ಮಂಗಳೂರು, : ನಾಪತ್ತೆಯಾಗಿದ್ದ ವ್ಯಕ್ತಿಯೋರ್ವ ಶವವಾಗಿ ಪತ್ತೆಯಾದ ಘಟನೆ ಸಸಿಹಿತ್ಲು ಮುಂಡ ಬೀಚ್ ನಲ್ಲಿ ನಡೆದಿದೆ. ಮೃತರನ್ನು ಮುಕ್ಕ ನಿವಾಸಿ ಕಿರಣ್ ಶೆಟ್ಟಿ (42) ಎಂದು ಗುರುತಿಸಲಾಗಿದೆ.
ಅವಿವಾಹಿತರಾಗಿದ್ದ ಕಿರಣ್ ಶೆಟ್ಟಿ ಪಾಲುದಾರಿಕೆಯಲ್ಲಿ ಅಂಗಡಿ ನಡೆಸುತ್ತಿದ್ದರು. ಕೋವಿಡ್ ಕಾರಣದಿಂದ ವ್ಯಾಪಾರ ಇಲ್ಲದೆ ಹಣದ ಸಮಸ್ಯೆಯಿಂದ ಇದ್ದರು ಎಂದು ಕುಟುಂಬಸ್ಥರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದರು.
ಕಳೆದ ಒಂದು ವಾರದ ಹಿಂದೆ ಇವರು ನಾಪತ್ತೆಯಾಗಿದ್ದು ಜು.20ರ ಮಂಗಳವಾರ ಬೆಳಿಗ್ಗೆ ಹಳೆಯಂಗಡಿ ಪಂಚಾಯತ್ ಸದಸ್ಯರಾದ ಚಂದ್ರಕುಮಾರ್, ಅನಿಲ್, ಧನರಾಜ್ ಮತ್ತಿತರರು ಸೇರಿಕೊಂಡು ಸಮುದ್ರ ಬದಿಯಲ್ಲಿ ತೆರೆ ಅಪ್ಪಳಿಸಿ ತೇಲುತ್ತಿದ್ದ ಶವವನ್ನು ಮೇಲೆತ್ತುವಲ್ಲಿ ಸಹಕರಿಸಿದ್ದಾರೆ.
ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…