ನವದೆಹಲಿ: 24 ವರ್ಷಗಳ ಹಿಂದಿನ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ನರ್ಮದಾ ಬಚಾವೋ ಆಂದೋಲನದ ನಾಯಕಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರನ್ನು ಇಂದು ಬಂಧಿಸಲಾಗಿದೆ.
ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಕುಮಾರ್ ಸಕ್ಷೇನಾ ಅವರು 24 ವರ್ಷಗಳ ಹಿಂದೆ ಹೂಡಿರುವ ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ಪ್ರೊಬೇಷನ್ ಬಾಂಡ್ಗಳನ್ನು ಸಲ್ಲಿಸದ ಕಾರಣ ಪಾಟ್ಕರ್ ವಿರುದ್ಧ ದೆಹಲಿ ನ್ಯಾಯಾಲಯ ಬುಧವಾರ (ಏ.23) ಜಾಮೀನು ರಹಿತ ವಾರಂಟ್ ಹೊರಡಿಸಿತ್ತು. ಈ ಹಿನ್ನೆಲೆ ಆಗ್ನೆಯ ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿರುವ ಪಾಟ್ಕರ್ ಅವರ ನಿವಾಸಕ್ಕೆ ಇಂದು ಬೆಳಿಗ್ಗೆ ತೆರಳಿದ ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
2000ನೇ ಇಸವಿಯಲ್ಲಿ ದಾಖಲಾಗಿದ್ದ ಮಾನಹಾನಿ ಪ್ರಕರಣದಲ್ಲಿ ಪಾಟ್ಕರ್ ಅಪರಾಧಿ ಎಂದು ತೀರ್ಪು ನೀಡಿದ್ದ ದೆಹಲಿ ನ್ಯಾಯಾಲಯ 5 ತಿಂಗಳ ಜೈಲು ಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ವಿಶಾಲ್ ಸಿಂಗ್, ಪಾಟ್ಕರ್ ಅವರ ವಯಸ್ಸು, ಅಪರಾಧದ ತೀವ್ರತೆ ಮತ್ತು ಅವರು ಈ ಹಿಂದೆ ಯಾವುದೇ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗದೇ ಇರುವುದನ್ನು ಪರಿಗಣಿಸಿ ಏಪ್ರಿಲ್ ೮ರಂದು ಪ್ರೊಬೇಷನ್ ಅವಧಿ ವಿಧಿಸಿ ಆದೇಶ ಹೊರಡಿಸಿದ್ದರು.
ಇನ್ನು ಈ ಪ್ರೊಬೇಷನ್ ಅವಧಿಯಲ್ಲಿ ಅಪರಾಧಿಗಳನ್ನು ಜೈಲಿನಲ್ಲಿ ಇರಿಸದೆ, ಅವರ ದೈನಂದಿನ ಚಟುವಟಿಕೆಯ ಮೇಲೆ ನಿಗಾ ವಹಿಸಲಾಗುತ್ತದೆ. ಆದೇಶದ ಅನುಸಾರ, ಏಪ್ರಿಲ್ 23ರೊಳಗೆ ಪ್ರೊಬೇಷನ್ ಬಾಂಡ್ಗಳನ್ನು ಸಲ್ಲಿಸುವಂತೆ ಪಾಟ್ಕರ್ ಅವರಿಗೆ ಸೂಚನೆ ನೀಡಲಾಗಿತ್ತು. ಆದರೆ ಯಾವುದೇ ದಾಖಲೆಗಳನ್ನು ಸಲ್ಲಿಸದ ಹಿನ್ನಲೆ, ಕೋರ್ಟ್ ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…