ಬೆಂಗಳೂರು: ಹಾಸನದ ಜೆಡಿಎಸ್ ಕಾರ್ಯಕರ್ತನನ್ನು ಸಲಿಂಗಕಾಮಕ್ಕೆ ಬಳಕೆ ಮಾಡಿಕೊಂಡ ಆರೋಪದಲ್ಲಿ ನಿನ್ನೆ ಬಂಧನವಾಗಿದ್ದ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣನನ್ನು 8 ದಿನಗಳ ಕಾಲ ಅಪರಾಧ ತನಿಖಾ ಇಲಾಖೆ (Crime Investigation Department-ಸಿಐಡಿ) ವಶಕ್ಕೆ ಒಪ್ಪಿಸಿ ಆದೇಶ ಹೊರಡಿಸಲಾಗಿದೆ.
ಸೂರಜ್ ರೇವಣ್ಣ ವಿರುದ್ಧ ಹಾಸನದಲ್ಲಿ ಸಲಿಂಗಕಾಮದ ಕೇಸ್ ದಾಖಲಾಗುತ್ತಿದ್ದಂತೆ ಆತನನ್ನು ಬಂಧಿಸಿದ್ದ ಜಿಲ್ಲಾ ಪೊಲೀಸರು ತನಿಖೆ ಆರಂಭಿಸಿದ್ದರು. ಆದರೆ, ರಾಜ್ಯ ಸರ್ಕಾರದಿಂದ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಆದೇಶ ನೀಡಲಾಗಿತ್ತು. ಇದರ ಬೆನ್ನಲ್ಲಿಯೇ ನಿನ್ನೆ ಸಂಜೆ ವೇಳೆಗೆ ಹಾಸನದಿಂದ ಬೆಂಗಳೂರಿಗೆ ಸೂರಜ್ ರೇವಣ್ಣನನ್ನು ಕರೆತಂದಿದ್ದ ಪೊಲೀಸರು ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿ ಇಟ್ಟಿದ್ದರು. ಇಂದು ಮಧ್ಯಾಹ್ನ ಕೋರ್ಟ್ ಮುಂದೆ ಹಾಜರುಪಡಿಸಿದ ಸಿಐಡಿ ಪೊಲೀಸರಿ ಕೇಸಿನ ಸಂಬಂಧ ವಿಚಾರಣೆ ನಡೆಸುವುದಕ್ಕಾಗಿ 14 ದಿನ ವಶಕ್ಕೆ ನೀಡುವಂತೆ ನ್ಯಾಯಾಲಯದಲ್ಲಿ ಮನವಿ ಮಾಡಿದರು. ಆದರೆ, ನ್ಯಾಯಾಧೀಶರು 8 ದಿನಗಳ ಕಾಲ ಸಿಐಡಿ ಪೊಲೀಸರ ವಶಕ್ಕೆ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…