ಮುಂಬೈ: ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ, ಚಿತ್ರಕಥೆಗಾರ ಸಲೀಂ ಖಾನ್ ಅವರಿಗೂ ಅನಾಮಧೇಯ ಜೀವ ಬೆದರಿಕೆ ಪತ್ರ ಬಂದ ಒಂದು ದಿನದ ನಂತರ ಮಹಾರಾಷ್ಟ್ರ ಗೃಹ ಇಲಾಖೆಯು ಅವರ ಭದ್ರತೆಯನ್ನು ಹೆಚ್ಚಿಸಿದೆ.
‘ಮಹಾರಾಷ್ಟ್ರ ಗೃಹ ಇಲಾಖೆಯು ನಟ ಸಲ್ಮಾನ್ ಖಾನ್ ಅವರಿಗೆ ಮತ್ತು ಅವರ ತಂದೆ ಸಲೀಂ ಖಾನ್ ಅವರಿಗೆ ನಿನ್ನೆ ಜೂನ್ 5ರಂದು ಬೆದರಿಕೆ ಪತ್ರವನ್ನು ಕಳುಹಿಸಿದ ನಂತರ ಅವರ ಭದ್ರತೆಯನ್ನು ಬಲಪಡಿಸಿದೆ’ ಎಂದು ಸುದ್ದಿ ಸಂಸ್ಥೆ ANI ಟ್ವೀಟ್ ಮಾಡಿದೆ. ಅನಾಮಧೇಯ ಪತ್ರ ಬೆಳಕಿಗೆ ಬಂದ ನಂತರ ಮುಂಬೈ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದರು.
ಸಲ್ಮಾನ್ ಖಾನ್ ಪ್ರತಿದಿನ ವಾಕಿಂಗ್ ಹೋಗುತ್ತಾರೆ. ಈ ನಡುವೆ ಅವರು ವಿಶ್ರಾಂತಿ ಪಡೆಯುತ್ತಿರುವ ಸ್ಥಳದಲ್ಲಿ ಸಲ್ಲು ತಂದೆ ಈ ಪತ್ರವನ್ನು ಸ್ವೀಕರಿಸಿದ್ದಾರೆ. ಈ ನಡುವೆ ಸಲ್ಮಾನ್ ಗೆ ಮತ್ತೆ ಬೆದರಿಕೆ ಪತ್ರ ಬಂದಿದ್ದು ಬಾಲಿವುಡ್ ನಲ್ಲಿ ಸಂಚಲನ ಮೂಡಿಸಿತ್ತು. ಈ ಸಂಬಂಧ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪಂಜಾಬ್ ಗಾಯಕ ಸಿಧು ಮುಸೇವಾಲಾ ಸಾವಿನ ಬೆನ್ನಲ್ಲೇ, ಇದೀಗ ಬಾಲಿವುಡ್ನ ಸಲ್ಮಾನ್ ಖಾನ್ ಹಾಗೂ ಸಲೀಂ ಖಾನ್ ಗೆ ಜೀವ ಬೆದರಿಕೆ ಪತ್ರವೊಂದು ಬಂದಿದ್ದು ಸದ್ಯ ತನಿಖೆ ಕೈಗೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬ್ಯಾಂಡ್ ಸ್ಟ್ಯಾಂಡ್ ಪ್ರದೇಶದಲ್ಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗುತ್ತಿದ್ದು, ಘಟನೆಯ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…