Featured

ಸಹಕಾರಿಗಳಿಗೆ ಗೌರವ ಕೊಡಿ : ಸಚಿವ ಎಸ್.ಟಿ.ಸೋಮಶೇಖರ್- vishwanews24

ಬೆಂಗಳೂರು: ಸಹಕಾರ ಸಂಘಗಳಿಗೂ ರೈತರಿಗೂ ನೇರ ಸಂ ಬಂಧವಿದೆ. ಹೀಗಾಗಿ ಇಲ್ಲಿ ಕೆಲಸ ಮಾಡುವವರು ನೇರವಾಗಿ ಅನ್ನದಾತರಿಗೆ ಸಂಬಂಧಿಸಿದ, ಅವರಿಗೆ ಅನುಕೂಲವನ್ನು ಮಾಡಿಕೊಡುವ ಜವಾಬ್ದಾರಿಯುತ ಸ್ಥಾನದಲ್ಲಿರುತ್ತಾರೆ. ಹೀಗಾಗಿ ಇಲ್ಲಿ ಸಮಯ ಪರಿಪಾಲನೆ, ಶಿಸ್ತು, ಪಾರದರ್ಶಕತೆ ಬಹಳ ಮುಖ್ಯವಾಗುತ್ತದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಪರೀಕ್ಷಾರ್ಥ ಸಹಕಾರ ಸಂಘಗಳ ಸಹಾಯಕ ನಿಬಂಧಕರಿಗೆ ಕಿವಿಮಾತು ಹೇಳಿದರು.

ವಿಕಾಸಸೌಧದಲ್ಲಿ ಪರೀಕ್ಷಾರ್ಥ ಸಹಕಾರ ಸಂಘಗಳ ಸಹಾಯಕ ನಿಬಂಧಕರಿಗೆ ಆಡಳಿತಾತ್ಮಕ ವಿಷಯಗಳ ಕುರಿತುಏರ್ಪಡಿಸಲಾಗಿದ್ದ ಕಾರ್ಯಾಗಾರ ಸಭೆಯಲ್ಲಿ ಮಾತನಾಡಿದ ಸಚಿವರು, ಇಲ್ಲಿ ಈಗ ನೂತನವಾಗಿ ಸೇರ್ಪಡೆಯಾಗಿಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಇನ್ನೂ 30 ವರ್ಷಗಳ ಕಾಲ ಇಲ್ಲಿಯೇ ಕಾರ್ಯ ನಿರ್ವಹಣೆ ಮಾಡಬೇಕಿದೆ. ಹೀಗಾಗಿಸಹಕಾರ ಕ್ಷೇತ್ರ ಮತ್ತು ಇಲಾಖೆಗಳಲ್ಲಿ ಆರಂಭದ 2 ವರ್ಷಗಳಲ್ಲಿ ಕಲಿಯುವ ಕೆಲಸದ ಮೇಲೆ ಮುಂದಿನ ಯಶಸ್ಸು ನಿಂತಿರುತ್ತದೆಎಂದು ಸಚಿವರಾದ ಸೋಮಶೇಖರ್ ಅವರು ಹೇಳಿದರು.

