ಬೆಂಗಳೂರು: ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನೀಲ್ ಕುಮಾರ್ ಇಂದು 1912 ಸಹಾಯವಾಣಿ ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಹಾನವಮಿ ಹಬ್ಬದ ರಜಾ ದಿನದಂದು ಕೂಡ ಇಲಾಖಾ ಕಾರ್ಯಕ್ಷಮತೆ ಪರಿಶೀಲಿಸಲು ಸಹಾಯವಾಣಿಗೆ ಭೇಟಿ ನೀಡಿ ಬರುವ ಕರೆಗಳ ವಿವರ ಪಡೆದು, ಖುದ್ದು ಗ್ರಾಹಕರ ಕರೆಗಳನ್ನು ಸ್ವೀಕರಿಸಿ ದೂರುಗಳನ್ನು ಆಲಿಸಿ ಶೀಘ್ರ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಹಾಯವಾಣಿಯ ಕಾರ್ಯ ಹೇಗೆ ನಡೆಯುತ್ತಿದೆ ಎಂದು ಸ್ವತಃ ಪರಿಶೀಲಿಸಲು ಸಚಿವರು ತೆರಳಿದ್ದರು. ಸಚಿವರ ದಿಢೀರ್ ಭೇಟಿಗೆ ಸಹಾಯವಾಣಿಯ ಸಿಬ್ಬಂದಿ ಕೊಂಚ ಗಲಿಬಿಲಿಗೊಂಡರು. ಪರಿಶೀಲನೆ ವೇಳೆ ಗ್ರಾಹಕರ ಕರೆಗಳನ್ನು ತಾವೇ ಸ್ವೀಕರಿಸಿ ಅವರ ದೂರುಗಳನ್ನ ಆಲಿಸಿ ಸ್ಥಳದಲ್ಲೇ ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ಮಾಡಿ ಶೀಘ್ರ ಸಮಸ್ಯೆ ಬಗೆಹರಿಸಲು ಸೂಚನೆ ನೀಡಿದರು. ಅಲ್ಲದೇ ಪ್ರತಿನಿತ್ಯ 1912 ಸಹಾಯವಾಣಿಗೆ ಎಷ್ಟು ಕರೆಗಳು ಬರುತ್ತಿವೆ ಹಾಗೂ ದೂರುಗಳ ವಿಲೇವಾರಿ ಬಗ್ಗೆ ಮಾಹಿತಿ ಪಡೆದುಕೊಂಡರು. ಪ್ರತಿನಿತ್ಯ 25 ಸಾವಿರಕ್ಕೂ ಅಧಿಕ ಕರೆಗಳು ಬೆಸ್ಕಾಂ ವ್ಯಾಪ್ತಿಯಲ್ಲಿ ಸಹಾಯವಾಣಿಗೆ ಬರುತ್ತಿದ್ದು, ಇನ್ನಷ್ಟು ಶೀಘ್ರದಲ್ಲಿ ದೂರುಗಳ ವಿಲೇವಾರಿ ಆಗಬೇಕೆಂದು ಸೂಚಿಸಿದರು.
ಇನ್ನೆರಡು ದಿನಗಳಲ್ಲಿ ಅಧಿಕಾರಿಗಳ ಸಭೆ ಕರೆದು ಈ ಪ್ರಕ್ರಿಯೆ ಇನ್ನಷ್ಟು ಸುಲಲಿತ ಹಾಗೂ ಹೆಚ್ಚು ಜನಸ್ನೇಹಿ ಮಾಡುವ ಬಗ್ಗೆ ಸಭೆ ಮಾಡಲಾಗುವುದು ಎಂದರು. ಇಲಾಖೆ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದೆ ಇದನ್ನು ಇನ್ಮಷ್ಟು ಚುರುಕುಗೊಳಿಸುವ ಪ್ರಯತ್ನ ಮಾಡಲಾಗುವುದು ಎಂದು ಇಂಧನ ಸಚಿವ ವಿ ಸುನೀಲ್ ಕುಮಾರ್ ಹೇಳಿದರು.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…