Featured

ಸವದತ್ತಿ ಜಾತ್ರೆಗೆ ಹೊರಟಿದ್ದ ಭಕ್ತರ ವಾಹನ ಮರಕ್ಕೆ ಡಿಕ್ಕಿ : ಆರು ಮಂದಿ ಸಾವು – Vishwanews24

ಸವದತ್ತಿ ಜಾತ್ರೆಗೆ ಹೊರಟಿದ್ದ ಭಕ್ತರ ವಾಹನ ಮರಕ್ಕೆ ಡಿಕ್ಕಿ : ಆರು ಮಂದಿ ಸಾವು

ಬೆಳಗಾವಿ : ಸವದತ್ತಿ ಜಾತ್ರೆಗೆ ಹೊರಟಿದ್ದ ಭಕ್ತರ ವಾಹನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆರು ಜನ ಸಾವನಪ್ಪಿರುವ ಘಟನೆ ರಾಮದುರ್ಗ ತಾಲ್ಲೂಕಿನ ಚುಂಚನೂರು ಗ್ರಾಮದ ಬಳಿ ಇಂದು ಬೆಳಿಗ್ಗೆ ನಡೆದಿದೆ.

ಮೃತಪಟ್ಟವರೆಲ್ಲರೂ ರಾಮದುರ್ಗ ತಾಲ್ಲೂಕಿನ ಹುಲಕುಂದ ಗ್ರಾಮದವರಾಗಿದ್ದು, ಇಬ್ಬರು ಬಾಲಕಿಯರು, ಮೂವರು ಮಹಿಳೆಯರು ಹಾಗೂ ಒಬ್ಬ ಪುರುಷ ಇದ್ದಾರೆ. ಹಣಮವ್ವ ಮೇಗಾಡಿ (25), ಮಾರುತಿ (42), ಇಂದ್ರವ್ವ (24), ದೀಪಾ (31), ಸವಿತಾ (17), ಸುಪ್ರಿತಾ (11) ಮೃತಪಟ್ಟವರು.

ಗಾಯಾಳುಗಳನ್ನು ಗೋಕಾಕ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುವಾರ ನಸುಕಿನ ಜಾವ ಎಲ್ಲರೂ ಗೂಡ್ಸ್‌ ವಾಹನ ಬಾಡಿಗೆ ಮಾಡಿಕೊಂಡು ಯಲ್ಲಮ್ಮನ ಗುಡ್ಡಕ್ಕೆ ರೇಣುಕಾದೇವಿ ಜಾತ್ರೆಗೆ ತೆರಳುತ್ತಿದ್ದರು. ಗ್ರಾಮದಿಂದ ಹೊರಟ ವಾಹನವು ರಾಮದುರ್ಗ ಮಾರ್ಗವಾಸಾಗಿ, ಚುಂಚನೂರು ಗ್ರಾಮದ ಸರಹದ್ದಿಗೆ ಬಂದಿತ್ತು. ವೇಗವಾಗಿ ಚಲಿಸುತ್ತಿದ್ದ ವಾಃನ ಚುಂಚನೂರು ವಿಠಲಪ್ಪನ ದೇವಸ್ಥಾನದ ಮುದಿನ ಬೃಹತ್‌ ಆಲದ ಮರಕ್ಕೆ ಡಿಕ್ಕಿ ಹೊಡೆದು ಉರುಳಿಬಿದ್ದಿತು. ಅಪಘಾತದ ರಭಸಕ್ಕೆ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಐವರು ಸ್ಥಳದಲ್ಲೇ ಮೃತಪಟ್ಟರು. ಒಬ್ಬ ಗೋಕಾಕ ತಾಲ್ಲೂಕು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago