ಅಂತಾರಾಷ್ಟ್ರೀಯ ನ್ಯೂಸ್

ಸಾನಿಯಾ ಮಿರ್ಜಾ ಜತೆಗಿನ ದಾಂಪತ್ಯ ಜೀವನ ಅಂತ್ಯ : ಪಾಕ್‌ ಜನಪ್ರಿಯ ನಟಿ ಸನಾ ಜಾವೇದ್ ಜತೆ ಶೋಯೆಬ್‌ ಮಲಿಕ್ ಎರಡನೇ ಮದುವೆ – vishwanews24

ಸಾನಿಯಾ ಮಿರ್ಜಾ ಜತೆಗಿನ ದಾಂಪತ್ಯ ಜೀವನ ಅಂತ್ಯ : ಪಾಕ್‌ ಜನಪ್ರಿಯ ನಟಿ ಸನಾ ಜಾವೇದ್ ಜತೆ ಶೋಯೆಬ್‌ ಮಲಿಕ್ ಎರಡನೇ ಮದುವೆ

ಕರಾಚಿ: ಭಾರತದ ಮಾಜಿ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ – ಪಾಕ್‌ ಮಾಜಿ ಕ್ರಿಕೆಟಿಗ ಶೋಯೆಬ್‌ ಮಲಿಕ್ ನಡುವಿನ ದಾಂಪತ್ಯ ಜೀವನದ ಬೇರ್ಪಡುವಿಕೆಯ ವದಂತಿಗಳ ನಡುವೆಯೇ ಶೋಯೆಬ್‌ ಮಲಿಕ್‌ ಎರಡನೇ ಮದುವೆಯಾಗಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಶೋಯೆಬ್ ಮಲಿಕ್ ಜನಪ್ರಿಯ ಪಾಕಿಸ್ತಾನಿ ನಟಿ ಸನಾ ಜಾವೇದ್ ಅವರನ್ನು ವಿವಾಹವಾ ಗಿದ್ದಾರೆ. ಶನಿವಾರ, ಜನವರಿ 20 ರಂದು ನಡೆದ ತಮ್ಮ ವಿವಾಹ ಸಮಾರಂಭದ ಫೋಟೋಗಳನ್ನು ಶೋಯೆಬ್ ಮಲಿಕ್ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಕಳೆದ ಕೆಲ ಸಮಯದಿಂದ ಶೋಯೆಬ್‌ ಮಲಿಕ್‌ ಹಾಗೂ ಸಾನಿಯಾ ಮಿರ್ಜಾ ನಡುವಿನ ದಾಂಪತ್ಯ ಜೀವನದಲ್ಲಿ ಯಾವುದು ಸರಿಯಿಲ್ಲ ಎನ್ನುವುದರ ಬಗ್ಗೆ ಅನೇಕ ವಿಚಾರಗಳು ಹರಿದಾಡುತ್ತಿತ್ತು. ಆದರೆ ಕಳೆದ ವರ್ಷ ಇಬ್ಬರು ಜೊತೆಯಾಗಿ ಮಗನ ಹುಟ್ಟುಹಬ್ಬವನ್ನು ದುಬೈನಲ್ಲಿ ಆಚರಿಸಿಕೊಂಡಿದ್ದರು. ಇತ್ತೀಚೆಗೆ ಸಾನಿಯಾ ಮಿರ್ಜಾ ವಿಚ್ಚೇದನದ ಬಗ್ಗೆ ಒಂದು ಗೊಂದಲಕಾರಿ ಪೋಸ್ಟ್‌ ಹಂಚಿಕೊಂಡಿದ್ದರು.

ಇಬ್ಬರು ಅಧಿಕೃತವಾಗಿ ವಿಚ್ಚೇದನ ಪಡೆದ ಬಗ್ಗೆ ಬಹಿರಂಗವಾಗಿ ಹೇಳಿಲ್ಲ. ಈ ನಡುವೆಯೇ ಶೋಯೆಬ್‌ ಮಲಿಕ್‌ ಪಾಕಿಸ್ತಾನದ ಜನಪ್ರಿಯ ನಟಿ ಸನಾ ಜಾವೇದ್‌ ಅವರನ್ನು ವಿವಾಹವಾಗಿದ್ದಾರೆ. ಆ ಮೂಲಕ ಸಾನಿಯಾ ಮಿರ್ಜಾ ಅವರೊಂದಿಗಿನ ಸಂಬಂಧವನ್ನು ಅಂತ್ಯವಾಗಿಸಿ, ಹೊಸ ಜೀವನವನ್ನು ಆರಂಭಿಸಿದ್ದಾರೆ.

ಶೋಯೆಬ್ ಮಲಿಕ್ ಮತ್ತು ಸಾನಿಯಾ ಮಿರ್ಜಾ 2010 ರಲ್ಲಿ ಭಾರತದ ಹೈದರಾಬಾದ್‌ನಲ್ಲಿ ಸಾಂಪ್ರದಾಯಿಕ ಮುಸ್ಲಿಂ ಸಮಾರಂಭದಲ್ಲಿ ವಿವಾಹವಾಗಿದ್ದರು. ನಂತರ ಪಾಕಿಸ್ತಾನದ ಸಿಯಾಲ್‌ಕೋಟ್‌ನಲ್ಲಿ ವಲಿಮಾ (ರಿಸೆಪ್ಷನ್) ಸಮಾರಂಭ ನೆರವೇರಿತ್ತು. ದಂಪತಿ 2018 ರಲ್ಲಿ ಇಜಾನ್ ಎಂಬ ಗಂಡು ಮಗುವಿಗೆ ತಂದೆ – ತಾಯಿ ಆಗಿದ್ದರು.

ಈ ಹಿಂದೆ ಸನಾ ಜಾವೇದ್‌ ಉಮೈರ್ ಜಸ್ವಾಲ್ ಎಂಬವವರನ್ನು ವಿವಾಹವಾಗಿದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

16 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

18 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

18 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

19 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

19 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

19 hours ago