ಬೆಂಗಳೂರು: ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನೀಲ್ ಕುಮಾರ್ ಇಂದು 1912 ಸಹಾಯವಾಣಿ ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಹಾನವಮಿ ಹಬ್ಬದ ರಜಾ ದಿನದಂದು ಕೂಡ ಇಲಾಖಾ ಕಾರ್ಯಕ್ಷಮತೆ ಪರಿಶೀಲಿಸಲು ಸಹಾಯವಾಣಿಗೆ ಭೇಟಿ ನೀಡಿ ಬರುವ ಕರೆಗಳ ವಿವರ ಪಡೆದು, ಖುದ್ದು ಗ್ರಾಹಕರ ಕರೆಗಳನ್ನು ಸ್ವೀಕರಿಸಿ ದೂರುಗಳನ್ನು ಆಲಿಸಿ ಶೀಘ್ರ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಹಾಯವಾಣಿಯ ಕಾರ್ಯ ಹೇಗೆ ನಡೆಯುತ್ತಿದೆ ಎಂದು ಸ್ವತಃ ಪರಿಶೀಲಿಸಲು ಸಚಿವರು ತೆರಳಿದ್ದರು. ಸಚಿವರ ದಿಢೀರ್ ಭೇಟಿಗೆ ಸಹಾಯವಾಣಿಯ ಸಿಬ್ಬಂದಿ ಕೊಂಚ ಗಲಿಬಿಲಿಗೊಂಡರು. ಪರಿಶೀಲನೆ ವೇಳೆ ಗ್ರಾಹಕರ ಕರೆಗಳನ್ನು ತಾವೇ ಸ್ವೀಕರಿಸಿ ಅವರ ದೂರುಗಳನ್ನ ಆಲಿಸಿ ಸ್ಥಳದಲ್ಲೇ ಸಂಬಂಧಿಸಿದ ಅಧಿಕಾರಿಗಳಿಗೆ ಕರೆ ಮಾಡಿ ಶೀಘ್ರ ಸಮಸ್ಯೆ ಬಗೆಹರಿಸಲು ಸೂಚನೆ ನೀಡಿದರು. ಅಲ್ಲದೇ ಪ್ರತಿನಿತ್ಯ 1912 ಸಹಾಯವಾಣಿಗೆ ಎಷ್ಟು ಕರೆಗಳು ಬರುತ್ತಿವೆ ಹಾಗೂ ದೂರುಗಳ ವಿಲೇವಾರಿ ಬಗ್ಗೆ ಮಾಹಿತಿ ಪಡೆದುಕೊಂಡರು. ಪ್ರತಿನಿತ್ಯ 25 ಸಾವಿರಕ್ಕೂ ಅಧಿಕ ಕರೆಗಳು ಬೆಸ್ಕಾಂ ವ್ಯಾಪ್ತಿಯಲ್ಲಿ ಸಹಾಯವಾಣಿಗೆ ಬರುತ್ತಿದ್ದು, ಇನ್ನಷ್ಟು ಶೀಘ್ರದಲ್ಲಿ ದೂರುಗಳ ವಿಲೇವಾರಿ ಆಗಬೇಕೆಂದು ಸೂಚಿಸಿದರು.
ಇನ್ನೆರಡು ದಿನಗಳಲ್ಲಿ ಅಧಿಕಾರಿಗಳ ಸಭೆ ಕರೆದು ಈ ಪ್ರಕ್ರಿಯೆ ಇನ್ನಷ್ಟು ಸುಲಲಿತ ಹಾಗೂ ಹೆಚ್ಚು ಜನಸ್ನೇಹಿ ಮಾಡುವ ಬಗ್ಗೆ ಸಭೆ ಮಾಡಲಾಗುವುದು ಎಂದರು. ಇಲಾಖೆ ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದೆ ಇದನ್ನು ಇನ್ಮಷ್ಟು ಚುರುಕುಗೊಳಿಸುವ ಪ್ರಯತ್ನ ಮಾಡಲಾಗುವುದು ಎಂದು ಇಂಧನ ಸಚಿವ ವಿ ಸುನೀಲ್ ಕುಮಾರ್ ಹೇಳಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…