ಬೆಂಗಳೂರು: ಹಾಸನದ ಜೆಡಿಎಸ್ ಕಾರ್ಯಕರ್ತನನ್ನು ಸಲಿಂಗಕಾಮಕ್ಕೆ ಬಳಕೆ ಮಾಡಿಕೊಂಡ ಆರೋಪದಲ್ಲಿ ನಿನ್ನೆ ಬಂಧನವಾಗಿದ್ದ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣನನ್ನು 8 ದಿನಗಳ ಕಾಲ ಅಪರಾಧ ತನಿಖಾ ಇಲಾಖೆ (Crime Investigation Department-ಸಿಐಡಿ) ವಶಕ್ಕೆ ಒಪ್ಪಿಸಿ ಆದೇಶ ಹೊರಡಿಸಲಾಗಿದೆ.
ಸೂರಜ್ ರೇವಣ್ಣ ವಿರುದ್ಧ ಹಾಸನದಲ್ಲಿ ಸಲಿಂಗಕಾಮದ ಕೇಸ್ ದಾಖಲಾಗುತ್ತಿದ್ದಂತೆ ಆತನನ್ನು ಬಂಧಿಸಿದ್ದ ಜಿಲ್ಲಾ ಪೊಲೀಸರು ತನಿಖೆ ಆರಂಭಿಸಿದ್ದರು. ಆದರೆ, ರಾಜ್ಯ ಸರ್ಕಾರದಿಂದ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಆದೇಶ ನೀಡಲಾಗಿತ್ತು. ಇದರ ಬೆನ್ನಲ್ಲಿಯೇ ನಿನ್ನೆ ಸಂಜೆ ವೇಳೆಗೆ ಹಾಸನದಿಂದ ಬೆಂಗಳೂರಿಗೆ ಸೂರಜ್ ರೇವಣ್ಣನನ್ನು ಕರೆತಂದಿದ್ದ ಪೊಲೀಸರು ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿ ಇಟ್ಟಿದ್ದರು. ಇಂದು ಮಧ್ಯಾಹ್ನ ಕೋರ್ಟ್ ಮುಂದೆ ಹಾಜರುಪಡಿಸಿದ ಸಿಐಡಿ ಪೊಲೀಸರಿ ಕೇಸಿನ ಸಂಬಂಧ ವಿಚಾರಣೆ ನಡೆಸುವುದಕ್ಕಾಗಿ 14 ದಿನ ವಶಕ್ಕೆ ನೀಡುವಂತೆ ನ್ಯಾಯಾಲಯದಲ್ಲಿ ಮನವಿ ಮಾಡಿದರು. ಆದರೆ, ನ್ಯಾಯಾಧೀಶರು 8 ದಿನಗಳ ಕಾಲ ಸಿಐಡಿ ಪೊಲೀಸರ ವಶಕ್ಕೆ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ.
ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…
ಮಂಗಳೂರು: ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…
ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…
ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…
ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್ಆರ್ ನಗರದ …
ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ ರುತ್ ಪ್ರಭು ತಾವು ಮೊದಲ…