ಸಾಗರ : ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ : ಆರೋಪಿ ಸಮೀರ್ ಬಂಧನ – Vishwanews24
ಸಾಗರ : ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ : ಆರೋಪಿ ಸಮೀರ್ ಬಂಧನ
ಸಾಗರ : ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣ ಸಂಬಂಧ ಸಾಗರ ಪೊಲೀಸರು ಆರೋಪಿ ಸಮೀರ್ ನನ್ನು ಬಂಧಿಸಿದ್ದಾರೆ.
ಸೋಮವಾರ ಸಾಗರ ಪಟ್ಟಣ ಬಿ.ಎಚ್ ರಸ್ತೆಯಲ್ಲಿ ನೆಹರು ನಗರ ನಿವಾಸಿ ಸುನೀಲ್ ಎಂಬಾತ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಮಚ್ಚಿನಿಂದ ಹಲ್ಲೆ ನಡೆಸಲು ಯತ್ನಿಸಲಾಗಿದೆ.
ಕಿಡಿಗೇಡಿಗಳ ಈ ಕೃತ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಆರೋಪಿ ಸಮೀರ್ ನನ್ನು ಬಂಧಿಸಲು ಪೊಲೀಸರು ಮೂರು ವಿಶೇಷ ತಂಡ ರಚಸಿಸಲಾಗಿತ್ತು. ತಡರಾತ್ರಿ ಶಿವಮೊಗ್ಗದಲ್ಲಿ ಆರೋಪಿ ಸಮೀರ್ ನನ್ನು ಬಂಧಿಸಲಾಗಿದೆ. ಘಟನೆಯಿಂದ ಆಕ್ರೋಶಗೊಂಡಿರುವ ಹಿಂದೂಪರ ಸಂಘಟನೆಗಳು ಜನವರಿ 10 ರ ಇಂದು ಸಾಗರ್ ಬಂದ್ ಗೆ ಕರೆ ನೀಡಿವೆ.
ಸುಬ್ರಹ್ಮಣ್ಯ: ಗ್ರಾ.ಪಂ ಸದಸ್ಯೆ ನಾಪತ್ತೆ ಪ್ರಕರಣ – ಪ್ರಿಯಕರನೊಂದಿಗೆ ಠಾಣೆಗೆ ಹಾಜರು – Vishwanews24
