Featured

ಸಶಸ್ತ್ರಪಡೆಗಳಲ್ಲಿ ಮಹಿಳೆಯರಿಗೆ ಅವಕಾಶ ಹೆಚ್ಚಿಸಲು ನೂರು ಸೈನಿಕ ಶಾಲೆಗಳ ಸ್ಥಾಪನೆ: ರಾಜನಾಥ್ ಸಿಂಗ್ -Vishwanews24

ಸಶಸ್ತ್ರಪಡೆಗಳಲ್ಲಿ ಮಹಿಳೆಯರಿಗೆ ಅವಕಾಶ ಹೆಚ್ಚಿಸಲು ನೂರು ಸೈನಿಕ ಶಾಲೆಗಳ ಸ್ಥಾಪನೆ: ರಾಜನಾಥ್ ಸಿಂಗ್ -Vishwanews24

ನವದೆಹಲಿ: ಹೆಣ್ಣು ಮಕ್ಕಳು ಸಶಸ್ತ್ರಪಡೆಗಳನ್ನು ಸೇರಲು ಸೈನಿಕ ಶಾಲೆಗಳು ಹೆಚ್ಚಿನ ಅವಕಾಶಗಳನ್ನು ಒದಗಿಸುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.

ಸೈನಿಕ ಶಾಲೆಗಳ ವೆಬಿನಾರ್ ನಲ್ಲಿ ಭಾಗವಹಿಸಿದ್ದ ಸಿಂಗ್ ಅವರು, ಹೆಣ್ಣು ಮಕ್ಕಳಿಗೆ ಸಶಸ್ತ್ರಪಡೆಗಳಲ್ಲಿ ಹೆಚ್ಚಿನ ಅವಕಾಶ ನೀಡಲು 100 ಸೈನಿಕ ಶಾಲೆಗಳನ್ನು ಪ್ರಾರಂಭಿಸುತ್ತಿರುವುದಾಗಿ ಘೋಷಿಸಿದರು. ಸಶಸ್ತ್ರ ಪಡೆಗಳಲ್ಲಿ ಮಹಿಳೆಯರ ಸಂಖ್ಯೆಯನ್ನು ಹೆಚ್ಚಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಆ ನಿಟ್ಟಿನಲ್ಲಿ ಪ್ರಯತ್ನಗಳನ್ನು ನಡೆಸುತ್ತಿದ್ದು, ಮಹಿಳೆಯರ ಹಾದಿಯನ್ನು ಸುಗಮಗೊಳಿಸಲು ಸೈನಿಕ ಶಾಲೆಯಲ್ಲಿ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

‘ಸೈನಿಕ’ ಏಕತೆ, ಶಿಸ್ತು ಮತ್ತು ಭಕ್ತಿಯನ್ನು ಸೂಚಿಸಿದರೆ, ‘ಶಾಲೆ’ ಶಿಕ್ಷಣದ ಕೇಂದ್ರವಾಗಿದೆ. ಆದ್ದರಿಂದ ಸೈನಿಕ ಶಾಲೆಗಳು ಮಕ್ಕಳನ್ನು ಸಮರ್ಥ ನಾಗರಿಕರನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಹೊಸ ಸೈನಿಕ ಶಾಲೆಗಳನ್ನು ಸ್ಥಾಪಿಸುವ ನಿರ್ಧಾರವು ದೇಶಕ್ಕೆ ಸೇವೆ ಸಲ್ಲಿಸುವ ತಮ್ಮ ಕನಸುಗಳನ್ನು ನನಸಾಗಿಸಲು ಮಹಿಳೆಯರನ್ನು ಉತ್ತೇಜಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಕ್ಕಳ ಮೂಲಭೂತ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಮತ್ತು ದೇಶದ ಸಮಗ್ರ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಕಳೆದ ಆರು-ಏಳು ವರ್ಷಗಳಲ್ಲಿ ಸರ್ಕಾರವು ತೆಗೆದುಕೊಂಡ ಅನೇಕ ಪ್ರಮುಖ ನಿರ್ಧಾರಗಳಲ್ಲಿ ಸೈನಿಕ ಶಾಲೆಗಳ ವಿಸ್ತರಣೆಯ ಘೋಷಣೆಯು ಒಂದು. ಸೈನಿಕ ಶಾಲೆಗಳಲ್ಲಿ ರಕ್ಷೆ ಮತ್ತು ಶಿಕ್ಷೆಗಳ ವಿಲೀನವು ಮುಂದಿನ ದಿನಗಳಲ್ಲಿ ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಆಶಿಸಿದರು.

 

Vishwa News 24

Recent Posts

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ -vishwanews24

ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ ಬೆಂಗಳೂರು,  : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ…

12 hours ago

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ -vishwanews24

ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ ಕಾಪು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…

12 hours ago

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು -vishwanews24

ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು ಶಿರ್ವ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್…

12 hours ago

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು :vishwanews24

ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…

14 hours ago

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ -vishwanews24

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…

1 day ago

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ-2026ಕ್ಕೆ  ಚಾಲನೆ -vishwanews24

ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…

2 days ago