ಬೆಳಗಾವಿ : ಸವದತ್ತಿ ಜಾತ್ರೆಗೆ ಹೊರಟಿದ್ದ ಭಕ್ತರ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆರು ಜನ ಸಾವನಪ್ಪಿರುವ ಘಟನೆ ರಾಮದುರ್ಗ ತಾಲ್ಲೂಕಿನ ಚುಂಚನೂರು ಗ್ರಾಮದ ಬಳಿ ಇಂದು ಬೆಳಿಗ್ಗೆ ನಡೆದಿದೆ.
ಮೃತಪಟ್ಟವರೆಲ್ಲರೂ ರಾಮದುರ್ಗ ತಾಲ್ಲೂಕಿನ ಹುಲಕುಂದ ಗ್ರಾಮದವರಾಗಿದ್ದು, ಇಬ್ಬರು ಬಾಲಕಿಯರು, ಮೂವರು ಮಹಿಳೆಯರು ಹಾಗೂ ಒಬ್ಬ ಪುರುಷ ಇದ್ದಾರೆ. ಹಣಮವ್ವ ಮೇಗಾಡಿ (25), ಮಾರುತಿ (42), ಇಂದ್ರವ್ವ (24), ದೀಪಾ (31), ಸವಿತಾ (17), ಸುಪ್ರಿತಾ (11) ಮೃತಪಟ್ಟವರು.
ಗಾಯಾಳುಗಳನ್ನು ಗೋಕಾಕ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುವಾರ ನಸುಕಿನ ಜಾವ ಎಲ್ಲರೂ ಗೂಡ್ಸ್ ವಾಹನ ಬಾಡಿಗೆ ಮಾಡಿಕೊಂಡು ಯಲ್ಲಮ್ಮನ ಗುಡ್ಡಕ್ಕೆ ರೇಣುಕಾದೇವಿ ಜಾತ್ರೆಗೆ ತೆರಳುತ್ತಿದ್ದರು. ಗ್ರಾಮದಿಂದ ಹೊರಟ ವಾಹನವು ರಾಮದುರ್ಗ ಮಾರ್ಗವಾಸಾಗಿ, ಚುಂಚನೂರು ಗ್ರಾಮದ ಸರಹದ್ದಿಗೆ ಬಂದಿತ್ತು. ವೇಗವಾಗಿ ಚಲಿಸುತ್ತಿದ್ದ ವಾಃನ ಚುಂಚನೂರು ವಿಠಲಪ್ಪನ ದೇವಸ್ಥಾನದ ಮುದಿನ ಬೃಹತ್ ಆಲದ ಮರಕ್ಕೆ ಡಿಕ್ಕಿ ಹೊಡೆದು ಉರುಳಿಬಿದ್ದಿತು. ಅಪಘಾತದ ರಭಸಕ್ಕೆ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಐವರು ಸ್ಥಳದಲ್ಲೇ ಮೃತಪಟ್ಟರು. ಒಬ್ಬ ಗೋಕಾಕ ತಾಲ್ಲೂಕು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…