ಸಹಕಾರಿಗಳಿಗೆ ಗೌರವ ಕೊಡಿ : ಎಸ್ ಟಿ ಎಸ್

ಇಲ್ಲಿ ಪ್ರಮುಖವಾಗಿ ಸಹಕಾರಿಗಳಿಗೆ ಗೌರವವನ್ನು ಕೊಡಬೇಕು. 45 ಸಾವಿರ ಸಹಕಾರ ಸಂಘಗಳು ಇದ್ದು, ಬಹುತೇಕ ಸಂಘಗಳುರೈತರಿಗೆ ಸಂಬಂಧಪಟ್ಟ ಸಹಕಾರಿ ಸಂಘಗಳೇ ಆಗಿವೆ. ಹೀಗಾಗಿ ಇಲ್ಲಿ ಕಾರ್ಯ ನಿರ್ವಹಣೆ ಮಾಡುವವರು ಸೇವಾ ಮನೋಭಾವವನ್ನು ಉಳ್ಳವರಾಗಿರಬೇಕು. ಇಂದಿನ ಕೆಲಸವನ್ನು ಇಂದೇ ಮಾಡಿ ಮುಗಿಸಬೇಕು . ಆಗ ಹೆಚ್ಚಿನ ಹೊರೆ ಯಾರಮೇಲೂ ಬೀಳದು ಎಂದನಿಮ್ಮ ಕುಟುಂಬದವರಿಗೂ ಸಮಯವನ್ನು ಮೀಸಲಿಡಬೇಕು. ಮತ್ತು ಅವರ, ನಿಮ್ಮ ಆರೋಗ್ಯದ ಕಡೆಯೂಗಮನಹರಿಸಿಕೊಳ್ಳಬೇಕು. 100 ವರ್ಷಗಳ ಇತಿಹಾಸ ಇರುವ ಸಹಕಾರಿ ಕ್ಷೇತ್ರಕ್ಕೆ ಇಂದು ಹೊಸದಾಗಿ ಸೇರ್ಪಡೆಗೊಂಡಿರುವಯುವ ಸಮೂ ಹ ನೀವಾಗಿದ್ದೀ ರಿ. ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ದಕ್ಷ ಸೇವೆಯನ್ನು ನೀಡಿ. ನಿಮ್ಮಅತ್ಯುತ್ತಮ ಸೇವೆಯು ಸಹಕಾರಿ ಇಲಾಖೆಗೆ ಮುಂದಿನ ದಾರಿದೀಪವಾಗಲಿ ಎಂದು ಆಶಿಸು ತ್ತೇ ನೆ ಎಂಬುದಾಗಿ ಸಹಕಾರಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಮಾಜಿ ಸಹಕಾರ ಸಚಿವರಾದ ಜಿ.ಟಿ.ದೇವೇಗೌಡ ರವರು, ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಾದ ತುಷಾರ್ಗಿರಿನಾಥ್ ರವರು, ಸಹಕಾರ ಇಲಾಖೆಯ ನಿಬಂಧಕರಾದ ಜಿಯಾವುಲ್ಲ ರವರು, ಅಪೆಕ್ಸ್ ಬ್ಯಾಂ ಕ್ ಮ್ಯಾನೇಜಿಂಗ್ ಡೈರೆಕ್ಟ ರ್ದೇವರಾಜ್ ರವರ, ಕೆಎಂಎಫ್ ಮ್ಯಾನೇಜಿಂಗ್ ಡೈರೆಕ್ಟರ್ ಸತೀಶ್ ರವರು, ಇಲಾಖೆ ಹಿರಿಯ ಅಧಿಕಾರಿಗಳಾ ದ ದಿವಾಕರ್,ವೆಂಕಟಸ್ವಾಮಿ, ಗೋಪಾ ಲಕೃಷ್ಣ ರವರು, ಆಪ್ತ ಕಾರ್ಯದರ್ಶಿಗಳಾ ದ ಶ್ರೀ ನಿವಾಸ ಗೌಡ ರವರು , ಸಹಕಾರ ಸಚಿವರ ವಿಶೇಷ ಕರ್ತವ್ಯಾಧಿಕಾರಿಗಳಾದ ದಿನೇಶ್ ಗೂಳಿಗೌಡ ರವರು ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

