Featured

ಸಹಾಯಕ ಪ್ರೊಫೆಸರ್ ಹುದ್ದೆ ಆಕಾಂಕ್ಷಿಗಳಿಗೆ  ಗುಡ್‌ ನ್ಯೂಸ್‌- ಪಿಎಚ್‌ಡಿ ಕಡ್ಡಾಯವಲ್ಲ ಎಂದ ಯುಜಿಸಿ – Vishwanews24

ಸಹಾಯಕ ಪ್ರೊಫೆಸರ್ ಹುದ್ದೆ ಆಕಾಂಕ್ಷಿಗಳಿಗೆ  ಗುಡ್‌ ನ್ಯೂಸ್‌ ; ಪಿಎಚ್‌ಡಿ ಕಡ್ಡಾಯವಲ್ಲ ಎಂದ ಯುಜಿಸಿ – Vishwanews24

ನವದೆಹಲಿ: ಸಹಾಯಕ ಪ್ರೊಫೆಸರ್ ಹುದ್ದೆಗಳಿಗೆ ಪಿಎಚ್‌ಡಿ ಕಡ್ಡಾಯವಾಗಿದೆ. ಆದರೆ ಈ ಬಾರಿ ಈ ನಿಯಮದಿಂದ ಅನುದಾನ ಆಯೋಗ ಸಡಿಲಿಕೆ ನೀಡಿದೆ. ಕಡ್ಡಾಯವಾಗಿ ಪಿಎಚ್‌ಡಿ ಹೊಂದಿರಲೇಬೇಕು ಎಂದಿರುವ ತನ್ನ ಆದೇಶವನ್ನು ತಾತ್ಕಾಲಿಕವಾಗಿ ತಡೆಹಿಡಿದಿರುವ ಆಯೋಗ, ಕಡ್ಡಾಯವಾಗಿ ಪಿಎಚ್‌ಡಿ ಹೊಂದುವ ಅಗತ್ಯವಿಲ್ಲ ಎಂದು ಹೇಳಿದೆ.

ಕರೊನಾ ಹಿನ್ನೆಲೆಯಲ್ಲಿ ಈ ವರ್ಷ ಸಹಾಯಕ ಪ್ರಾಧ್ಯಾಪಕರನ್ನು ನೇಮಿಸಿಕೊಳ್ಳಲು ಪಿಎಚ್‌ಡಿಯನ್ನು ಕನಿಷ್ಠ ಅರ್ಹತೆಯನ್ನಾಗಿ ಮಾಡುವ ಯೋಜನೆಯನ್ನು ಮುಂದುವರಿಸದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಆದ್ದರಿಂದ ಈ ಆದೇಶ ಹೊರಡಸಲಾಗಿದೆ ಎಂದಿರುವ ಆಯೋಗ, ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪಿಎಚ್‌ಡಿ ಕಡ್ಡಾಯ ಎಂಬ ಆದೇಶವನ್ನು ಜುಲೈ 2023ರ ಜುಲೈ 1ರ ಮುಂದೂಡಿದೆ. ಇದರ ಅರ್ಥ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪಿಎಚ್‌ಡಿ ಕಡ್ಡಾಯವಲ್ಲ ಎಂದ ಈ ಆದೇಶವು 2023ರ ಜುಲೈ1ರವರೆಗೆ ಚಾಲ್ತಿಯಲ್ಲಿ ಇರುತ್ತದೆ.

2018 ರಲ್ಲಿ, ವಿಶ್ವವಿದ್ಯಾಲಯ ಅನುದಾನ ಆಯೋಗ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಪ್ರವೇಶ ಮಟ್ಟದ ಹುದ್ದೆಗಳ ನೇಮಕಾತಿಗಳ ಮಾನದಂಡಗಳನ್ನು ನಿಗದಿ ಮಾಡಿತ್ತು. ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಮೂರು ವರ್ಷಗಳ ಗಡುವು ನೀಡಲಾಗಿತ್ತು. 2021-22ರ ಅವಧಿಗೆ ಇವರಿಗೆ ಬಡ್ತಿ ನೀಡುವ ಸಮಯದಲ್ಲಿ ಇದನ್ನು ಪರಿಗಣಿಸಬೇಕು ಎಂದು ಸೂಚಿಸಲಾಗಿತ್ತು. ಈ ಅವಧಿಯಲ್ಲಿ ಅವರು ಪಿಎಚ್‌ಡಿ ಮುಗಿಸಬೇಕು ಎಂದು ಹೇಳಲಾಗಿತ್ತು. ಅದನ್ನೀಗ ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ಪಾಸಾದ ಸ್ನಾತಕೋತ್ತರ ಪದವೀಧರರು ಈ ಹುದ್ದೆಯಲ್ಲಿ ಸದ್ಯ ಮುಂದುವರಿಯಲು ಅವಕಾಶ ಕಲ್ಪಿಸಲಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago