ಭೋಪಾಲ್: ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಚುನಾವಣೆ ಸ್ಪರ್ಧೆ ತಡೆಯಲು ಸಾಧ್ಯವಿಲ್ಲ ಎಂದು ರಾಷ್ಟ್ರೀಯ ತನಿಖಾ ದಳದ ವಿಶೇಷ ಕೋರ್ಟ್ ಆದೇಶ ನೀಡಿದೆ.
ಸಾಧ್ವಿ ಚುನಾವಣೆಗೆ ಸ್ಪರ್ಧಿಸುವುದರಿಂದ ನಿರ್ಬಂಧಿಸಬೇಕೆಂದು ಕೋರಿ ಮಾಲೇಗಾಂವ್ ಸ್ಪೋಟದಲ್ಲಿ ಮೃತಪಟ್ಟ ಸಯ್ಯದ್ ಅಜರ್ ತಂದೆ ನಿಸಾರ್ ಅಹ್ಮದ್ ಬಿಲಾಲ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಕೋರ್ಟ್, ಚುನಾವಣೆಯಿಂದ ಸ್ಪರ್ಧಿಸುವುದನ್ನು ತಡೆಯಲು ಕೋರ್ಟ್ಗೆ ಅಧಿಕಾರವಿಲ್ಲ. ಚುನಾವಣಾಧಿಕಾರಿಗಳು ಅದನ್ನು ನಿರ್ಧರಿಸಬೇಕು ಎಂದು ಹೇಳಿದೆ.
ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಜಾಮೀನು ರದ್ದಾದರೂ ಚುನಾವಣಾ ಕಣದಿಂದ ಹಿಂದೆ ಸರಿಯುವುದಿಲ್ಲ ಎಂದು ಸಾಧಿ್ವ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿದ್ದಾರೆ. ಜಾಮೀನು ರದ್ದುಗೊಂಡರೂ ಚುನಾವಣೆಯಿಂದ ಹಿಂದೆ ಸರಿಯಬೇಕೆಂದೇನೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿರುವ ಸಾಧಿ್ವ ಪ್ರಜ್ಞಾ ಸಿಂಗ್ ಠಾಕೂರ್, ಸಾರ್ವಜನಿಕರಿಂದ ಭಿಕ್ಷೆ ಮೂಲಕ ಸಂಗ್ರಹಿಸಿದ 4.40 ಲಕ್ಷ ರೂ. ಮೌಲ್ಯದ ಚರಾಸ್ತಿ ಹೊಂದಿದ್ದೇನೆ. ಸಾರ್ವಜನಿಕರು ನೀಡುವ ಭಿಕ್ಷೆಯೇ ತನ್ನ ಆದಾಯ. ಯಾವುದೇ, ವಾಹನ ಭೂಮಿ ತನ್ನ ಹೆಸರಲ್ಲಿ ಇಲ್ಲ ಎಂದು ಘೋಷಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…