ಇನ್ನು, 32 ಮಂದಿ ಕರ್ನಾಟಕ ಕೋಆಪರೇಟಿವ್ ಸರ್ವಿಸ್ ನ ಅಸಿಸ್ಟೆಂಡ್ ರಿಜಿಸ್ಟ್ರಾರ್ ಆಗಿ ಒಂದು ವರ್ಷ ಪ್ರೊಬೇಷನರಿಹಂತವನ್ನು ಪೂರೈಸಿದ್ದಾರೆ. ಇವರಿಗೆ ಸಹಕಾರ ಇಲಾಖೆಯ ಸಂಪೂರ್ಣ ಪರಿಚಯವನ್ನು ಮಾಡಿಕೊಡಲಾಗುವುದು. ಜೊತೆಗೆ 5ಮಂದಿ ಅಡಿಶನಲ್ ರಿಜಿಸ್ಟ್ರಾರ್ ಗಳು ಇದ್ದಾರೆ. ಇವೆರಲ್ಲರೂ ಇನ್ನೂ ಹಲವಾರು ವರ್ಷಗಳ ಕಾಲ ಸಹಕಾರ ಇಲಾಖೆಯಲ್ಲಿಕಾರ್ಯನಿರ್ವಹಣೆಯನ್ನು ಮಾಡುವುದರಿಂದ ಅವರು ಇಲ್ಲಿ ಕೆಲಸವನ್ನು ಮಾಡಬೇಕಾಗುತ್ತದೆ. ಹೀಗಾಗಿ ಇಲಾಖೆಯ ಒಟ್ಟಾರೆ ಮಾಹಿತಿ, ಕಾರ್ಯನಿರ್ವಹಣೆ ವಿಧಾನ ಇತ್ಯಾದಿ ವಿಷಯಗಳ ಬಗ್ಗೆ ಹಿರಿಯ ಅಧಿಕಾರಿಗಳಿಂದ ಮಾರ್ಗದರ್ಶನ ಕೊಡಿಸುವ ಕೆಲಸಆಗುತ್ತಿದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದರು.ಒಂದು ವರ್ಷ ಕೋವಿಡ್ ಅವಧಿಯಲ್ಲಿ ಬಹಳ ಅತ್ಯುತ್ತಮವಾಗಿ ದಕ್ಷತೆಯಿಂದ ಕಾರ್ಯನಿರ್ವಹಣೆ ಮಾಡಿದ್ದು, ಮುಖ್ಯಮಂತ್ರಿಗಳು ಸಹ ಮೆಚ್ಚುಗೆಯನ್ನು ಸೂಚಿಸಿದ್ದಾರೆ. ಇದಲ್ಲದೆ, ಇವರೆಲ್ಲರಿಗೂ ಇಲಾಖೆಯಿಂದ ಒಂದು ಸನ್ಮಾನವನ್ನುಹಮ್ಮಿಕೊಳ್ಳುವ ಉದ್ದೇ ಶವೂ ನಮ್ಮದಾಗಿತ್ತು. ನಾಳೆಯಿಂದ ಇವರೆಲ್ಲ ಸಹಾಯಕ ನಿಬಂಧಕರಾಗಿ ಸ್ವತಂತ್ರವಾಗಿಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಅವರು ಯಾವ ರೀತಿಯಾಗಿ ಕಾರ್ಯನಿರ್ವಹಣೆ ಮಾಡಬೇಕು?ಎಂಬಿತ್ಯಾದಿಗಳ ಬಗ್ಗೆ ಇಲ್ಲಿ ಅವರಿಗೆ ಕಾರ್ಯಾಗಾರಲ್ಲಿ ಮಾಹಿತಿಯನ್ನು ನೀಡಲಾಗುವುದು ಎಂದು ಸಚಿವರು ತಿಳಿಸಿದರು

ನಮಗೆ ಇಬ್ಬರೇ ಕ್ಯಾಪ್ಟನ್ : ಸಚಿವ ಸೋಮಶೇಖರ್

ನಮಗೆ ಪ್ರತ್ಯೇ ಕವಾಗಿ ಯಾವುದೇ ಕ್ಯಾಪ್ಟನ್ ಗಳಾ ಗಲೀ, ನಾಯಕರಾಗಲೀ ಇಲ್ಲ. ಮುಖ್ಯಮಂತ್ರಿಗಳಾ ಗಿ ಬಿ.ಎಸ್.ಯಡಿಯೂರಪ್ಪಅವರು ಕ್ಯಾಪ್ಟನ್ ಆದರೆ, ಶಾಸಕರಾಗಿ, ಪಕ್ಷದ ಸದಸ್ಯನಾಗಿ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ನಳಿನ್ ಕುಮಾರ್ ಕಟೀಲ್ ಅವರುಕ್ಯಾಪ್ಟನ್. ಈ ಇಬ್ಬರು ಬಿಟ್ಟರೆ ನಮಗೆ ಬೇರೆ ಯಾವ ಕ್ಯಾಪ್ಟನ್ ಗಳೂ ರಾಜ್ಯದಲ್ಲಿ ಇಲ್ಲ ಎಂದು ಸಚಿವರಾದ ಸೋಮಶೇಖರ್ ಅವರು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago