ಮಂಗಳೂರು :ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ, ದ.ಕ ಲಾರಿ ಮಾಲಕರ ಸಂಘ ಮತ್ತು ಮರಳು ಗುತ್ತಿಗೆದಾರ ಸಂಘ ಸಸಿಕಾಂತ್ ಸೆಂಥಿಲ್ ವಿರುದ್ದ ಗಂಭೀರ ಭ್ರಷ್ಟಾಚಾರದ ಆರೋಪವನ್ನು ಹೊರಿಸಿದರು.
ದ.ಕ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ವಿರುದ್ದ, ಮಂಗಳೂರಿನಲ್ಲಿ ಇಂದು ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಲಾರಿ ಮಾಲಕರ ಸಂಘದ ಅಧ್ಯಕ್ಷ ಜೈರಾಜ್ ಶೆಟ್ಟಿ, ಮರಳುಗಾರಿಕೆ ವಿಚಾರದಲ್ಲಿ ಸಸಿಕಾಂತ್ ಸೆಂಥಿಲ್ ಅವರು ಮಾಡಿರುವ ಹಗರಣಗಳ ಆರೋಪ ವ್ಯಕ್ತಪಡಿಸಿದರು.
ಮರಳು ತೆಗೆಯಲು ಒಂದೇ ಪರ್ಮಿಟ್ ಗೆ ಹಲವು ಕಡೆ ಒಪ್ಪಿಗೆ ನೀಡಲಾಗಿದ್ದು, ತುಂಬೆ ಕಿಂಡಿ ಅಣೆಕಟ್ಟು ಪ್ರದೇಶದಲ್ಲಿ ಡ್ರೆಜ್ಜಿಂಗ್ ನಲ್ಲೂ ಅವ್ಯವಹಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದಿಲ್ಲಿ ಕಂಪೆನಿಗೆ ಕಿಂಡಿ ಅಣೆಕಟ್ಟು ಪ್ರದೇಶದಲ್ಲಿ ಡ್ರೆಜ್ಜಿಂಗ್ ಮಾಡಲು ಟೆಂಡರ್ ನೀಡಿದ್ದು, ಟೆಂಡರ್ ನೀಡುವ ಸಂದರ್ಭ ಯಾವುದೇ ಮಾನದಂಡ ಅನುಸರಿಸದೇ ಟೆಂಡರ್ ನಿಯಮ ಮುರಿದು ಕೊಟ್ಟಿದ್ದು ಅಲ್ಲದೆ ಈ ಬಗ್ಗೆ ಹೈ ಕೋರ್ಟ್ ಗೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ ಕಿಂಡಿ ಅಣೆಕಟ್ಟು ಪ್ರದೇಶದಲ್ಲಿ ಮರಳು ತೆಗೆಯೋದನ್ನು ಹೂಳೆತ್ತುದಾಗಿ ಮಾಹಿತಿ ನೀಡಿ ದಾರಿ ತಪ್ಪಿಸಿದ್ದಾರೆ.ಈ ಕುರಿತಂತೆ ತನಿಖೆ ನಡೆಯಬೇಕು ಎಂದು ದಕ್ಷಿಣ ಕನ್ನಡ ಲಾರಿ ಮಾಲಿಕರ ಸಂಘಗಳ ಒಕ್ಕೂಟ ಆಗ್ರಹಿಸಿದೆ.
ಮರಳು ಲಾರಿಗಳಿಗೆ GPS ಅಳವಡಿಸಲು ಟೆಂಡರ್ ಕರೆದಿದ್ದಾರೆ. ಆದರೆ ಉಡುಪಿ ಜಿಲ್ಲೆಯಲ್ಲಿ ಬ್ಲಾಕ್ ಲೀಸ್ಟ್ ನಲ್ಲಿರುವ T4U ಎಂಬ ಕಂಪೆನಿಗೆ ಟೆಂಡರ್ ಕೊಟ್ಟಿದ್ದಾರೆ. ಅಲ್ಲದೆ ಸರಕಾರಿ ಅಧಿಕಾರಿಗಳಿಂದ ಸೀಝ್ ಆದ ಮರಳನ್ನು ಓಷಿಯನ್ ಟೆಕ್ಕಿ ಎಂಬ ಕಂಪೆನಿಗೆ ಕೊಟ್ಟಿದ್ದಾರೆ ಈ ಹಿನ್ನಲೆಯಲ್ಲಿ ಆಗಿನ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ವಿರುದ್ದ ಲೋಕಾಯುಕ್ತ ಕ್ಕೆ ದೂರು ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಲಾರಿ ಮಾಲಿಕರ ಸಂಘಗಳ ಒಕ್ಕೂಟ ತಿಳಿಸಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…