ಬೆಂಗಳೂರು: ಹಾಸನದ ಜೆಡಿಎಸ್ ಕಾರ್ಯಕರ್ತನನ್ನು ಸಲಿಂಗಕಾಮಕ್ಕೆ ಬಳಕೆ ಮಾಡಿಕೊಂಡ ಆರೋಪದಲ್ಲಿ ನಿನ್ನೆ ಬಂಧನವಾಗಿದ್ದ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣನನ್ನು 8 ದಿನಗಳ ಕಾಲ ಅಪರಾಧ ತನಿಖಾ ಇಲಾಖೆ (Crime Investigation Department-ಸಿಐಡಿ) ವಶಕ್ಕೆ ಒಪ್ಪಿಸಿ ಆದೇಶ ಹೊರಡಿಸಲಾಗಿದೆ.
ಸೂರಜ್ ರೇವಣ್ಣ ವಿರುದ್ಧ ಹಾಸನದಲ್ಲಿ ಸಲಿಂಗಕಾಮದ ಕೇಸ್ ದಾಖಲಾಗುತ್ತಿದ್ದಂತೆ ಆತನನ್ನು ಬಂಧಿಸಿದ್ದ ಜಿಲ್ಲಾ ಪೊಲೀಸರು ತನಿಖೆ ಆರಂಭಿಸಿದ್ದರು. ಆದರೆ, ರಾಜ್ಯ ಸರ್ಕಾರದಿಂದ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಆದೇಶ ನೀಡಲಾಗಿತ್ತು. ಇದರ ಬೆನ್ನಲ್ಲಿಯೇ ನಿನ್ನೆ ಸಂಜೆ ವೇಳೆಗೆ ಹಾಸನದಿಂದ ಬೆಂಗಳೂರಿಗೆ ಸೂರಜ್ ರೇವಣ್ಣನನ್ನು ಕರೆತಂದಿದ್ದ ಪೊಲೀಸರು ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿ ಇಟ್ಟಿದ್ದರು. ಇಂದು ಮಧ್ಯಾಹ್ನ ಕೋರ್ಟ್ ಮುಂದೆ ಹಾಜರುಪಡಿಸಿದ ಸಿಐಡಿ ಪೊಲೀಸರಿ ಕೇಸಿನ ಸಂಬಂಧ ವಿಚಾರಣೆ ನಡೆಸುವುದಕ್ಕಾಗಿ 14 ದಿನ ವಶಕ್ಕೆ ನೀಡುವಂತೆ ನ್ಯಾಯಾಲಯದಲ್ಲಿ ಮನವಿ ಮಾಡಿದರು. ಆದರೆ, ನ್ಯಾಯಾಧೀಶರು 8 ದಿನಗಳ ಕಾಲ ಸಿಐಡಿ ಪೊಲೀಸರ ವಶಕ್ಕೆ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…