ಸವಣೂರು: ಪತಿಯ ಅಗಲಿಕೆಯ ನೋವು ; ಆತ್ಮಹತ್ಯೆಗೆ ಶರಣಾದ ಪತ್ನಿ – Vishwanews24

Featured, ದಕ್ಷಿಣ ಕನ್ನಡ

ಸವಣೂರು: ಪತಿಯ ಅಗಲಿಕೆಯ ನೋವು – ಆತ್ಮಹತ್ಯೆಗೆ ಶರಣಾದ ಪತ್ನಿ

ಪೆರಾಜೆ: ಪತಿಯ ಅಗಲಿಕೆಯಿಂದ ನೋವಿನಿಂದ ಹೊರಬರಲಾರದೆ ಯುವ ನರ್ಸ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೆರಾಜೆಯಲ್ಲಿ ನಡೆದಿದೆ.

ಮೃತರನ್ನು ಸವಣೂರು ಗ್ರಾಮದ ಪೆರಿಯಡ್ಕ ನಿವಾಸಿ, ದಿ| ದಿನೇಶ್ ಪೆರಿಯಡ್ಕ ಅವರ ಪತ್ನಿ , ನರ್ಸ್ ವೃತ್ತಿಯಲ್ಲಿದ್ದ ರೂಪಾ (30 ವರ್ಷ) ಎಂದು ತಿಳಿದು ಬಂದಿದೆ.

ರೂಪಾ ಅವರು ಮೂಲತಃ ಕೊಡಗು ಜಿಲ್ಲೆಯ ಪೆರಾಜೆಯವರು.ಎರಡು ವರ್ಷಗಳ ಹಿಂದೆ ಅವರನ್ನು ಸವಣೂರಿನ ಪೆರಿಯಡ್ಕಕ್ಕೆ ಮದುವೆ ಮಾಡಿಕೊಡಲಾಗಿತ್ತು.ಕಳೆದ ಹದಿನೈದು ದಿನಗಳ ಅ. 7 ರಂದು ದಿನೇಶ್ ಅನಾರೋಗ್ಯದಿಂದ ಮೃತಪಟ್ಟಿದ್ದರು. ಇದಾದ ಬಳಿಕ ರೂಪಾ ತವರು ಮನೆ ಪೆರಾಜೆಗೆ ಬಂದಿದ್ದರು. ಸೋಮವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಚೂಡಿದಾರ ಶಾಲು ಬಳಸಿ ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಕೊಡಗು ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಬಿಜೆಪಿ ನಿಯೋಗದಿಂದ ಸಿಎಂ, ರಾಜ್ಯಪಾಲರಿಗೆ ಮನವಿ – Vishwanews24

Leave a Reply