ಭೋಪಾಲ್: ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಚುನಾವಣೆ ಸ್ಪರ್ಧೆ ತಡೆಯಲು ಸಾಧ್ಯವಿಲ್ಲ ಎಂದು ರಾಷ್ಟ್ರೀಯ ತನಿಖಾ ದಳದ ವಿಶೇಷ ಕೋರ್ಟ್ ಆದೇಶ ನೀಡಿದೆ.
ಸಾಧ್ವಿ ಚುನಾವಣೆಗೆ ಸ್ಪರ್ಧಿಸುವುದರಿಂದ ನಿರ್ಬಂಧಿಸಬೇಕೆಂದು ಕೋರಿ ಮಾಲೇಗಾಂವ್ ಸ್ಪೋಟದಲ್ಲಿ ಮೃತಪಟ್ಟ ಸಯ್ಯದ್ ಅಜರ್ ತಂದೆ ನಿಸಾರ್ ಅಹ್ಮದ್ ಬಿಲಾಲ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಕೋರ್ಟ್, ಚುನಾವಣೆಯಿಂದ ಸ್ಪರ್ಧಿಸುವುದನ್ನು ತಡೆಯಲು ಕೋರ್ಟ್ಗೆ ಅಧಿಕಾರವಿಲ್ಲ. ಚುನಾವಣಾಧಿಕಾರಿಗಳು ಅದನ್ನು ನಿರ್ಧರಿಸಬೇಕು ಎಂದು ಹೇಳಿದೆ.
ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಜಾಮೀನು ರದ್ದಾದರೂ ಚುನಾವಣಾ ಕಣದಿಂದ ಹಿಂದೆ ಸರಿಯುವುದಿಲ್ಲ ಎಂದು ಸಾಧಿ್ವ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿದ್ದಾರೆ. ಜಾಮೀನು ರದ್ದುಗೊಂಡರೂ ಚುನಾವಣೆಯಿಂದ ಹಿಂದೆ ಸರಿಯಬೇಕೆಂದೇನೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿರುವ ಸಾಧಿ್ವ ಪ್ರಜ್ಞಾ ಸಿಂಗ್ ಠಾಕೂರ್, ಸಾರ್ವಜನಿಕರಿಂದ ಭಿಕ್ಷೆ ಮೂಲಕ ಸಂಗ್ರಹಿಸಿದ 4.40 ಲಕ್ಷ ರೂ. ಮೌಲ್ಯದ ಚರಾಸ್ತಿ ಹೊಂದಿದ್ದೇನೆ. ಸಾರ್ವಜನಿಕರು ನೀಡುವ ಭಿಕ್ಷೆಯೇ ತನ್ನ ಆದಾಯ. ಯಾವುದೇ, ವಾಹನ ಭೂಮಿ ತನ್ನ ಹೆಸರಲ್ಲಿ ಇಲ್ಲ ಎಂದು ಘೋಷಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…