ಮಂಗಳೂರು: ಪೌರತ್ವ ಕಾಯ್ಧೆ ಬಳಿಕ ಸಾಮಾಜಿಕ ಜಾಲತಾಲದಲ್ಲಿ ಸುಳ್ಳು ಸುದ್ದಿ ಸಹಿತ ತರಹೇವಾರಿ ಸುದ್ದಿಗಳು ಹಬ್ಬುತ್ತಿದ್ದು ಇದರ ವಿರುದ್ದ ನಗರ ಪೊಲೀಸ್ ಆಯುಕ್ತ ಡಾ.ಪಿ ಎಸ್ ಹರ್ಷ ಎಚ್ಚರಿಕೆ ನೀಡಿದ್ದಾರೆ.
ಡಿಜಿಟಲ್ ವಿಧಾನಗಳಾದ ಸಾಮಾಜಿಕ ಜಾಲತಾಣಗಳ ಮೂಲಕ ಕೋಮು ದ್ವೇಷವನ್ನು ಹರಡುವುದರ ವಿರುದ್ಧ ಪೊಲೀಸ್ ನೋಟಿಸ್ ಜಾರಿಗೊಳಿಸಲಾಗಿದೆ. ಹೀಗಾಗಿ ವಾಟ್ಸಾಪ್, ಟೆಲಿಗ್ರಾಂ , ಫೇಸ್ ಬುಕ್ ಮುಂತಾದ ಸಾಮಾಜಿಕ ಜಾಲತಾಣದಲ್ಲಿ ಕೋಮು ಸೂಕ್ಷ್ಮ ಸಂದೇಶಗಳನ್ನು ಹರಡಿದರೆ ಅಂತಹ ಗ್ರೂಪ್ ಅಡ್ಮಿನ್’ಗಳ ವಿರುದ್ದ ಎಫ್ ಐ ಆರ್ ದಾಖಲಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಡಾ.ಪಿ ಎಸ್ ಹರ್ಷ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ನೋಟೀಸ್ ಜಾರಿಗೊಳಿಸಿದ್ದು, ” ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಧಾರ್ಮಿಕ ಭಾವನೆಗೆ ದಕ್ಕೆ ತರುವಂತಹ ಸಂದೇಶಗಳು ಕೆಲವು ಮೊಬೈಲ್ ಸಂಖ್ಯೆಯಿಂದ ಹರಿದಾಡುತ್ತಿದ್ದು, ಕಂಡುಬಂದಿರುತ್ತದೆ. ಇಂತಹ ಸಂದೇಶಗಳ ಮೇಲೆ ಪೊಲೀಸ್ ಇಲಾಖೆಯು ತೀವ್ರ ನಿಗಾವಹಿಸಿರುತ್ತದೆ. ನೀವು ಇಂತಹ ಸಂದೇಶಗಳನ್ನು ರವಾನಿಸಿದಲ್ಲಿ ಕಲಂ 153(ಎ), 295 ಭಾರತೀಯ ದಂಡ ಸಂಹಿತೆ ಅಡಿಯಲ್ಲಿ ಗ್ರೂಪ್ ಅಡ್ಮಿನ್ ಗಳನ್ನು ನೇರವಾಗಿ ಹೊಣೆಗಾರಿಕೆ ಮಾಡಿ ಅವರ ಮೇಲೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ” ಎಂದು ಉಲ್ಲೇಖಿಸಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…