲ್ಲೆಡೆ ಆರ್ಥಿಕ ಹಿಂಜರಿತ ಇದ್ದರೂ ದೇಶದ ಆರ್ಥಿಕತೆಯನ್ನು ಮೇಲೆತ್ತುವ ಸಲುವಾಗಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕೋವಿಡ್ ಸಂದರ್ಭದಲ್ಲಿ ಘೋಷಿಸಿರುವ ಸಣ್ಣ ಉದ್ದಿಮೆದಾರರಿಗೆ ನೀಡುವ ರೂ.೧೦ ಲಕ್ಷ ಸಾಲ ಯೋಜನೆಯಾದ ‘ಕ್ರೆಡಿಟ್ ಗ್ಯಾರಂಟಿ’ಯನ್ನು ಮುಂದುವರಿಸಲಾಗಿದೆ. ಜೊತೆಗೆ ರಾಷ್ಟಿçÃಯ ಆಹಾರ ಭದ್ರತಾ ಕಾಯ್ದೆಯಡಿ ಘೋಷಿಸಿರುವ ಬಡವರಿಗೆ ಉಚಿತ ಪಡಿತರ ನೀಡುವ ‘ಶ್ರೀ ಅನ್ನ ಯೋಜನೆ’ಯನ್ನು ಮುಂದುವರಿಸಲಾಗಿದೆ. ೫೦ ಹೊಸ ವಿಮಾನ ನಿಲ್ದಾಣಗಳ ಘೋಷಣೆ ಸಹಿತ ೩೦ ರಾಜ್ಯಗಳಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಯೋಜನೆಯ ಮೂಲಕ ಸಣ್ಣ ಉದ್ದಿಮೆದಾರರಿಗೆ ಪ್ರೋತ್ಸಾಹ ನೀಡಲಾಗಿದೆ. ಕುಶಲಕರ್ಮಿಗಳಿಗೆ ‘ವಿಶ್ವಕರ್ಮ ಕೌಶಲ್ಯ ಅಭಿವೃದ್ಧಿ’ ಯೋಜನೆ ಜಾರಿಗೊಳಿಸಲಾಗಿದೆ. ಎಲೆಕ್ಟಿçಕ್ ವಾಹನಗಳಿಗೆ ಹೆಚ್ಚಿನ ಉತ್ತೇಜನ ನೀಡುವ ಜೊತೆಗೆ ವಾಹನ ಗುಜರಿ ನೀತಿಯಡಿ ಹಳೆ ಸರ್ಕಾರಿ ವಾಹನಗಳನ್ನು ಬದಲಾಯಿಸುವಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ.

ಮಹಿಳಾ ಉದ್ದಿಮೆದಾರರಿಗೆ ‘ಮಹಿಳಾ ಸಮ್ಮಾನ್’ ಯೋಜನೆ ಜಾರಿಗೊಳಿಸಲಾಗಿದೆ. ಮಧ್ಯಮ ವರ್ಗದ ಜನತೆಗೆ ಆದಾಯ ತೆರಿಗೆಯಲ್ಲಿ ಬಹುನಿರೀಕ್ಷಿತ ವಿನಾಯಿತಿ ಘೋಷಿಸಲಾಗಿದೆ. ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿ; ಕಟ್ಟಕಡೆಯ ಜನತೆಯನ್ನು ತಲುಪುವುದು; ಮೂಲಸೌಕರ್ಯ; ಸಾಮರ್ಥ್ಯದ ಸದ್ಬಳಕೆ; ಪರಿಸರ ಸ್ನೇಹಿ ಅಭಿವೃದ್ಧಿ; ಯುವಶಕ್ತಿಗೆ ಉತ್ತೇಜನ; ಅರ್ಥಿಕ ಸುಧಾರಣೆ, ಈ ಸಪ್ತ ಮಂತ್ರಗಳ ಭದ್ರಬುನಾದಿಯಲ್ಲಿ ಮಂಡಿಸಿರುವ ಕೇಂದ್ರ ಬಜೆಟ್ ಜನಮಾನಸದಲ್ಲಿ ಹೊಸ ಭರವಸೆ ಮೂಡಿಸಲಿದೆ.

ದೇಶದ ಆರ್ಥಿಕತೆಯನ್ನು ಸದೃಢಗೊಳಿಸುವ ಜೊತೆಗೆ ದೇಶದ ಮೂಲಭೂತ ಸೌಕರ್ಯಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ, ಸಾಮಾನ್ಯ ಜನತೆ, ಕೃಷಿಕರು, ಉದ್ಯಮ, ಯುವ ಮತ್ತು ಮಹಿಳಾ ವರ್ಗಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿರುವ ಅತ್ಯುತ್ತಮ ಬಜೆಟ್ ಇದಾಗಿದೆ ಎಂದು ಕುಯಿಲಾಡಿ ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

10 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

10 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago