Featured

ಸಹಾಯವಾಣಿ ಕರೆ ಸ್ವೀಕರಿಸಿ ಗ್ರಾಹಕರ‌ ದೂರು ಆಲಿಸಿದ ಸಚಿವ‌‌ ವಿ.‌ ಸುನೀಲ್‌ ಕುಮಾರ್ – Vishwanews24

ಸಹಾಯವಾಣಿ ಕರೆ ಸ್ವೀಕರಿಸಿ ಗ್ರಾಹಕರ‌ ದೂರು ಆಲಿಸಿದ ಸಚಿವ‌‌ ವಿ.‌ ಸುನೀಲ್‌ ಕುಮಾರ್ – Vishwanews24

ಬೆಂಗಳೂರು: ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನೀಲ್‌ ಕುಮಾರ್ ಇಂದು 1912 ಸಹಾಯವಾಣಿ ಕಚೇರಿಗೆ‌ ದಿಢೀರ್ ಭೇಟಿ ನೀಡಿ ಪರಿಶೀಲನೆ‌ ನಡೆಸಿದರು.

ಮಹಾನವಮಿ ಹಬ್ಬದ ರಜಾ ದಿನದಂದು ಕೂಡ ಇಲಾಖಾ ಕಾರ್ಯಕ್ಷಮತೆ ಪರಿಶೀಲಿಸಲು ಸಹಾಯವಾಣಿಗೆ ಭೇಟಿ ನೀಡಿ ಬರುವ ಕರೆಗಳ‌ ವಿವರ‌ ಪಡೆದು, ಖುದ್ದು ಗ್ರಾಹಕರ‌ ಕರೆಗಳನ್ನು ಸ್ವೀಕರಿಸಿ ದೂರುಗಳನ್ನು ಆಲಿಸಿ ಶೀಘ್ರ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ‌ ನೀಡಿದರು.

ಸಹಾಯವಾಣಿಯ ಕಾರ್ಯ ಹೇಗೆ ನಡೆಯುತ್ತಿದೆ‌‌ ಎಂದು‌ ಸ್ವತಃ ಪರಿಶೀಲಿಸಲು ಸಚಿವರು ತೆರಳಿದ್ದರು. ಸಚಿವರ ದಿಢೀರ್ ಭೇಟಿಗೆ ಸಹಾಯವಾಣಿಯ ಸಿಬ್ಬಂದಿ ಕೊಂಚ‌ ಗಲಿಬಿಲಿಗೊಂಡರು. ಪರಿಶೀಲನೆ‌ ವೇಳೆ ಗ್ರಾಹಕರ ಕರೆಗಳನ್ನು ತಾವೇ ಸ್ವೀಕರಿಸಿ ಅವರ ದೂರುಗಳನ್ನ‌ ಆಲಿಸಿ ಸ್ಥಳದಲ್ಲೇ ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ಮಾಡಿ ಶೀಘ್ರ ಸಮಸ್ಯೆ ಬಗೆಹರಿಸಲು ಸೂಚನೆ‌ ನೀಡಿದರು. ಅಲ್ಲದೇ ಪ್ರತಿನಿತ್ಯ 1912 ಸಹಾಯವಾಣಿಗೆ ಎಷ್ಟು ಕರೆಗಳು ಬರುತ್ತಿವೆ ಹಾಗೂ ದೂರುಗಳ ವಿಲೇವಾರಿ ಬಗ್ಗೆ ಮಾಹಿತಿ ಪಡೆದುಕೊಂಡರು. ಪ್ರತಿನಿತ್ಯ 25 ಸಾವಿರಕ್ಕೂ ಅಧಿಕ ಕರೆಗಳು ಬೆಸ್ಕಾಂ ವ್ಯಾಪ್ತಿಯಲ್ಲಿ ಸಹಾಯವಾಣಿಗೆ ಬರುತ್ತಿದ್ದು, ಇನ್ನಷ್ಟು ಶೀಘ್ರದಲ್ಲಿ ದೂರುಗಳ ವಿಲೇವಾರಿ ಆಗಬೇಕೆಂದು ಸೂಚಿಸಿದರು.

ಇನ್ನೆರಡು ದಿನಗಳಲ್ಲಿ‌ ಅಧಿಕಾರಿಗಳ‌ ಸಭೆ‌ ಕರೆದು‌ ಈ ಪ್ರಕ್ರಿಯೆ ಇನ್ನಷ್ಟು ಸುಲಲಿತ ಹಾಗೂ ಹೆಚ್ಚು ಜನ‌ಸ್ನೇಹಿ ಮಾಡುವ ಬಗ್ಗೆ ಸಭೆ ಮಾಡಲಾಗುವುದು ಎಂದರು. ಇಲಾಖೆ‌ ಸಮರ್ಥವಾಗಿ‌ ಕಾರ್ಯ ನಿರ್ವಹಿಸುತ್ತಿದೆ ಇದನ್ನು ಇನ್ಮಷ್ಟು ಚುರುಕುಗೊಳಿಸುವ ಪ್ರಯತ್ನ‌ ಮಾಡಲಾಗುವುದು ಎಂದು ಇಂಧನ ಸಚಿವ ವಿ ಸುನೀಲ್‌ ಕುಮಾರ್ ಹೇಳಿದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago