Featured

ಸಾಂಪ್ರದಾಯಿಕ ಮಂಗಳೂರು ದಸರಾ ; ಟ್ಯಾಬ್ಲೋ ಹಾಗೂ ದೇವರ ಮೆರವಣಿಗೆ ಇರುವುದಿಲ್ಲ : ಜನಾರ್ದನ ಪೂಜಾರಿ -Vishwanews24

ಸಾಂಪ್ರದಾಯಿಕ ಮಂಗಳೂರು ದಸರಾ ; ಟ್ಯಾಬ್ಲೋ ಹಾಗೂ ದೇವರ ಮೆರವಣಿಗೆ ಇರುವುದಿಲ್ಲ : ಜನಾರ್ದನ ಪೂಜಾರಿ -Vishwanews24

ಮಂಗಳೂರು, :ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಪ್ರತೀ ವರ್ಷ ನಡೆಯುವ ಮಂಗಳೂರು ದಸರಾ ಉತ್ಸವ ಎಂದಿನಂತೆ ಈ ಬಾರಿಯು ನಡೆಯಲಿದೆ. ಆದರೆ ಮಂಗಳೂರು ದಸರಾದಲ್ಲಿ ಈ ಬಾರಿ ಟ್ಯಾಬ್ಲೋ ಹಾಗೂ ದೇವರ ಮೆರವಣಿಗೆ ಇರುವುದಿಲ್ಲ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ನವೀಕರಣದ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ತಿಳಿಸಿದ್ದಾರೆ.

ಜಗದ್ವಿಖ್ಯಾತ ಮಂಗಳೂರು ದಸರಾಕ್ಕೆ ತನ್ನದೇ ಆದ ಇತಿಹಾಸವಿದ್ದು, ಅದನ್ನು ಸರಕಾರ ಮಾರ್ಗಸೂಚಿ ಯನ್ನು ಪಾಲಿಸಿಕೊಂಡು ಈ ಬಾರಿಯೂ ಸಂಪ್ರದಾಯದಂತೆ ನಡೆಸಲು ನಿರ್ಧರಿಸಲಾಗಿದೆ. ಯಾವುದೇ ಕಾರಣಕ್ಕೂ ಮಂಗಳೂರು ದಸರಾ ಮಹೋತ್ಸವವನ್ನು ನಿಲ್ಲಿಸಬಾರದು ಎಂದಿನಂತೆ ವೈಭವದಿಂದ ನಡೆಸಬೇಕು ಎಂದು ನಿರ್ಧರಿಸಲಾಗಿದೆ.

ಇದು ಭಕ್ತರು, ಉದ್ಯಮಿಗಳು, ವ್ಯಾಪಾರಿಗಳು, ಹಿತೈಷಿಗಳ ವಲಯಗಳ ಅಭಿಪ್ರಾಯವೂ ಆಗಿದೆ. ಈ ಕಾರಣದಿಂದ ಗಂಭೀರವಾಗಿ ಅಲೋಚಿಸಿದ ಆಡಳಿತ ಮಂಡಳಿ ಸರಕಾರದ ಮಾರ್ಗಸೂಚಿಯಂತೆ ಸಾಂಪ್ರದಾಯಿಕ ದಸರಾ ನಡೆಸಲು ನಿರ್ಧರಿಸಲಾಗಿದೆ ಎಂದು ಜನಾರ್ದನ ಪೂಜಾರಿ ತಿಳಿಸಿದ್ದಾರೆ.

ದಸರಾ ಮಹೋತ್ಸವದಲ್ಲಿ ಎಂದಿನಂತೆ ದರ್ಬಾರು ಮಂಟಪದಲ್ಲಿ ಮಹಾಗಣಪತಿ, ಶಾರದೆ, ನವದುರ್ಗೆಯರ ಮೂರ್ತಿ ಪ್ರತಿಷ್ಠಾಪನೆ ನಡೆಯಲಿದೆ. ಆದರೆ ಮಂಗಳೂರು ದಸರಾದಲ್ಲಿ ಈ ಬಾರಿ ಟ್ಯಾಬ್ಲೋ, ದೇವರ ಮೆರವಣಿಗೆ ಇರುವುದಿಲ್ಲ. ಕ್ಷೇತ್ರವನ್ನು ಸಂಪೂರ್ಣ ವಿದ್ಯುದ್ದೀಪಗಳಿಂದ ಅಲಂಕರಿಸಲಾ ಗುವುದು. ಆದರೆ ನಗರದಲ್ಲಿ ಯಾವುದೇ ಅಲಂಕಾರ ನಡೆಸದಿರಲು ನಿರ್ಧರಿಸಲಾಗಿದೆ ಎಂದು ಪೂಜಾರಿ ತಿಳಿಸಿದ್ದಾರೆ.

ದಸರಾ ಮಹೋತ್ಸವ ಸಂದರ್ಭ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತಾದಿಗಳು ಸಾಮಾಜಿಕ ಅಂತರ ಕಾಪಾಡಿಕೊಂಡು ಆರೋಗ್ಯದ ಬಗ್ಗೆ ಎಚ್ಚರವಹಿಸುವ ನಿಟ್ಟಿನಲ್ಲಿ ಕ್ಷೇತ್ರದ ಆಡಳಿತ ಸಮಿತಿ ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ.

ಕೊರೊನಾ ಸೋಂಕಿನ ಮಧ್ಯೆಯೂ ಮಂಗಳೂರು ದಸರಾ ಮಹೋತ್ಸವ ಯಶಸ್ವಿಯಾಗಿ ನಡೆಯಬೇಕಾದರೆ ಕ್ಷೇತ್ರದ ಆಡಳಿತ ಮಂಡಳಿಯ ಜತೆ ಸಹಕಾರ ದೊಡ್ಡದು ಎಂದು ಜನಾರ್ದನ ಪೂಜಾರಿಯವರು ತಮ್ಮ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

3 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago