Featured

ಸಹಕಾರ ರತ್ನ ಪ್ರಶಸ್ತಿ ರಾಷ್ಟ್ರೀಯವಾದಿ ಚಿಂತನೆಯ ಯಶ್‌ಪಾಲ್ ಸುವರ್ಣ ಸಾಧನೆಗೆ ಸಂದ ಗೌರವ : ಶ್ರೀ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿ -Vishwanews24

ಸಹಕಾರ ರತ್ನ ಪ್ರಶಸ್ತಿ ರಾಷ್ಟ್ರೀಯವಾದಿ ಚಿಂತನೆಯ ಯಶ್‌ಪಾಲ್ ಸುವರ್ಣ ಸಾಧನೆಗೆ ಸಂದ ಗೌರವ : ಶ್ರೀ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿ

ರಾಷ್ಟ್ರೀಯವಾದಿ ಚಿಂತನೆಯೊoದಿಗೆ ಹಿಂದೂತ್ವದ ವಿಚಾರದಲ್ಲಿ ಗಟ್ಟಿ ಧ್ವನಿಯಾಗಿ ಸಹಕಾರ, ಮೀನುಗಾರಿಕೆ, ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿ ತಮ್ಮ ದಿಟ್ಟ ನಿರ್ಧಾರ, ನಾಯಕತ್ವ ಗುಣಗಳಿಂದ ಬೆಳದು ಬಂದ ಯಶ್‌ಪಾಲ್ ಸುವರ್ಣರವರನ್ನು ಅರಸಿ ಬಂದ ಈ ಬಾರಿಯ ಸಹಕಾರ ರತ್ನ ಪ್ರಶಸ್ತಿ ಅವರ ಸಾಧನೆಗೆ ಸಂದ ಗೌರವವಾಗಿದ್ದು, ಮುಂದಿನ ದಿನದಲ್ಲಿ ಓರ್ವ ಜನಪ್ರತಿನಿಧಿಯಾಗಿ ಜನಸಾಮಾನ್ಯರ ಸೇವೆಗೆ ಅವಕಾಶ ಒದಗಿ ಬರಲಿ ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿ ಹೇಳಿದರು.

ಸಹಕಾರ ರತ್ನ ಯಶ್‌ಪಾಲ್ ಸುವರ್ಣ ಅಭಿನಂದನಾ ಸಮಿತಿ ಹಿರಿಯಡ್ಕ ವತಿಯಿಂದ ಆಯೋಜಿಸಿದ್ದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಯಶ್‌ಪಾಲ್ ಸುವರ್ಣ ರವರ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚಿಸಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ ಅತ್ಯಂತ ಕಿರಿಯ ವಯಸ್ಸಿನಲ್ಲಿ ಸಹಕಾರ ಕ್ಷೇತ್ರದ ಸಾಧನೆಗೆ ಅರ್ಹವಾಗಿಯೇ ಸಹಕಾರ ರತ್ನ ಗೌರವಕ್ಕೆ ಯಶ್‌ಪಾಲ್ ಸುವರ್ಣ ಭಾಜನರಾಗಿದ್ದಾರೆ, ಮುಂದಿನ ದಿನಗಳಲ್ಲಿ ರಾಜಕೀಯವಾಗಿಯೂ ಉನ್ನತ ಸ್ಥಾನಮಾನ ಒಲಿದು ಬರಲಿ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಸುರೇಶ್ ನಾಯಕ್ ಕುಯಿಲಾಡಿ ಮಾತನಾಡಿ ಸಹಕಾರ ಕ್ಷೇತ್ರದಲ್ಲಿ ಯಶ್‌ಪಾಲ್ ಸುವರ್ಣ ಸಾಧನೆ ಸರ್ವರಿಗೂ ಸ್ಪೂರ್ತಿಯಾಗಿದ್ದು, ಮುಂದಿನ ದಿನಗಳಲ್ಲಿ ಸಹಕಾರಿ ಕ್ಷೇತ್ರದಲ್ಲೂ ಬಿಜೆಪಿ ಪಕ್ಷವನ್ನು ಸಂಘಟಿಸುವ ನೇತೃತ್ವ ಯಶ್‌ಪಾಲ್ ಸುವರ್ಣ ವಹಿಸಲಿ ಎಂದರು.

