Featured

ಸಹಾಯಕ ಪ್ರೊಫೆಸರ್ ಹುದ್ದೆ ಆಕಾಂಕ್ಷಿಗಳಿಗೆ  ಗುಡ್‌ ನ್ಯೂಸ್‌- ಪಿಎಚ್‌ಡಿ ಕಡ್ಡಾಯವಲ್ಲ ಎಂದ ಯುಜಿಸಿ – Vishwanews24

ಸಹಾಯಕ ಪ್ರೊಫೆಸರ್ ಹುದ್ದೆ ಆಕಾಂಕ್ಷಿಗಳಿಗೆ  ಗುಡ್‌ ನ್ಯೂಸ್‌ ; ಪಿಎಚ್‌ಡಿ ಕಡ್ಡಾಯವಲ್ಲ ಎಂದ ಯುಜಿಸಿ – Vishwanews24

ನವದೆಹಲಿ: ಸಹಾಯಕ ಪ್ರೊಫೆಸರ್ ಹುದ್ದೆಗಳಿಗೆ ಪಿಎಚ್‌ಡಿ ಕಡ್ಡಾಯವಾಗಿದೆ. ಆದರೆ ಈ ಬಾರಿ ಈ ನಿಯಮದಿಂದ ಅನುದಾನ ಆಯೋಗ ಸಡಿಲಿಕೆ ನೀಡಿದೆ. ಕಡ್ಡಾಯವಾಗಿ ಪಿಎಚ್‌ಡಿ ಹೊಂದಿರಲೇಬೇಕು ಎಂದಿರುವ ತನ್ನ ಆದೇಶವನ್ನು ತಾತ್ಕಾಲಿಕವಾಗಿ ತಡೆಹಿಡಿದಿರುವ ಆಯೋಗ, ಕಡ್ಡಾಯವಾಗಿ ಪಿಎಚ್‌ಡಿ ಹೊಂದುವ ಅಗತ್ಯವಿಲ್ಲ ಎಂದು ಹೇಳಿದೆ.

ಕರೊನಾ ಹಿನ್ನೆಲೆಯಲ್ಲಿ ಈ ವರ್ಷ ಸಹಾಯಕ ಪ್ರಾಧ್ಯಾಪಕರನ್ನು ನೇಮಿಸಿಕೊಳ್ಳಲು ಪಿಎಚ್‌ಡಿಯನ್ನು ಕನಿಷ್ಠ ಅರ್ಹತೆಯನ್ನಾಗಿ ಮಾಡುವ ಯೋಜನೆಯನ್ನು ಮುಂದುವರಿಸದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಆದ್ದರಿಂದ ಈ ಆದೇಶ ಹೊರಡಸಲಾಗಿದೆ ಎಂದಿರುವ ಆಯೋಗ, ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪಿಎಚ್‌ಡಿ ಕಡ್ಡಾಯ ಎಂಬ ಆದೇಶವನ್ನು ಜುಲೈ 2023ರ ಜುಲೈ 1ರ ಮುಂದೂಡಿದೆ. ಇದರ ಅರ್ಥ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪಿಎಚ್‌ಡಿ ಕಡ್ಡಾಯವಲ್ಲ ಎಂದ ಈ ಆದೇಶವು 2023ರ ಜುಲೈ1ರವರೆಗೆ ಚಾಲ್ತಿಯಲ್ಲಿ ಇರುತ್ತದೆ.

2018 ರಲ್ಲಿ, ವಿಶ್ವವಿದ್ಯಾಲಯ ಅನುದಾನ ಆಯೋಗ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಪ್ರವೇಶ ಮಟ್ಟದ ಹುದ್ದೆಗಳ ನೇಮಕಾತಿಗಳ ಮಾನದಂಡಗಳನ್ನು ನಿಗದಿ ಮಾಡಿತ್ತು. ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವವರಿಗೆ ಮೂರು ವರ್ಷಗಳ ಗಡುವು ನೀಡಲಾಗಿತ್ತು. 2021-22ರ ಅವಧಿಗೆ ಇವರಿಗೆ ಬಡ್ತಿ ನೀಡುವ ಸಮಯದಲ್ಲಿ ಇದನ್ನು ಪರಿಗಣಿಸಬೇಕು ಎಂದು ಸೂಚಿಸಲಾಗಿತ್ತು. ಈ ಅವಧಿಯಲ್ಲಿ ಅವರು ಪಿಎಚ್‌ಡಿ ಮುಗಿಸಬೇಕು ಎಂದು ಹೇಳಲಾಗಿತ್ತು. ಅದನ್ನೀಗ ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ಪಾಸಾದ ಸ್ನಾತಕೋತ್ತರ ಪದವೀಧರರು ಈ ಹುದ್ದೆಯಲ್ಲಿ ಸದ್ಯ ಮುಂದುವರಿಯಲು ಅವಕಾಶ ಕಲ್ಪಿಸಲಾಗಿದೆ.

Vishwa News 24

Recent Posts

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

42 minutes ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

1 hour ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

1 hour ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

2 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

2 hours ago

ಬೆಳ್ತಂಗಡಿ : ಜೂನ್ 1 ರಿಂದ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು – vishwanews24

ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…

2 hours ago