ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಗುಜರಾತ್ನ ವಡೋದರಾ ಜಿಲ್ಲೆಯಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ. 26 ವರ್ಷದ ಯುವಕನಾಗಿರುವ ಆರೋಪಿ ಮಾನಸಿಕವಾಗಿ ಅಸ್ವಸ್ಥನಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಮುಂಬೈ ಸಂಚಾರ ಪೊಲೀಸರ ವಾಟ್ಸಪ್ ಸಹಾಯವಾಣಿಗೆ ಸಲ್ಮಾನ್ ಖಾನ್ ಅವರಿಗೆ ಬೆದರಿಕೆ ಹಾಕಲಾದ ಸಂದೇಶ ಬಂದಿತ್ತು. ಸಲ್ಮಾನ್ ಅವರ ಕಾರನ್ನು ಬಾಂಬ್ ಇಟ್ಟು ಸ್ಫೋಟಿಸಲಾಗುವುದು ಮತ್ತು ಅವರ ಮನೆಗೆ ಪ್ರವೇಶಿಸಿದ ನಂತರ ಅವರ ಮೇಲೆ ದಾಳಿ ಮಾಡಲಾಗುವುದು ಎಂದು ಸಂದೇಶದಲ್ಲಿ ಹೇಳಲಾಗಿತ್ತು.
ಸಲ್ಮಾನ್ ಖಾನ್ಗೆ ಈಗಾಗಲೇ ವೈ-ಪ್ಲಸ್ ಭದ್ರತೆ ನೀಡಲಾಗಿದೆ. ಆದರೆ ಈ ಬೆದರಿಕೆಯ ನಂತರ, ಮುಂಬೈನ ವರ್ಲಿ ಪೊಲೀಸರು ತಕ್ಷಣ ಕ್ರಮ ಕೈಗೊಂಡರು. ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 351(2)(3)ರ ಅಡಿಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಕ್ರಿಮಿನಲ್ ಬೆದರಿಕೆ ಪ್ರಕರಣವನ್ನು ದಾಖಲಿಸಿದ್ದಾರೆ. ಅಲ್ಲದೆ, ಬಾಂದ್ರಾದಲ್ಲಿರುವ ಸಲ್ಮಾನ್ ಮನೆಯ ಹೊರಗೆ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ.
ಪ್ರಕರಣದ ತನಿಖೆ ಆರಂಭಿಸಿದಾಗ ವಡೋದರಾದ ವಾಘೋಡಿಯಾ ತಾಲೂಕಿನಲ್ಲಿ ವಾಸಿಸುತ್ತಿರುವ ವ್ಯಕ್ತಿಯೊಬ್ಬರು ಈ ಬೆದರಿಕೆ ಕರೆಯನ್ನು ಕಳುಹಿಸಿದ್ದಾರೆ ಎಂದು ತಿಳಿದು ಬಂದಿತ್ತು. ಮುಂಬೈ ಪೊಲೀಸರ ತಂಡವು ವಾಘೋಡಿಯಾ ಪೊಲೀಸರೊಂದಿಗೆ ಆ ವ್ಯಕ್ತಿಯ ಮನೆಗೆ ತಲುಪಿದೆ ಎಂದು ವಡೋದರಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಆನಂದ್ ಹೇಳಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಈ 26 ವರ್ಷದ ಯುವಕ ಮಾನಸಿಕವಾಗಿ ಅಸ್ಥಿರನಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದುಬಂದಿದೆ. ಪೊಲೀಸರು, ಆತನನ್ನು ವಿಚಾರಣೆಗಾಗಿ ಮುಂಬೈಗೆ ಬರಲು ನೋಟಿಸ್ ನೀಡಿ, ವಾಪಸ್ ಮರಳಿದ್ದಾರೆ ಎಂದು ರೋಹನ್ ಆನಂದ್ ವಿವರಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…