ಅಭಿನoದನೆ ಸ್ವೀಕರಿಸಿದ ಯಶ್‌ಪಾಲ್ ಸುವರ್ಣ ಮಾತನಾಡಿ ಸಹಕಾರ ರತ್ನ ಪ್ರಶಸ್ತಿ ನನ್ನ ವೈಯುಕ್ತಿಕ ಸಾಧನೆಗಿಂತ ನನ್ನ ಅಧ್ಯಕ್ಷತೆಯ ಮೀನು ಮಾರಾಟ ಫೆಡರೇಶನ್ ಮತ್ತು ಮಹಾಲಕ್ಷ್ಮಿ ಬ್ಯಾಂಕಿನ ಆಡಳಿತ ಮಂಡಳಿ, ಸದಸ್ಯರು, ಗ್ರಾಹಕರು, ಮಾರ್ಗದರ್ಶಕರು ಹಾಗೂ ಸಿಬ್ಬಂದಿಗಳ ಸಹಕಾರ ಸಂದ ಗೌರವವಾಗಿದೆ. ಈ ಸನ್ಮಾನ ಇನ್ನೂ ಹೆಚ್ಚಿನ ಸಮಾಜಮುಖಿ ಕಾರ್ಯಗಳಿಗೆ ಪ್ರೇರಣೆ ನೀಡಿದೆ ಎಂದರು.

ಸಮಾರಂಭದಲ್ಲಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಹಿರಿಯಡ್ಕ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಅಮರನಾಥ ಶೆಟ್ಟಿ, ಹೆಬ್ರಿ ಕೋಮಲ್ ಫೀಡ್ಸ್ನ ಆಡಳಿತ ನಿರ್ದೇಶಕರಾದ ಸಿದ್ಧಿ ಪ್ರಸಾದ್ ಎಂ. ಶೆಣೈ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಶ್ರೀ ದುರ್ಗಾಪರಮೇಶ್ವರಿ ಮರಾಠಿ ಕಲಾ ಸಂಘ, ರಾಜರಾಜೇಶ್ವರಿ ಕ್ರಿಕೆಟರ್ಸ್ ಅಂಜಾರ್, ಹಿಂದೂ ಯುವಸೇನೆ ಹಿರಿಯಡ್ಕ ಮತ್ತು ಭೈರಂಪಳ್ಳಿ ಶಾಖೆ, ಕೋಮಲ್ ಫೀಡ್ಸ್ ವತಿಯಿಂದ ಯಶ್‌ಪಾಲ್ ಸುವರ್ಣರವರನ್ನು ಸನ್ಮಾನಿಸಿ ಅಭಿನಂದಿಸಿದರು.

ಅಭಿನoದನಾ ಸಮಿತಿಯ ಅಧ್ಯಕ್ಷರಾದ ಪ್ರವೀಣ್ ಪೂಜಾರಿ ಸ್ವಾಗತಿಸಿದರು. ಸಮಿತಿಯ ಸಂಚಾಲಕರಾದ ಶೇಖರ್ ಶೆಟ್ಟಿ ಹಿರಿಯಡ್ಕ, ಶುಭಕರ ಶೆಟ್ಟಿ ಕಬಿಯಾಡಿ, ಸಂದೀಪ್ ಶೆಟ್ಟಿ ಬಡಗಬೆಟ್ಟು, ರೋಹಿತ್ ಶೆಟ್ಟಿ ಬೆಳ್ಳರ್ಪಾಡಿ, ಪ್ರದೀಪ್ ಶೆಟ್ಟಿ ಭೈರಂಪಳ್ಳಿ, ಸನತ್ ಶೆಟ್ಟಿ ಹಿರಿಯಡ್ಕ, ಅಶೋಕ್ ಶೆಟ್ಟಿ, ನಿತಿನ್ ಶೆಟ್ಟಿ, ವಿನಯ್ ಪೂಜಾರಿ, ಪ್ರಶಾಂತ್ ನಾಯ್ಕ್ ಅಂಜಾರು ಉಪಸ್ಥಿತರಿದ್ದರು, ಸತೀಶ್ ಶೆಟ್ಟಿ ಚಿತ್ರಪಾಡಿ ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago