ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಯ ಮುಂದೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಎನ್ ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಎಂಟ್ರಿ ಪಡೆದಿದ್ದಾರೆ. ಈಗಾಗಲೇ ಬಂಧನವಾಗಿರುವ ಇಬ್ಬರು ಆರೋಪಿಗಳು ಬಳಸಲಾದ ಗನ್ ಗಳನ್ನು ತಾಪಿ ನದಿಯಲ್ಲಿ ಎಸೆದಿರೋದಾಗ ಹೇಳಿಕೊಂಡಿದ್ದಾರೆ. ಹಾಗಾಗಿ ದಯಾ ನಾಯಕ್ ಸೂರತ್ ಗೆ ಬಂದಿಳಿದಿದ್ದಾರೆ.
ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ ನಡೆದು, ಆತಂಕ ಸೃಷ್ಟಿಯಾಗಿತ್ತು. ಆನಂತರ ಗುಂಡಿನ ದಾಳಿ ಮಾಡಿದವರನ್ನು ಹೆಡೆಮೂರಿ ಕಟ್ಟಿ ಜೈಲಿಗೆ ತಳ್ಳಿದ್ದಾರೆ ಮುಂಬೈ ಪೊಲೀಸರು. ಗುಂಡಿನ ದಾಳಿಯ ನಂತರ ಸಲ್ಮಾನ್ ಆಚೆ ಬಂದಿರಲೇ ಇಲ್ಲ. ಇದೀಗ ಸಲ್ಮಾನ್ ದುಬೈಗೆ ಹಾರಿದ್ದಾರೆ. ವೈ ಪ್ಲಸ್ ಭದ್ರತೆಯೊಂದಿಗೆ ಆಗಮಿಸಿದ್ದ ಅವರು, ಬಿಗಿ ಭದ್ರತೆ ನಡುವೆಯೇ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಈ ನಡುವೆ ಮುಂಬೈ ಪೊಲೀಸರಿಂದ ಮತ್ತೊಂದು ಆತಂಕಕಾರಿ ವಿಷಯ ಬಹಿರಂಗವಾಗಿದೆ. ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಯಿಂದ ಕ್ಯಾಬ್ ಬುಕ್ ಮಾಡಿದ್ದಕ್ಕಾಗಿ ಯುವಕನನ್ನು ಬಂಧಿಸಲಾಗಿದೆ.
ಆರೋಪಿ ಉತ್ತರ ಪ್ರದೇಶದ ಗಾಜಿಯಾಬಾದ್ನ 20 ವಯಸ್ಸಿನ ರೋಹಿತ್ ತ್ಯಾಗಿ. ಆರೋಪಿಯು, ನಟ ಸಲ್ಮಾನ್ ಖಾನ್ ಮನೆ ಗ್ಯಾಲಕ್ಸಿ ಅಪಾರ್ಟ್ಮೆಂಟ್ನಿಂದ ಬಾಂದ್ರಾ ಪೊಲೀಸ್ ಠಾಣೆಗೆ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಕ್ಯಾಬ್ ಬುಕ್ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಕ್ಯಾಬ್ ಡ್ರೈವರ್ ಸಲ್ಮಾನ್ ಖಾನ್ ಅವರ ಮನೆಯಲ್ಲಿರುವ ಗ್ಯಾಲಕ್ಸಿ ಅಪಾರ್ಟ್ಮೆಂಟ್ಗೆ ಬಂದು ಬುಕ್ಕಿಂಗ್ ಬಗ್ಗೆ ಅಲ್ಲಿನ ವಾಚ್ಮನ್ ಬಳಿ ಕೇಳಿದ್ದಾರೆ. ಮೊದಲು ದಿಗ್ಭ್ರಮೆಗೊಂಡ ವಾಚ್ಮನ್, ತಕ್ಷಣ ಬುಕಿಂಗ್ ಬಗ್ಗೆ ಹತ್ತಿರದ ಬಾಂದ್ರಾ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು. ಅದರಂತೆ ಮುಂಬೈನ ಬಾಂದ್ರಾ ಪೊಲೀಸರು, ಕ್ಯಾಬ್ ಚಾಲಕನನ್ನು ವಿಚಾರಣೆಗೆ ಒಳಪಡಿಸಿದರು. ಆನ್ಲೈನ್ನಲ್ಲಿ ಕ್ಯಾಬ್ ಬುಕ್ ಮಾಡಿದ ವ್ಯಕ್ತಿಯ ಮಾಹಿತಿಯನ್ನು ಟ್ರ್ಯಾಕ್ ಮಾಡಿದ್ದಾರೆ. ಕ್ಯಾಬ್ ಬುಕ್ ಮಾಡಿದ ವ್ಯಕ್ತಿ ಘಾಜಿಯಾಬಾದ್ನ 20 ವರ್ಷದ ವಿದ್ಯಾರ್ಥಿಯಾಗಿದ್ದು, ರೋಹಿತ್ ತ್ಯಾಗಿ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಕ್ಯಾಬ್ ಬುಕ್ ಮಾಡಿರುವುದು ಚೇಷ್ಟೆಗಾಗಿ ಎಂದು ತನಿಖೆಯ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಬಂಧಿಸಿದರು. ನಂತರ ಅವರನ್ನು ಮುಂಬೈಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಎರಡು ದಿನಗಳ ಕಾಲ ಬಾಂದ್ರಾ ಪೊಲೀಸರ ಕಸ್ಟಡಿಗೆ ಒಪ್ಪಿಸಲಾಗಿದೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…