ಮಂಗಳೂರು :ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ, ದ.ಕ ಲಾರಿ ಮಾಲಕರ ಸಂಘ ಮತ್ತು ಮರಳು ಗುತ್ತಿಗೆದಾರ ಸಂಘ ಸಸಿಕಾಂತ್ ಸೆಂಥಿಲ್ ವಿರುದ್ದ ಗಂಭೀರ ಭ್ರಷ್ಟಾಚಾರದ ಆರೋಪವನ್ನು ಹೊರಿಸಿದರು.
ದ.ಕ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ವಿರುದ್ದ, ಮಂಗಳೂರಿನಲ್ಲಿ ಇಂದು ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಾರಿ ಮಾಲಕರ ಸಂಘದ ಅಧ್ಯಕ್ಷ ಜೈರಾಜ್ ಶೆಟ್ಟಿ, ಮರಳುಗಾರಿಕೆ ವಿಚಾರದಲ್ಲಿ ಸಸಿಕಾಂತ್ ಸೆಂಥಿಲ್ ಅವರು ಮಾಡಿರುವ ಹಗರಣಗಳ ಆರೋಪ ವ್ಯಕ್ತಪಡಿಸಿದರು.
ಮರಳು ತೆಗೆಯಲು ಒಂದೇ ಪರ್ಮಿಟ್ ಗೆ ಹಲವು ಕಡೆ ಒಪ್ಪಿಗೆ ನೀಡಲಾಗಿದ್ದು, ತುಂಬೆ ಕಿಂಡಿ ಅಣೆಕಟ್ಟು ಪ್ರದೇಶದಲ್ಲಿ ಡ್ರೆಜ್ಜಿಂಗ್ ನಲ್ಲೂ ಅವ್ಯವಹಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದಿಲ್ಲಿ ಕಂಪೆನಿಗೆ ಕಿಂಡಿ ಅಣೆಕಟ್ಟು ಪ್ರದೇಶದಲ್ಲಿ ಡ್ರೆಜ್ಜಿಂಗ್ ಮಾಡಲು ಟೆಂಡರ್ ನೀಡಿದ್ದು, ಟೆಂಡರ್ ನೀಡುವ ಸಂದರ್ಭ ಯಾವುದೇ ಮಾನದಂಡ ಅನುಸರಿಸದೇ ಟೆಂಡರ್ ನಿಯಮ ಮುರಿದು ಕೊಟ್ಟಿದ್ದು ಅಲ್ಲದೆ ಈ ಬಗ್ಗೆ ಹೈ ಕೋರ್ಟ್ ಗೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ ಕಿಂಡಿ ಅಣೆಕಟ್ಟು ಪ್ರದೇಶದಲ್ಲಿ ಮರಳು ತೆಗೆಯೋದನ್ನು ಹೂಳೆತ್ತುದಾಗಿ ಮಾಹಿತಿ ನೀಡಿ ದಾರಿ ತಪ್ಪಿಸಿದ್ದಾರೆ.ಈ ಕುರಿತಂತೆ ತನಿಖೆ ನಡೆಯಬೇಕು ಎಂದು ದಕ್ಷಿಣ ಕನ್ನಡ ಲಾರಿ ಮಾಲಿಕರ ಸಂಘಗಳ ಒಕ್ಕೂಟ ಆಗ್ರಹಿಸಿದೆ.
ಮರಳು ಲಾರಿಗಳಿಗೆ GPS ಅಳವಡಿಸಲು ಟೆಂಡರ್ ಕರೆದಿದ್ದಾರೆ. ಆದರೆ ಉಡುಪಿ ಜಿಲ್ಲೆಯಲ್ಲಿ ಬ್ಲಾಕ್ ಲೀಸ್ಟ್ ನಲ್ಲಿರುವ T4U ಎಂಬ ಕಂಪೆನಿಗೆ ಟೆಂಡರ್ ಕೊಟ್ಟಿದ್ದಾರೆ. ಅಲ್ಲದೆ ಸರಕಾರಿ ಅಧಿಕಾರಿಗಳಿಂದ ಸೀಝ್ ಆದ ಮರಳನ್ನು ಓಷಿಯನ್ ಟೆಕ್ಕಿ ಎಂಬ ಕಂಪೆನಿಗೆ ಕೊಟ್ಟಿದ್ದಾರೆ ಈ ಹಿನ್ನಲೆಯಲ್ಲಿ ಆಗಿನ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ವಿರುದ್ದ ಲೋಕಾಯುಕ್ತ ಕ್ಕೆ ದೂರು ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಲಾರಿ ಮಾಲಿಕರ ಸಂಘಗಳ ಒಕ್ಕೂಟ ತಿಳಿಸಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…