ಸಸಿಹಿತ್ಲು : ನಾಪತ್ತೆಯಾಗಿದ್ದ ಯುವಕನ ಮೃತದೇಹ ಸಸಿಹಿತ್ಲು ಬೀಚ್ ನಲ್ಲಿ ಪತ್ತೆ -Vishwanews24   

Featured, ದಕ್ಷಿಣ ಕನ್ನಡ

ಸಸಿಹಿತ್ಲು : ನಾಪತ್ತೆಯಾಗಿದ್ದ ಯುವಕನ ಮೃತದೇಹ ಸಸಿಹಿತ್ಲು ಬೀಚ್ ನಲ್ಲಿ ಪತ್ತೆ -Vishwanews24

ಮಂಗಳೂರು, : ನಾಪತ್ತೆಯಾಗಿದ್ದ ವ್ಯಕ್ತಿಯೋರ್ವ ಶವವಾಗಿ ಪತ್ತೆಯಾದ ಘಟನೆ ಸಸಿಹಿತ್ಲು ಮುಂಡ ಬೀಚ್ ನಲ್ಲಿ ನಡೆದಿದೆ. ಮೃತರನ್ನು ಮುಕ್ಕ ನಿವಾಸಿ ಕಿರಣ್ ಶೆಟ್ಟಿ (42) ಎಂದು ಗುರುತಿಸಲಾಗಿದೆ.

ಅವಿವಾಹಿತರಾಗಿದ್ದ ಕಿರಣ್ ಶೆಟ್ಟಿ ಪಾಲುದಾರಿಕೆಯಲ್ಲಿ ಅಂಗಡಿ ನಡೆಸುತ್ತಿದ್ದರು. ಕೋವಿಡ್ ಕಾರಣದಿಂದ ವ್ಯಾಪಾರ ಇಲ್ಲದೆ ಹಣದ ಸಮಸ್ಯೆಯಿಂದ ಇದ್ದರು ಎಂದು ಕುಟುಂಬಸ್ಥರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದರು.

ಕಳೆದ ಒಂದು ವಾರದ ಹಿಂದೆ ಇವರು ನಾಪತ್ತೆಯಾಗಿದ್ದು ಜು.20ರ ಮಂಗಳವಾರ ಬೆಳಿಗ್ಗೆ ಹಳೆಯಂಗಡಿ ಪಂಚಾಯತ್ ಸದಸ್ಯರಾದ ಚಂದ್ರಕುಮಾರ್, ಅನಿಲ್, ಧನರಾಜ್ ಮತ್ತಿತರರು ಸೇರಿಕೊಂಡು ಸಮುದ್ರ ಬದಿಯಲ್ಲಿ ತೆರೆ ಅಪ್ಪಳಿಸಿ ತೇಲುತ್ತಿದ್ದ ಶವವನ್ನು ಮೇಲೆತ್ತುವಲ್ಲಿ ಸಹಕರಿಸಿದ್ದಾರೆ.

ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.