ಉಡುಪಿ: ಬೋಳ ವ್ಯವಸಾಯ ಸೇವಾ ಸಹಕಾರಿ ಸಂಘ (ರಿ) ಬೋಳ ಇದರ ಅಧ್ಯಕ್ಷರಾದ ಬಿ. ಸದಾಶಿವ ಶೆಟ್ಟಿ ಇವರನ್ನು ಸಂಘದ ಅಧ್ಯಕ್ಷ ಹಾಗೂ ನಿರ್ದೇಶಕ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ನೀಡಿರುತ್ತಾರೆ.
ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಕುಂದಾಪುರ ಉಪವಿಭಾಗ, ಕುಂದಾಪುರ ಇವರ ಕಛೇರಿ ನಡವಳಿಯಂತೆ ಬೋಳ ಬಿ.ಸದಾಶಿವ ಶೆಟ್ಟಿ ಇವರನ್ನು ಕರ್ನಾಟಕ ಸಹಕಾರಿ ಸಂಘಗಳ ಅಧಿನಿಯಮ 1959 ರ ಪ್ರಕರಣ 29ಸಿ(8)(ಬಿ) ರೀತ್ಯಾ ಅನರ್ಹತೆಗೆ ಒಳಗಾಗಿರುವುದರಿಂದ ಕಾಯ್ದ ಕಲಂ 29ಸಿ(8) (ಡಿ) ಪ್ರಕರ ಮಂಡಲಿ ಸದಸ್ಯತ್ವದಿಂದ ಅನರ್ಹಗೊಳಿಸಿ ವಜಾ ಮಾಡಿರುತ್ತಾರೆ ಮತ್ತು ಕಲಂ 292 (10) ರ ಪ್ರಕಾರ ಈ ಸಂಘಕ್ಕೆ ಮತ್ತು ಇನ್ನಾವುದೇ ಸಹಕಾರಿ ಸಂಘದಲ್ಲಿ ಮುಂದಿನ 5 ವರ್ಷಗಳ ಅವಧಿಗೆ ಚುನಾವಣೆಯಲ್ಲಿ ಆಯ್ಕೆಯಾಗಲು ಅಥವಾ ನೇಮಕವಾಗಲು ಅನರ್ಹಗೊಳಿಸಿ ಆದೇಶಿಸಲಾಗಿದೆ ಎಂದು ಈ ಮೂಲಕ ತಿಳಿಸುತ್ತಿದ್ದೇವೆ.
ಎಂದು ಸಂಘದ ನಿರ್ದೇಶಕರಾದ ಕೆ.ಮುರಳೀಧರ ಶರ್ಮ ಸೂರ್ಯಕಾಂತ್ ಶೆಟ್ಟಿ,ಜಯರಾಮ ಸಾಲ್ಯಾನ್,ಪ್ರವೀಣ್ ಸಾಲ್ಯಾನ್,ಗಣಪತಿ ಭಟ್,ದಿವ್ಯಾ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಅಧಿಕಾರ ದುರುಪಯೋಗ ,ಸರ್ವಾಧಿಕಾರ ಧೋರಣೆ ,ಸಹಕಾರಿ ಕಾನೂನಿಗೆ ವಿರುದ್ಧವಾಗಿ ವ್ಯವಹರಿಸಿರುವುದು,ಹಣದ ದುರುಪಯೋಗ ಈ ಎಲ್ಲಾ ಕಾರಣಗಳಿಗೆ ಅನರ್ಹಗೊಳಿಸಲಾಗಿದೆ ಎಂದು ತಿಳಿಸಿರುತ್ತಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…