ಬೆಂಗಳೂರು :ನಿಮಗೆ ಸಾಧ್ಯವಾದರೆ ಬಿಜೆಪಿಯ ಬಹುಮತ ಸಾಬೀತುಪಡಿಸಿ ಎಂದು ಸಂಸದೆ ಶೋಭಾ ಕರಂದ್ಲಾಜೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಗೆ ಸವಾಲೊಂದನ್ನು ಹಾಕಿದ್ದು, ಕೇವಲ 105 ಶಾಸಕರಿಂದ ಸರ್ಕಾರ ರಚಿಸಬಹುದು ಎನ್ನುವ ವಿಶ್ವಾಸ ನಿಮಗಿದ್ದರೆ ರಾಜ್ಯಪಾಲರ ಮುಂದೆ ಹಕ್ಕು ಮಂಡಿಸಿ, ಅವರು ಒಪ್ಪಿದರೆ ನಾವಾಗಿಯೇ ಸರ್ಕಾರದಿಂದ ಹೊರಹೋಗುತ್ತೇವೆ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕರ್ನಾಟಕದಲ್ಲಿ 113 ಶಾಸಕರ ಬೆಂಬಲವಿದ್ದರೆ ಯಾರೂ ಬೇಕಾದರೂ ಸರ್ಕಾರ ರಚನೆ ಮಾಡಬಹುದು. ಒಂದು ವೇಳೆ ರಾಜ್ಯಪಾಲರು ನಿಮ್ಮ ಹಕ್ಕು ಮಂಡನೆಯನ್ನು ಒಪ್ಪಿಕೊಂಡರೆ ನಾವಾಗಿಯೇ ಸರ್ಕಾರದಿಂದ ಹೊರಹೋಗುತ್ತೇವೆ. 105 ಕ್ಕಿಂತ 113 ದೊಡ್ಡದು ಎಂಬುದು ನನ್ನ ಅನಿಸಿಕೆ ಎಂದು ಟಾಂಗ್ ನೀಡಿದ್ದಾರೆ.
ಶಾಸಕ ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿ ರಾಜೀನಾಮೆ ವಿಚಾರ ಮೈತ್ರಿ ಸರ್ಕಾರದಲ್ಲಿ ಆತಂಕವನ್ನು ಸೃಷ್ಟಿಸಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ, ಈ ರಾಜೀನಾಮೆಯ ನಾಟಕದ ಸೂತ್ರಧಾರರು ರಾಜ್ಯದ ಬಿಜೆಪಿ ನಾಯಕರು. ಸರ್ಕಾರವನ್ನು ಮುನ್ನಡೆಸಲು ಜನರು ಅವರಿಗೆ ಅವಕಾಶ ಕೊಡಲಿಲ್ಲ. ಹೀಗಾಗಿ, ಅವರು ಹಿಂಬಾಗಿಲ ಮೂಲಕ ಅಧಿಕಾರವನ್ನು ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಲ್ಪವಾದರೂ ಸ್ವಾಭಿಮಾನವಿದ್ದರೆ ಕೊಳಕು ರಾಜಕಾರಣ ಮಾಡುತ್ತಿರುವ ರಾಜ್ಯದ ಬಿಜೆಪಿ ನಾಯಕರಿಗೆ ಸಂವಿಧಾನಬದ್ಧವಾಗಿ ನಡೆದುಕೊಳ್ಳಲು ಸೂಚಿಸಲಿ ಎಂದು ಆಕ್ರೋಶ ಹೊರಹಾಕಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…