Featured

ಸಸಿಹಿತ್ಲು: ನೀರಿಗೆ ಇಳಿದ 4 ಜನ , ಅಲೆಗೆ ಸಿಲುಕಿ ಇಬ್ಬರು ಯುವಕರು ಸಮುದ್ರಪಾಲು- Vishwanews24

ಮಂಗಳೂರು, : ನಗರದ ಹೊರವಲಯ ಸಸಿಹಿತ್ಲು ಸಮೀಪ ಆಯೋಜಿಸಿದ್ದ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಭಾಗವಹಿಸಲು ಬಂದಿದ್ದ ಏಳು ಮಂದಿಯ ತಂಡದ ನಾಲ್ವರು ಯುವಕರು ಸಮುದ್ರಕ್ಕಿಳಿದಿದ್ದು, ಇಬ್ಬರು ಅಲೆಗೆ ಸಿಲುಕಿ ನಾಪತ್ತೆಯಾದ ಘಟನೆ ರವಿವಾರ ಸಂಜೆ ನಡೆದಿದೆ.
ಬಜ್ಪೆ ಸಿದ್ಧಾರ್ಥ ನಗರ ನಿವಾಸಿ ಸುಜಿತ್, ಕಾವೂರು ನಿವಾಸಿ ಗುರುಪ್ರಸಾದ್ ಸಮುದ್ರದಲ್ಲಿ ನಾಪತ್ತೆಯಾದವರು ಎಂದು ಗುರುತಿಸಲಾಗಿದೆ.

ಬಜ್ಪೆ ಮೂಲದ ಸೃಜನ್, ಕಾರ್ತಿಕ್ ಅವರನ್ನು ಸ್ಥಳೀಯ ಗಂಗಾಧರ ಪುತ್ರನ್ ಹಾಗೂ ತಂಡದ ಸದಸ್ಯರು ರಕ್ಷಣೆ ಮಾಡಿದ್ದಾರೆ. ಇವರಲ್ಲಿ ಸೃಜನ್ ತೀವ್ರ ಅಸ್ವಸ್ಥನಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಬಜ್ಪೆ ಯುವ ಟೈಗರ್ ತಂಡದ ಸ್ಪರ್ಧಾಳುಗಳಾದ ಯುವಕರು, ಸ್ಪರ್ಧೆಯ ಮೊದಲನೇ ಸುತ್ತಿನಲ್ಲಿಯೇ ಪರಾಜಯಗೊಂಡಿದ್ದರಿಂದ ನಾಲ್ವರು ಸದಸ್ಯರು ಅಗ್ಗಿದಕಳಿಯ ಸಮುದ್ರದ ಬಳಿ ಬಂದು ಈಜಾಡಲು ಮುಂದಾಗಿದ್ದರು.

ಯುವಕರನ್ನು ಸ್ಥಳೀಯರು ಹಲವು ಬಾರಿ ಎಚ್ಚರಿಸಿದ್ದಾರೆ. ಸ್ಥಳೀಯರ ಮಾತನ್ನು ಲೆಕ್ಕಿಸದೇ ಏಕಾಏಕಿ ನಾಲ್ವರು ಸಮುದ್ರದ ಅಲೆಯಲ್ಲಿ ಸಿಲುಕಿಕೊಂಡಿದ್ದಾರೆ. ಈ ವೇಳೇ ಸ್ಥಳೀಯ ಗಂಗಾಧರ ಪುತ್ರನ್ ಸಾಹಸ ಮೆರೆದು ಇಬ್ಬರನ್ನು ರಕ್ಷಿಸಲು ಯಶಸ್ವಿಯಾದರು. ಆದರೆ, ಇನ್ನಿಬ್ಬರು ಯುವಕರು ಕಡಲಿನ ಅಬ್ಬರದೊಂದಿಗೆ ಸೆಳೆತಕ್ಕೊಳಗಾದರು.

ಸಮುದ್ರದಿಂದ ಸ್ವಲ್ಪ ದೂರದಲ್ಲಿ, ಬಾಕಿಮಾರು ಗದ್ದೆಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದ ಸಂಯೋಜಕರು ಆಗಾಗ ಧ್ವನಿವರ್ಧಕದಲ್ಲಿ ‘ಸಮುದ್ರದತ್ತ ಹೋಗಬೇಡಿ’ ಎಂದು ಎಚ್ಚರಿಸುತ್ತಿದ್ದರು. ಸ್ಥಳೀಯ ಮೀನುಗಾರ ಮಹಿಳೆಯರು ಸಹ ಈ ತಂಡಕ್ಕೆ ಎಚ್ಚರಿಕೆಯನ್ನು ನೀಡಿದ್ದರು ಎನ್ನಲಾಗಿದೆ. ಘಟನೆ ವೇಳೆ ಸ್ಥಳದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜನಸಂದಣಿ ಕೂಡಿತ್ತು.

ಈ ಕುರಿತು ಸುರತ್ಕಲ್ ಪೊಲೀಸರು ಪ್ರಕರಣ ದಾಖಲಾಗಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago