Featured

ಸಶಸ್ತ್ರಪಡೆಗಳಲ್ಲಿ ಮಹಿಳೆಯರಿಗೆ ಅವಕಾಶ ಹೆಚ್ಚಿಸಲು ನೂರು ಸೈನಿಕ ಶಾಲೆಗಳ ಸ್ಥಾಪನೆ: ರಾಜನಾಥ್ ಸಿಂಗ್ -Vishwanews24

ಸಶಸ್ತ್ರಪಡೆಗಳಲ್ಲಿ ಮಹಿಳೆಯರಿಗೆ ಅವಕಾಶ ಹೆಚ್ಚಿಸಲು ನೂರು ಸೈನಿಕ ಶಾಲೆಗಳ ಸ್ಥಾಪನೆ: ರಾಜನಾಥ್ ಸಿಂಗ್ -Vishwanews24

ನವದೆಹಲಿ: ಹೆಣ್ಣು ಮಕ್ಕಳು ಸಶಸ್ತ್ರಪಡೆಗಳನ್ನು ಸೇರಲು ಸೈನಿಕ ಶಾಲೆಗಳು ಹೆಚ್ಚಿನ ಅವಕಾಶಗಳನ್ನು ಒದಗಿಸುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.

ಸೈನಿಕ ಶಾಲೆಗಳ ವೆಬಿನಾರ್ ನಲ್ಲಿ ಭಾಗವಹಿಸಿದ್ದ ಸಿಂಗ್ ಅವರು, ಹೆಣ್ಣು ಮಕ್ಕಳಿಗೆ ಸಶಸ್ತ್ರಪಡೆಗಳಲ್ಲಿ ಹೆಚ್ಚಿನ ಅವಕಾಶ ನೀಡಲು 100 ಸೈನಿಕ ಶಾಲೆಗಳನ್ನು ಪ್ರಾರಂಭಿಸುತ್ತಿರುವುದಾಗಿ ಘೋಷಿಸಿದರು. ಸಶಸ್ತ್ರ ಪಡೆಗಳಲ್ಲಿ ಮಹಿಳೆಯರ ಸಂಖ್ಯೆಯನ್ನು ಹೆಚ್ಚಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಆ ನಿಟ್ಟಿನಲ್ಲಿ ಪ್ರಯತ್ನಗಳನ್ನು ನಡೆಸುತ್ತಿದ್ದು, ಮಹಿಳೆಯರ ಹಾದಿಯನ್ನು ಸುಗಮಗೊಳಿಸಲು ಸೈನಿಕ ಶಾಲೆಯಲ್ಲಿ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

‘ಸೈನಿಕ’ ಏಕತೆ, ಶಿಸ್ತು ಮತ್ತು ಭಕ್ತಿಯನ್ನು ಸೂಚಿಸಿದರೆ, ‘ಶಾಲೆ’ ಶಿಕ್ಷಣದ ಕೇಂದ್ರವಾಗಿದೆ. ಆದ್ದರಿಂದ ಸೈನಿಕ ಶಾಲೆಗಳು ಮಕ್ಕಳನ್ನು ಸಮರ್ಥ ನಾಗರಿಕರನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಹೊಸ ಸೈನಿಕ ಶಾಲೆಗಳನ್ನು ಸ್ಥಾಪಿಸುವ ನಿರ್ಧಾರವು ದೇಶಕ್ಕೆ ಸೇವೆ ಸಲ್ಲಿಸುವ ತಮ್ಮ ಕನಸುಗಳನ್ನು ನನಸಾಗಿಸಲು ಮಹಿಳೆಯರನ್ನು ಉತ್ತೇಜಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಕ್ಕಳ ಮೂಲಭೂತ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸಲು ಮತ್ತು ದೇಶದ ಸಮಗ್ರ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ಕಳೆದ ಆರು-ಏಳು ವರ್ಷಗಳಲ್ಲಿ ಸರ್ಕಾರವು ತೆಗೆದುಕೊಂಡ ಅನೇಕ ಪ್ರಮುಖ ನಿರ್ಧಾರಗಳಲ್ಲಿ ಸೈನಿಕ ಶಾಲೆಗಳ ವಿಸ್ತರಣೆಯ ಘೋಷಣೆಯು ಒಂದು. ಸೈನಿಕ ಶಾಲೆಗಳಲ್ಲಿ ರಕ್ಷೆ ಮತ್ತು ಶಿಕ್ಷೆಗಳ ವಿಲೀನವು ಮುಂದಿನ ದಿನಗಳಲ್ಲಿ ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಆಶಿಸಿದರು.

 

Vishwa News 24

Recent Posts

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

19 seconds ago

ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ- vishwanews24

ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ  ಯಾತ್ರೆ ಕೈಗೊಂಡಿದ್ದಾರೆ.…

58 minutes ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಆತಂಕಬೇಡ :ಸಿಎಂ ಡಿಕೆಶಿ ಭರವಸೆ  – vishwanews24

ಎಲ್ಲಾ ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಯಲಿವೆ : ಸಿಎಂ ಡಿಕೆಶಿ ಸ್ಪಷ್ಟನೆ ಬೆಂಗಳೂರು :ಫಲಾನುಭವಿಗಳು ಯಾವುದೇ ಆತಂಕಪಡಬೇಕಾದ ಅಗತ್ಯವಿಲ್ಲ, ಎಲ್ಲಾ…

1 hour ago

ಉಡುಪಿ: ಪೆರ್ಡೂರು ಸಂಜೀವಿನಿ ಒಕ್ಕೂಟಕ್ಕೆ ಲಕ್ಷಾಂತರ ರೂ.ವಂಚನೆ ; ದೂರು ದಾಖಲು – vishwanews24

ಉಡುಪಿ: ಪೆರ್ಡೂರು ಸಂಜೀವಿನಿ ಒಕ್ಕೂಟಕ್ಕೆ ಲಕ್ಷಾಂತರ ರೂ.ವಂಚನೆ ; ದೂರು ದಾಖಲು ಹಿರಿಯಡ್ಕ: ಪೆರ್ಡೂರು ಪದ್ಮ ಕಮಲ ಸಂಜೀವಿನಿ ಗ್ರಾಮ…

1 hour ago

ಹಿರಿಯ ಲೇಖಕಿ ಇಂದಿರಾ ಲಂಕೇಶ್ ನಿಧನ – vishwanews24

ಹಿರಿಯ ಲೇಖಕಿ ಇಂದಿರಾ ಲಂಕೇಶ್ ನಿಧನ ಬೆಂಗಳೂರು: ಹಿರಿಯ ಲೇಖಕಿ ಹಾಗೂ ಖ್ಯಾತ ಪತ್ರಕರ್ತ ದಿವಂಗತ ಪಿ. ಲಂಕೇಶ್ ಅವರ…

2 hours ago

ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ಚಾಲನೆ – vishwanews24

ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ಚಾಲನೆ ತಿರುವನಂತಪುರಂ: ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ…

2 hours ago