ಬೆಂಗಳೂರು: ಮುರುಡೇಶ್ವರದಲ್ಲಿ ನಾಲ್ವರು ವಿದ್ಯಾರ್ಥಿನಿಯರು ನೀರು ಪಾಲಾದ ನಂತರ ಎಲ್ಲ ಶಾಲೆಗಳು ಪ್ರವಾಸ ರದ್ದುಗೊಳಿಸಬೇಕೆಂದು ಆದೇಶಿಸಲಾಗಿದೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದಕ್ಕೆ ಇದೀಗ ಶಿಕ್ಷಣ ಇಲಾಖೆ ಸ್ಪಷ್ಟನೆ ನೀಡಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಶಾಲಾ ಶಿಕ್ಷಣ ಇಲಾಖೆಯ ಶಾಲೆಗಳ ವತಿಯಿಂದ 2024-25 ನೇ ಸಾಲಿನಲ್ಲಿ ಪ್ರಸ್ತುತ ಹಮ್ಮಿಕೊಳ್ಳಲಾಗುತ್ತಿರುವ ಶೈಕ್ಷಣಿಕ ಪ್ರವಾಸ ಮಾಡದಂತೆ, ಹಮ್ಮಿಕೊಂಡಿದ್ದಲ್ಲಿ ಕೂಡಲೇ ಹಿಂತಿರುಗಿ ಬರುವಂತೆ ಯಾವುದೇ ಸೂಚನೆ /ನಿರ್ದೇಶನ ನೀಡಿರುವುದಿಲ್ಲ ಎಂದು ಸುತ್ತೋಲೆ ಸ್ಪಷ್ಟ ಪಡಿಸಿದೆ.
ಮುಂದುವರೆದು ಶಾಲಾ ಶಿಕ್ಷಣ ಇಲಾಖೆಯ ಶಾಲೆಗಳ ವತಿಯಿಂದ 2024-25 ನೇ ಸಾಲಿನಲ್ಲಿ ಪ್ರಸ್ತುತ ಹಮ್ಮಿಕೊಳ್ಳಲಾಗುತ್ತಿರುವ ಶೈಕ್ಷಣಿಕ ಪುವಾಸಗಳನ್ನು ಉಲ್ಲೇಖ 2 ಮತ್ತು 3 ರಲ್ಲಿ ನೀಡಿರುವ ಸೂಚನೆಗಳು ಮತ್ತು ನಿರ್ದೇಶನಗಳಂತೆ ಹಾಗೂ ಈ ಕೆಳಕಂಡ ಅಂಶಗಳನ್ನೊಳಗೊಂಡಂತೆ ಡಿಸೆಂಬರ್ 2024 ಮಾಹೆಯೊಳಗೆ ಪೂರ್ಣಗೊಳಿಸುವುದು.
ಪ್ರವಾಸವನ್ನು ವ್ಯವಸ್ಥಿತವಾಗಿ ಕೈಗೊಳ್ಳಲು ಪೂರ್ವಭಾವಿಯಾಗಿ ಯೋಜನೆ ಯನ್ನು ಕೈಗೊಳ್ಳುವುದು ಹಾಗೂ ಅದರಂತೆ ಪ್ರವಾಸವನ್ನು ಕೈಗೊಳ್ಳುವುದು.
ಪ್ರವಾಸದ ಸಂಧರ್ಭದಲ್ಲಿ ಮಕ್ಕಳನ್ನು ಯಾವುದೇ ಅಪಾಯಕಾರಿ ಸ್ಥಳಗಳಿಗೆ ಕರೆದುಕೊಂಡು ಹೋಗಬಾರದು, ಹಾಗೂ ಎಲ್ಲ ಸ್ಥಳಗಳಲ್ಲಿ ಮತ್ತು ಸಂದರ್ಭಗಳಲ್ಲಿ ಪ್ರವಾಸದ ಉಸ್ತುವಾರಿ ವಹಿಸಿದ ಸಿಬ್ಬಂದಿಯವರು ವಿದ್ಯಾರ್ಥಿಗಳ ಜೊತೆ ಇದ್ದು, ವಿದ್ಯಾರ್ಥಿಗಳ ಸುರಕ್ಷತೆ ಕುರಿತು ಎಲ್ಲ ಅವಶ್ಯ
ಕ್ರಮಗಳನ್ನು ಕೈಗೊಳ್ಳುವುದು. ಪ್ರವಾಸದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಉಂಟಾಗುವ ಯಾವುದೇ ಅವಘಡಕ್ಕೆ/ಹಾನಿಗೆ ಸಂಭಂಧಿಸಿದ ಶಾಲಾ ಮುಖ್ಯಸ್ಥರು ಮತ್ತು ಪ್ರವಾಸದ ಉಸ್ತುವಾರಿ ವಹಿಸಿದ ಸಿಬ್ಬಂದಿಯವರೇ ಜವಾಬ್ದಾರರಾಗಿರುತ್ತಾರೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…