ಅಂತಾರಾಷ್ಟ್ರೀಯ ನ್ಯೂಸ್

ಸಾನಿಯಾ ಮಿರ್ಜಾ ಜತೆಗಿನ ದಾಂಪತ್ಯ ಜೀವನ ಅಂತ್ಯ : ಪಾಕ್‌ ಜನಪ್ರಿಯ ನಟಿ ಸನಾ ಜಾವೇದ್ ಜತೆ ಶೋಯೆಬ್‌ ಮಲಿಕ್ ಎರಡನೇ ಮದುವೆ – vishwanews24

ಸಾನಿಯಾ ಮಿರ್ಜಾ ಜತೆಗಿನ ದಾಂಪತ್ಯ ಜೀವನ ಅಂತ್ಯ : ಪಾಕ್‌ ಜನಪ್ರಿಯ ನಟಿ ಸನಾ ಜಾವೇದ್ ಜತೆ ಶೋಯೆಬ್‌ ಮಲಿಕ್ ಎರಡನೇ ಮದುವೆ

ಕರಾಚಿ: ಭಾರತದ ಮಾಜಿ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ – ಪಾಕ್‌ ಮಾಜಿ ಕ್ರಿಕೆಟಿಗ ಶೋಯೆಬ್‌ ಮಲಿಕ್ ನಡುವಿನ ದಾಂಪತ್ಯ ಜೀವನದ ಬೇರ್ಪಡುವಿಕೆಯ ವದಂತಿಗಳ ನಡುವೆಯೇ ಶೋಯೆಬ್‌ ಮಲಿಕ್‌ ಎರಡನೇ ಮದುವೆಯಾಗಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಶೋಯೆಬ್ ಮಲಿಕ್ ಜನಪ್ರಿಯ ಪಾಕಿಸ್ತಾನಿ ನಟಿ ಸನಾ ಜಾವೇದ್ ಅವರನ್ನು ವಿವಾಹವಾ ಗಿದ್ದಾರೆ. ಶನಿವಾರ, ಜನವರಿ 20 ರಂದು ನಡೆದ ತಮ್ಮ ವಿವಾಹ ಸಮಾರಂಭದ ಫೋಟೋಗಳನ್ನು ಶೋಯೆಬ್ ಮಲಿಕ್ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಕಳೆದ ಕೆಲ ಸಮಯದಿಂದ ಶೋಯೆಬ್‌ ಮಲಿಕ್‌ ಹಾಗೂ ಸಾನಿಯಾ ಮಿರ್ಜಾ ನಡುವಿನ ದಾಂಪತ್ಯ ಜೀವನದಲ್ಲಿ ಯಾವುದು ಸರಿಯಿಲ್ಲ ಎನ್ನುವುದರ ಬಗ್ಗೆ ಅನೇಕ ವಿಚಾರಗಳು ಹರಿದಾಡುತ್ತಿತ್ತು. ಆದರೆ ಕಳೆದ ವರ್ಷ ಇಬ್ಬರು ಜೊತೆಯಾಗಿ ಮಗನ ಹುಟ್ಟುಹಬ್ಬವನ್ನು ದುಬೈನಲ್ಲಿ ಆಚರಿಸಿಕೊಂಡಿದ್ದರು. ಇತ್ತೀಚೆಗೆ ಸಾನಿಯಾ ಮಿರ್ಜಾ ವಿಚ್ಚೇದನದ ಬಗ್ಗೆ ಒಂದು ಗೊಂದಲಕಾರಿ ಪೋಸ್ಟ್‌ ಹಂಚಿಕೊಂಡಿದ್ದರು.

ಇಬ್ಬರು ಅಧಿಕೃತವಾಗಿ ವಿಚ್ಚೇದನ ಪಡೆದ ಬಗ್ಗೆ ಬಹಿರಂಗವಾಗಿ ಹೇಳಿಲ್ಲ. ಈ ನಡುವೆಯೇ ಶೋಯೆಬ್‌ ಮಲಿಕ್‌ ಪಾಕಿಸ್ತಾನದ ಜನಪ್ರಿಯ ನಟಿ ಸನಾ ಜಾವೇದ್‌ ಅವರನ್ನು ವಿವಾಹವಾಗಿದ್ದಾರೆ. ಆ ಮೂಲಕ ಸಾನಿಯಾ ಮಿರ್ಜಾ ಅವರೊಂದಿಗಿನ ಸಂಬಂಧವನ್ನು ಅಂತ್ಯವಾಗಿಸಿ, ಹೊಸ ಜೀವನವನ್ನು ಆರಂಭಿಸಿದ್ದಾರೆ.

ಶೋಯೆಬ್ ಮಲಿಕ್ ಮತ್ತು ಸಾನಿಯಾ ಮಿರ್ಜಾ 2010 ರಲ್ಲಿ ಭಾರತದ ಹೈದರಾಬಾದ್‌ನಲ್ಲಿ ಸಾಂಪ್ರದಾಯಿಕ ಮುಸ್ಲಿಂ ಸಮಾರಂಭದಲ್ಲಿ ವಿವಾಹವಾಗಿದ್ದರು. ನಂತರ ಪಾಕಿಸ್ತಾನದ ಸಿಯಾಲ್‌ಕೋಟ್‌ನಲ್ಲಿ ವಲಿಮಾ (ರಿಸೆಪ್ಷನ್) ಸಮಾರಂಭ ನೆರವೇರಿತ್ತು. ದಂಪತಿ 2018 ರಲ್ಲಿ ಇಜಾನ್ ಎಂಬ ಗಂಡು ಮಗುವಿಗೆ ತಂದೆ – ತಾಯಿ ಆಗಿದ್ದರು.

ಈ ಹಿಂದೆ ಸನಾ ಜಾವೇದ್‌ ಉಮೈರ್ ಜಸ್ವಾಲ್ ಎಂಬವವರನ್ನು ವಿವಾಹವಾಗಿದ್ದರು.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

19 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

20 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

21 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

22 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

22 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

22 hours ago